<p><strong>ಚೆನ್ನೈ</strong>: ದೇಶದ ಕೆಲವು ರಾಜ್ಯಗಳಲ್ಲಿ ಮಕ್ಕಳ ಸರಣಿ ಸಾವಿಗೆ ಕಾರಣವಾಗಿರುವ ಕೆಮ್ಮಿನ ಸಿರಪ್ 'ಕೋಲ್ಡ್ರಿಫ್' (Coldrif) ತಯಾರಕ ಕಂಪನಿ, ತಮಿಳುನಾಡು ಮೂಲದ ಸ್ರೆಸನ್ ಫಾರ್ಮಾದ ಉತ್ಪಾದನಾ ಪರವಾನಗಿಯನ್ನು ರದ್ದುಮಾಡಲಾಗಿದೆ. ಕಂಪನಿಯನ್ನು ಬಂದ್ ಮಾಡುವಂತೆ ಆದೇಶಿಸಿರುವುದಾಗಿ ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ.</p><p>ಸಿರಪ್ನಲ್ಲಿ ವಿಷಕಾರಿ ರಾಸಾಯನಿಕ'ಡೈಥಿಲೀನ್ ಗ್ಲೈಕಾಲ್'(Diethylene glycol–DEG) ಪ್ರಮಾಣ ಶೇ 48.6 ರಷ್ಟಿದೆ ಎಂಬುದು ರಾಜ್ಯ ಔಷಧ ನಿಯಂತ್ರಕ ಅಧಿಕಾರಿಗಳ ತನಿಖೆ ವೇಳೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದಲ್ಲಿ ಸಂಭವಿಸಿದ ಮಕ್ಕಳ ಸರಣಿ ಸಾವಿಗೆ ಈ ಔಷಧವೇ ಕಾರಣ ಎನ್ನಲಾಗಿದೆ.</p><p>ಕಂಪನಿ ಮಾಲೀಕ ಜಿ. ರಂಗನಾಥನ್ ಅವರನ್ನು ಮಧ್ಯಪ್ರದೇಶ ವಿಶೇಷ ತನಿಖಾ ತಂಡ ಇತ್ತೀಚೆಗೆ ಬಂಧಿಸಿದೆ.</p><p>ಸ್ರೆಸಾನ್ ಫಾರ್ಮಾದ ಆವರಣ ಮತ್ತು ಕೆಲವು ಅಧಿಕಾರಿಗಳಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ತಂಡ ಹಣದ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆ ಅಡಿಯಲ್ಲಿ ಇಂದು ಬೆಳಿಗ್ಗೆ ದಾಳಿ ಮಾಡಿದೆ.</p><p>ಮಧ್ಯಪ್ರದೇಶವೊಂದರಲ್ಲೇ ಕನಿಷ್ಠ 22 ಮಕ್ಕಳು 'ಕೋಲ್ಡ್ರಿಫ್' ಸೇವನೆ ಬಳಿಕ ಮೂತ್ರಪಿಂಡ ವೈಫಲ್ಯದಿಂದ ಸಾವಿಗೀಡಾಗಿವೆ. ಇನ್ನೂ ಕೆಲವು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ದೇಶದ ಕೆಲವು ರಾಜ್ಯಗಳಲ್ಲಿ ಮಕ್ಕಳ ಸರಣಿ ಸಾವಿಗೆ ಕಾರಣವಾಗಿರುವ ಕೆಮ್ಮಿನ ಸಿರಪ್ 'ಕೋಲ್ಡ್ರಿಫ್' (Coldrif) ತಯಾರಕ ಕಂಪನಿ, ತಮಿಳುನಾಡು ಮೂಲದ ಸ್ರೆಸನ್ ಫಾರ್ಮಾದ ಉತ್ಪಾದನಾ ಪರವಾನಗಿಯನ್ನು ರದ್ದುಮಾಡಲಾಗಿದೆ. ಕಂಪನಿಯನ್ನು ಬಂದ್ ಮಾಡುವಂತೆ ಆದೇಶಿಸಿರುವುದಾಗಿ ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ.</p><p>ಸಿರಪ್ನಲ್ಲಿ ವಿಷಕಾರಿ ರಾಸಾಯನಿಕ'ಡೈಥಿಲೀನ್ ಗ್ಲೈಕಾಲ್'(Diethylene glycol–DEG) ಪ್ರಮಾಣ ಶೇ 48.6 ರಷ್ಟಿದೆ ಎಂಬುದು ರಾಜ್ಯ ಔಷಧ ನಿಯಂತ್ರಕ ಅಧಿಕಾರಿಗಳ ತನಿಖೆ ವೇಳೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದಲ್ಲಿ ಸಂಭವಿಸಿದ ಮಕ್ಕಳ ಸರಣಿ ಸಾವಿಗೆ ಈ ಔಷಧವೇ ಕಾರಣ ಎನ್ನಲಾಗಿದೆ.</p><p>ಕಂಪನಿ ಮಾಲೀಕ ಜಿ. ರಂಗನಾಥನ್ ಅವರನ್ನು ಮಧ್ಯಪ್ರದೇಶ ವಿಶೇಷ ತನಿಖಾ ತಂಡ ಇತ್ತೀಚೆಗೆ ಬಂಧಿಸಿದೆ.</p><p>ಸ್ರೆಸಾನ್ ಫಾರ್ಮಾದ ಆವರಣ ಮತ್ತು ಕೆಲವು ಅಧಿಕಾರಿಗಳಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ತಂಡ ಹಣದ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆ ಅಡಿಯಲ್ಲಿ ಇಂದು ಬೆಳಿಗ್ಗೆ ದಾಳಿ ಮಾಡಿದೆ.</p><p>ಮಧ್ಯಪ್ರದೇಶವೊಂದರಲ್ಲೇ ಕನಿಷ್ಠ 22 ಮಕ್ಕಳು 'ಕೋಲ್ಡ್ರಿಫ್' ಸೇವನೆ ಬಳಿಕ ಮೂತ್ರಪಿಂಡ ವೈಫಲ್ಯದಿಂದ ಸಾವಿಗೀಡಾಗಿವೆ. ಇನ್ನೂ ಕೆಲವು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>