<p><strong>ನವದೆಹಲಿ:</strong> ಕೋವಿಡ್–19 ಎರಡನೇ ಅಲೆಯ ಸಂದರ್ಭದಲ್ಲೇ ಕೇಂದ್ರ ಸರ್ಕಾರವು ಹೊಸ ಸಂಸತ್ ಭವನ ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ದೇಶದ ಜನರಿಗೆ ಈಗ ಉಸಿರಾಡುವುದು ಬೇಕಾಗಿದೆಯೇ ಹೊರತು ಪ್ರಧಾನಿ ನಿವಾಸವಲ್ಲ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಜತೆಗೆ ಜನರು ಆಮ್ಲಜನಕ ಸಿಲಿಂಡರ್ಗಳನ್ನು ತುಂಬಿಸಿಕೊಳ್ಳಲು ಸರದಿಯಲ್ಲಿ ನಿಂತಿರುವ ಮತ್ತು ಸೆಂಟ್ರಲ್ ವಿಸ್ತಾ ಯೋಜನೆಯ ನಿರ್ಮಾಣ ಕಾಮಗಾರಿಯ ಚಿತ್ರವನ್ನೂ ಲಗತ್ತಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/rahul-gandhi-says-central-vista-is-criminal-wastage-828641.html" target="_blank">ಸೆಂಟ್ರಲ್ ವಿಸ್ತಾ ಯೋಜನೆ ‘ಕ್ರಿಮಿನಲ್ ವೇಸ್ಟೇಜ್‘: ರಾಹುಲ್ ಗಾಂಧಿ ಟೀಕೆ</a></p>.<p>‘ಸೆಂಟ್ರಲ್ ವಿಸ್ತಾ’ ಯೋಜನೆಯಡಿ ತ್ರಿಕೋನಾಕಾರದ ಹೊಸ ಸಂಸತ್ತಿನ ಭವನ ನಿರ್ಮಾಣ, ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ವರೆಗಿನ ಮೂರು ಕಿ.ಮೀ ಉದ್ದದ ರಾಜಪತ್ ನವೀಕರಣ ಮತ್ತು ಪ್ರಧಾನಿ ಮತ್ತು ಉಪ ರಾಷ್ಟ್ರಪತಿಯವರ ನೂತನ ನಿವಾಸಗಳ ನಿರ್ಮಾಣ ಮಾಡಲಾಗುತ್ತಿದೆ. </p>.<p>ಸೆಂಟ್ರಲ್ ವಿಸ್ತಾ ಯೋಜನೆಯನ್ನು ‘ಅಗತ್ಯ ವಸ್ತುಗಳ ಕಾಯ್ದೆ‘ಯಡಿ ತಂದು, ಲಾಕ್ಡೌನ್ ವೇಳೆ ಕಾಮಗಾರಿ ಕೈಗೊಳ್ಳಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/heinous-crime-to-export-vaccines-when-people-dying-in-our-own-country-says-manish-sisodia-829221.html" itemprop="url">ದೇಶದಲ್ಲಿ ಜನ ಸಾಯುತ್ತಿರುವಾಗ ಲಸಿಕೆ ರಫ್ತು ಮಾಡುವುದು ಅಪರಾಧ: ಮನೀಶ್ ಸಿಸೋಡಿಯಾ</a></p>.<p>ಸಾಂಕ್ರಾಮಿಕವು ಗ್ರಾಮೀಣ ಪ್ರದೇಶಗಳಲ್ಲಿಯೂ ಹರಡುತ್ತಿರುವ ಬಗ್ಗೆ ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದು, ‘ನಗರಗಳ ಬಳಿಕ ಇದೀಗ ಗ್ರಾಮೀಣ ಪ್ರದೇಶಗಳೂ ದೇವರ ಮೇಲೆ ಅವಲಂಬಿತವಾಗಿವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಎರಡನೇ ಅಲೆಯ ಸಂದರ್ಭದಲ್ಲೇ ಕೇಂದ್ರ ಸರ್ಕಾರವು ಹೊಸ ಸಂಸತ್ ಭವನ ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ದೇಶದ ಜನರಿಗೆ ಈಗ ಉಸಿರಾಡುವುದು ಬೇಕಾಗಿದೆಯೇ ಹೊರತು ಪ್ರಧಾನಿ ನಿವಾಸವಲ್ಲ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಜತೆಗೆ ಜನರು ಆಮ್ಲಜನಕ ಸಿಲಿಂಡರ್ಗಳನ್ನು ತುಂಬಿಸಿಕೊಳ್ಳಲು ಸರದಿಯಲ್ಲಿ ನಿಂತಿರುವ ಮತ್ತು ಸೆಂಟ್ರಲ್ ವಿಸ್ತಾ ಯೋಜನೆಯ ನಿರ್ಮಾಣ ಕಾಮಗಾರಿಯ ಚಿತ್ರವನ್ನೂ ಲಗತ್ತಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/rahul-gandhi-says-central-vista-is-criminal-wastage-828641.html" target="_blank">ಸೆಂಟ್ರಲ್ ವಿಸ್ತಾ ಯೋಜನೆ ‘ಕ್ರಿಮಿನಲ್ ವೇಸ್ಟೇಜ್‘: ರಾಹುಲ್ ಗಾಂಧಿ ಟೀಕೆ</a></p>.<p>‘ಸೆಂಟ್ರಲ್ ವಿಸ್ತಾ’ ಯೋಜನೆಯಡಿ ತ್ರಿಕೋನಾಕಾರದ ಹೊಸ ಸಂಸತ್ತಿನ ಭವನ ನಿರ್ಮಾಣ, ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ವರೆಗಿನ ಮೂರು ಕಿ.ಮೀ ಉದ್ದದ ರಾಜಪತ್ ನವೀಕರಣ ಮತ್ತು ಪ್ರಧಾನಿ ಮತ್ತು ಉಪ ರಾಷ್ಟ್ರಪತಿಯವರ ನೂತನ ನಿವಾಸಗಳ ನಿರ್ಮಾಣ ಮಾಡಲಾಗುತ್ತಿದೆ. </p>.<p>ಸೆಂಟ್ರಲ್ ವಿಸ್ತಾ ಯೋಜನೆಯನ್ನು ‘ಅಗತ್ಯ ವಸ್ತುಗಳ ಕಾಯ್ದೆ‘ಯಡಿ ತಂದು, ಲಾಕ್ಡೌನ್ ವೇಳೆ ಕಾಮಗಾರಿ ಕೈಗೊಳ್ಳಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/heinous-crime-to-export-vaccines-when-people-dying-in-our-own-country-says-manish-sisodia-829221.html" itemprop="url">ದೇಶದಲ್ಲಿ ಜನ ಸಾಯುತ್ತಿರುವಾಗ ಲಸಿಕೆ ರಫ್ತು ಮಾಡುವುದು ಅಪರಾಧ: ಮನೀಶ್ ಸಿಸೋಡಿಯಾ</a></p>.<p>ಸಾಂಕ್ರಾಮಿಕವು ಗ್ರಾಮೀಣ ಪ್ರದೇಶಗಳಲ್ಲಿಯೂ ಹರಡುತ್ತಿರುವ ಬಗ್ಗೆ ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದು, ‘ನಗರಗಳ ಬಳಿಕ ಇದೀಗ ಗ್ರಾಮೀಣ ಪ್ರದೇಶಗಳೂ ದೇವರ ಮೇಲೆ ಅವಲಂಬಿತವಾಗಿವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>