<p><strong>ಲಖನೌ</strong>: ಹಲವು ಮಕ್ಕಳ ಸಾವಿಗೆ ಕಾರಣವಾಗಿರುವ ‘ಕೋಲ್ಡ್ರಿಫ್’ ಎಂಬ ಕೆಮ್ಮಿನ ಸಿರಪ್ನ ಕಲಬೆರಕೆಗೆ ಸಂಬಂಧಿಸಿದಂತೆ ವಜಾಗೊಂಡಿರುವ ಪೊಲೀಸ್ ಕಾನ್ಸ್ಟೆಬಲ್ಗೆ ಸೇರಿದ ಆಸ್ತಿಗಳ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಐಷರಾಮಿ ಬಂಗಲೆಯ ವೈಭವ ಕಂಡು ದಿಗ್ಭ್ರಮೆಗೊಂಡಿದ್ದಾರೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ವಿಶೇಷ ಟಾಸ್ಕ್ಪೋರ್ಸ್ ತಂಡವು ಕಾನ್ಸ್ಟೆಬಲ್ ಅಲೋಕ್ ಪ್ರತಾಪ್ ಸಿಂಗ್ ಕಳೆದ ತಿಂಗಳು ಬಂಧಿಸಿತ್ತು. ಡಿಸೆಂಬರ್ 2ರಂದು ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿತ್ತು.</p>.<p>‘ಲಖನೌ– ಸುಲ್ತಾನ್ಪುರ ಹೆದ್ದಾರಿ ಅಹಮೌನಲ್ಲಿ 7 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಈ ಬಂಗಲೆಯಿದ್ದು, ಯುರೋಪಿಯನ್ ಶೈಲಿಯ ಒಳಾಂಗಣ, ಸುರುಳಿಯಾಕಾರಾದ ಮೆಟ್ಟಿಲುಗಳು, ವಿಂಟೇಜ್ ದೀಪ ಹಾಗೂ ಲಕ್ಸುರಿ ವಸ್ತುಗಳು ಸಿಕ್ಕಿವೆ. ಮನೆ ನಿರ್ಮಾಣಕ್ಕೆ ಸುಮಾರು ₹5 ಕೋಟಿ ವೆಚ್ಚವಾಗಿರುವ ಸಾಧ್ಯತೆಯಿದ್ದು, ಒಳಾಂಗಣದ ವಿನ್ಯಾಸಕ್ಕೆ ₹1.5 ಕೋಟಿಯಿಂದ ₹2 ಕೋಟಿ ಖರ್ಚು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ನಿವೇಶನ ಮೌಲ್ಯವು ಇದರಲ್ಲಿ ಸೇರಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಇದಲ್ಲದೇ, ಪ್ರದಾ, ಗುಸ್ಸಿ ಕಂಪನಿಗಳ ದುಬಾರಿ ಹ್ಯಾಂಡ್ಬ್ಯಾಗ್ಗಳು, ರ್ಯಾಡೊ ವಾಚ್, ದುಬಾರಿ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಕಲಬೆರಕೆ ಕೆಮ್ಮಿನ ಸಿರಪ್ ಸೇವಿಸಿ 24 ಮಕ್ಕಳು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಹಲವು ಮಕ್ಕಳ ಸಾವಿಗೆ ಕಾರಣವಾಗಿರುವ ‘ಕೋಲ್ಡ್ರಿಫ್’ ಎಂಬ ಕೆಮ್ಮಿನ ಸಿರಪ್ನ ಕಲಬೆರಕೆಗೆ ಸಂಬಂಧಿಸಿದಂತೆ ವಜಾಗೊಂಡಿರುವ ಪೊಲೀಸ್ ಕಾನ್ಸ್ಟೆಬಲ್ಗೆ ಸೇರಿದ ಆಸ್ತಿಗಳ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಐಷರಾಮಿ ಬಂಗಲೆಯ ವೈಭವ ಕಂಡು ದಿಗ್ಭ್ರಮೆಗೊಂಡಿದ್ದಾರೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ವಿಶೇಷ ಟಾಸ್ಕ್ಪೋರ್ಸ್ ತಂಡವು ಕಾನ್ಸ್ಟೆಬಲ್ ಅಲೋಕ್ ಪ್ರತಾಪ್ ಸಿಂಗ್ ಕಳೆದ ತಿಂಗಳು ಬಂಧಿಸಿತ್ತು. ಡಿಸೆಂಬರ್ 2ರಂದು ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿತ್ತು.</p>.<p>‘ಲಖನೌ– ಸುಲ್ತಾನ್ಪುರ ಹೆದ್ದಾರಿ ಅಹಮೌನಲ್ಲಿ 7 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಈ ಬಂಗಲೆಯಿದ್ದು, ಯುರೋಪಿಯನ್ ಶೈಲಿಯ ಒಳಾಂಗಣ, ಸುರುಳಿಯಾಕಾರಾದ ಮೆಟ್ಟಿಲುಗಳು, ವಿಂಟೇಜ್ ದೀಪ ಹಾಗೂ ಲಕ್ಸುರಿ ವಸ್ತುಗಳು ಸಿಕ್ಕಿವೆ. ಮನೆ ನಿರ್ಮಾಣಕ್ಕೆ ಸುಮಾರು ₹5 ಕೋಟಿ ವೆಚ್ಚವಾಗಿರುವ ಸಾಧ್ಯತೆಯಿದ್ದು, ಒಳಾಂಗಣದ ವಿನ್ಯಾಸಕ್ಕೆ ₹1.5 ಕೋಟಿಯಿಂದ ₹2 ಕೋಟಿ ಖರ್ಚು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ನಿವೇಶನ ಮೌಲ್ಯವು ಇದರಲ್ಲಿ ಸೇರಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಇದಲ್ಲದೇ, ಪ್ರದಾ, ಗುಸ್ಸಿ ಕಂಪನಿಗಳ ದುಬಾರಿ ಹ್ಯಾಂಡ್ಬ್ಯಾಗ್ಗಳು, ರ್ಯಾಡೊ ವಾಚ್, ದುಬಾರಿ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಕಲಬೆರಕೆ ಕೆಮ್ಮಿನ ಸಿರಪ್ ಸೇವಿಸಿ 24 ಮಕ್ಕಳು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>