<p><strong>ನವದೆಹಲಿ</strong>: ಈಗಾಗಲೇ 140 ಕೋಟಿ ಜನಸಂಖ್ಯೆ ಹೊಂದಿರುವ ಭಾರತವು ಕಷ್ಟಪಡುತ್ತಿದೆ. ಇಂಥ ಸಂದರ್ಭದಲ್ಲಿ ವಿಶ್ವದಾದ್ಯಂತ ಇರುವ ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲು ಭಾರತವೇನೂ ಧರ್ಮಶಾಲೆಯಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p>.<p>ಶ್ರೀಲಂಕಾ ಪ್ರಜೆಯೊಬ್ಬರು ತಮ್ಮ ಗಡೀಪಾರು ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ ನಡೆಸಿತು.</p>.<p class="title">ಒಂದು ವೇಳೆ ಭಾರತವು ವಿಶ್ವದಲ್ಲಿರುವ ನಿರಾಶ್ರಿತರಿಗೆ ಆಶ್ರಯ ನೀಡಲು ಮುಂದಾದಲ್ಲಿ, ನೆರೆಯ ರಾಷ್ಟ್ರಗಳಿಂದ ನಿರಾಶ್ರಿತರ ಮಹಾಪೂರವೇ ಹರಿದುಬರಲಿದೆ ಎಂದು ಪೀಠ ಹೇಳಿದೆ.</p>.<p>ಶ್ರೀಲಂಕಾದ ಭಯೋತ್ಪಾದಕ ಸಂಘಟನೆ ಎಲ್ಟಿಟಿಇಯ ಜೊತೆ ನಂಟು ಹೊಂದಿದ ಶಂಕೆ ಮೇರೆಗೆ ಶ್ರೀಲಂಕಾದ ಪ್ರಜೆಯನ್ನು 2015ರಲ್ಲಿ ಬಂಧಿಸಲಾಗಿತ್ತು. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ(ಯುಎಪಿಎ) ಆತ ತಪ್ಪಿತಸ್ಥ ಎಂದು ಸಾಬೀತಾಗಿತ್ತು. ಹೀಗಾಗಿ, ಈತನಿಗೆ ನ್ಯಾಯಾಲಯವು 10 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿತ್ತು. </p>.<p>2022ರಲ್ಲಿ ಈತನ ಶಿಕ್ಷೆ ಅವಧಿಯನ್ನು 10 ವರ್ಷದಿಂದ 7 ವರ್ಷಕ್ಕೆ ಇಳಿಸಿದ್ದ ಮದ್ರಾಸ್ ಹೈಕೋರ್ಟ್, ಶಿಕ್ಷೆಯ ಅವಧಿ ಮುಗಿದ ಕೂಡಲೇ ದೇಶ ತೊರೆಯಬೇಕು ಎಂದು ಸೂಚಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಈಗಾಗಲೇ 140 ಕೋಟಿ ಜನಸಂಖ್ಯೆ ಹೊಂದಿರುವ ಭಾರತವು ಕಷ್ಟಪಡುತ್ತಿದೆ. ಇಂಥ ಸಂದರ್ಭದಲ್ಲಿ ವಿಶ್ವದಾದ್ಯಂತ ಇರುವ ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲು ಭಾರತವೇನೂ ಧರ್ಮಶಾಲೆಯಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p>.<p>ಶ್ರೀಲಂಕಾ ಪ್ರಜೆಯೊಬ್ಬರು ತಮ್ಮ ಗಡೀಪಾರು ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ ನಡೆಸಿತು.</p>.<p class="title">ಒಂದು ವೇಳೆ ಭಾರತವು ವಿಶ್ವದಲ್ಲಿರುವ ನಿರಾಶ್ರಿತರಿಗೆ ಆಶ್ರಯ ನೀಡಲು ಮುಂದಾದಲ್ಲಿ, ನೆರೆಯ ರಾಷ್ಟ್ರಗಳಿಂದ ನಿರಾಶ್ರಿತರ ಮಹಾಪೂರವೇ ಹರಿದುಬರಲಿದೆ ಎಂದು ಪೀಠ ಹೇಳಿದೆ.</p>.<p>ಶ್ರೀಲಂಕಾದ ಭಯೋತ್ಪಾದಕ ಸಂಘಟನೆ ಎಲ್ಟಿಟಿಇಯ ಜೊತೆ ನಂಟು ಹೊಂದಿದ ಶಂಕೆ ಮೇರೆಗೆ ಶ್ರೀಲಂಕಾದ ಪ್ರಜೆಯನ್ನು 2015ರಲ್ಲಿ ಬಂಧಿಸಲಾಗಿತ್ತು. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ(ಯುಎಪಿಎ) ಆತ ತಪ್ಪಿತಸ್ಥ ಎಂದು ಸಾಬೀತಾಗಿತ್ತು. ಹೀಗಾಗಿ, ಈತನಿಗೆ ನ್ಯಾಯಾಲಯವು 10 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿತ್ತು. </p>.<p>2022ರಲ್ಲಿ ಈತನ ಶಿಕ್ಷೆ ಅವಧಿಯನ್ನು 10 ವರ್ಷದಿಂದ 7 ವರ್ಷಕ್ಕೆ ಇಳಿಸಿದ್ದ ಮದ್ರಾಸ್ ಹೈಕೋರ್ಟ್, ಶಿಕ್ಷೆಯ ಅವಧಿ ಮುಗಿದ ಕೂಡಲೇ ದೇಶ ತೊರೆಯಬೇಕು ಎಂದು ಸೂಚಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>