<p><strong>ನವದೆಹಲಿ</strong>: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಆಪ್ತ ಸಹಾಯಕರಿಗೆ ಸಿಬಿಐ ಭಾನುವಾರ ಸೂಚಿಸಿದೆ.</p>.<p>ಹಿರಿಯ ಐಪಿಎಸ್ ಅಧಿಕಾರಿ ಮತ್ತು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ದೇಶಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಬಾಂಬೆ ಹೈಕೋರ್ಟ್ ಈ ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು.</p>.<p>ಮಂಗಳವಾರದಿಂದ ತನಿಖೆ ಆರಂಭಿಸಿರುವ ಸಿಬಿಐ, ದೆಹಲಿಯಿಂದ ಅಧಿಕಾರಿಗಳ ತಂಡವನ್ನು ಮುಂಬೈಗೆ ಕಳುಹಿಸಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೇಶಮುಖ್ ಅವರ ಆಪ್ತ ಸಹಾಯಕರಾದ ಸಂಜೀವ್ ಪಾಲಾಂದೆ ಮತ್ತು ಕುಂದನ್ ಅವರಿಗೆ ಸೂಚಿಸಲಾಗಿದೆ.</p>.<p>ಮುಂಬೈನಲ್ಲಿನ ಬಾರ್ ಮತ್ತು ರೆಸ್ಟೊರೆಂಟ್ಗಳಿಂದ ಪ್ರತಿ ತಿಂಗಳು ₹100 ಕೋಟಿ ವಸೂಲಿ ಮಾಡುವಂತೆ ದೇಶಮುಖ್ ಅವರು ಸದ್ಯ ಬಂಧನದಲ್ಲಿರುವ ಸಚಿನ್ ವಾಜೆಗೆ ಸೂಚಿಸಿದ್ದ ಸಂದರ್ಭದಲ್ಲಿ ಪಾಲಾಂದೆ ಹಾಜರಿದ್ದರು ಎಂದು ಪರಮ್ ಬೀರ್ ಸಿಂಗ್ ಅವರು ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಿದ್ದರು.</p>.<p>ಇದೇ ರೀತಿಯ ಒಂದು ವಿಷಯದ ಚರ್ಚೆ ಸಂದರ್ಭದಲ್ಲಿ ಕುಂದನ್ ಸಹ ಹಾಜರಿದ್ದರು ಎಂದು ವಾಜೆ ಹೇಳಿಕೆ ನೀಡಿದ್ದಾರೆ.</p>.<p>ಸಿಬಿಐ ಈಗಾಗಲೇ ವಾಜೆ, ಪರಮ್ ಬೀರ್ ಸಿಂಗ್ ಮತ್ತು ಇತರ ಅಧಿಕಾರಿಗಳ ವಿಚಾರಣೆಯನ್ನು ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಆಪ್ತ ಸಹಾಯಕರಿಗೆ ಸಿಬಿಐ ಭಾನುವಾರ ಸೂಚಿಸಿದೆ.</p>.<p>ಹಿರಿಯ ಐಪಿಎಸ್ ಅಧಿಕಾರಿ ಮತ್ತು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ದೇಶಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಬಾಂಬೆ ಹೈಕೋರ್ಟ್ ಈ ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು.</p>.<p>ಮಂಗಳವಾರದಿಂದ ತನಿಖೆ ಆರಂಭಿಸಿರುವ ಸಿಬಿಐ, ದೆಹಲಿಯಿಂದ ಅಧಿಕಾರಿಗಳ ತಂಡವನ್ನು ಮುಂಬೈಗೆ ಕಳುಹಿಸಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೇಶಮುಖ್ ಅವರ ಆಪ್ತ ಸಹಾಯಕರಾದ ಸಂಜೀವ್ ಪಾಲಾಂದೆ ಮತ್ತು ಕುಂದನ್ ಅವರಿಗೆ ಸೂಚಿಸಲಾಗಿದೆ.</p>.<p>ಮುಂಬೈನಲ್ಲಿನ ಬಾರ್ ಮತ್ತು ರೆಸ್ಟೊರೆಂಟ್ಗಳಿಂದ ಪ್ರತಿ ತಿಂಗಳು ₹100 ಕೋಟಿ ವಸೂಲಿ ಮಾಡುವಂತೆ ದೇಶಮುಖ್ ಅವರು ಸದ್ಯ ಬಂಧನದಲ್ಲಿರುವ ಸಚಿನ್ ವಾಜೆಗೆ ಸೂಚಿಸಿದ್ದ ಸಂದರ್ಭದಲ್ಲಿ ಪಾಲಾಂದೆ ಹಾಜರಿದ್ದರು ಎಂದು ಪರಮ್ ಬೀರ್ ಸಿಂಗ್ ಅವರು ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಿದ್ದರು.</p>.<p>ಇದೇ ರೀತಿಯ ಒಂದು ವಿಷಯದ ಚರ್ಚೆ ಸಂದರ್ಭದಲ್ಲಿ ಕುಂದನ್ ಸಹ ಹಾಜರಿದ್ದರು ಎಂದು ವಾಜೆ ಹೇಳಿಕೆ ನೀಡಿದ್ದಾರೆ.</p>.<p>ಸಿಬಿಐ ಈಗಾಗಲೇ ವಾಜೆ, ಪರಮ್ ಬೀರ್ ಸಿಂಗ್ ಮತ್ತು ಇತರ ಅಧಿಕಾರಿಗಳ ವಿಚಾರಣೆಯನ್ನು ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>