<p><strong>ಡೆಹ್ರಾಡೂನ್: </strong>ದೇಶದ ಅತಿ ಎತ್ತರದ ಪ್ರದೇಶವಾದ (ಸಮುದ್ರ ಮಟ್ಟದಿಂದ 11 ಸಾವಿರ ಅಡಿ ಎತ್ತರ) ಉತ್ತರಾಖಂಡ ರಾಜ್ಯದ, ಚಮೋಲಿ ಜಿಲ್ಲೆಯ ಮಾನಾ ಗ್ರಾಮದಲ್ಲಿ ಅಪರೂಪದ ಔಷಧೀಯ ಸಸ್ಯಗಳ ಉದ್ಯಾನವನ್ನು ಇತ್ತೀಚೆಗೆ ಉದ್ಘಾಟಿಸಲಾಗಿದೆ.</p>.<p>ಮಾನಾ ವನ ಪಂಚಾಯತ್ ನೀಡಿದ ಮೂರು ಎಕರೆ ಭೂಮಿಯಲ್ಲಿ ಉತ್ತರಾಖಂಡದ ಅರಣ್ಯ ಇಲಾಖೆಯ ಸಂಶೋಧನಾ ವಿಭಾಗವು ಈ ಔಷಧೀಯ ಉದ್ಯಾನವನ್ನು ಅಭಿವೃದ್ಧಿಪಡಿಸಿದೆ. ಕೇಂದ್ರ ಸರ್ಕಾರದ ‘ಕಾಂಪಾ(ಸಿಎಎಂಪಿಎ) ಯೋಜನೆ' ಅಥವಾ ‘ಪರ್ಯಾಯ ಅರಣ್ಯೀಕರಣ ನಿಧಿ ಕಾಯಿದೆ‘ ಅಡಿ ಈ ಔಷಧೀಯ ವನ ನಿರ್ಮಾಣವಾಗಿದೆ.</p>.<p>ಭಾರತ – ಚೀನಾ ಗಡಿಗೆ ಹತ್ತಿರವಿರುವ, ಹಿಮಾಲಯದ ತಪ್ಪಲಿನಲ್ಲಿನ ಪ್ರಸಿದ್ಧ ಬದ್ರಿನಾಥ ದೇವಾಲಯದ ಸಮೀಪದಲ್ಲಿರುವ ಈ ಉದ್ಯಾನದಲ್ಲಿ 40 ವಿಧದ ಸಸ್ಯ ಪ್ರಭೇದಗಳಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಂಶೋಧನೆ) ಸಂಜೀವ್ ಚತುರ್ವೇದಿ ತಿಳಿಸಿದ್ದಾರೆ.</p>.<p>ಅಂತರರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಸಂಘಟನೆ (ಐಯುಸಿಎನ್) ಹಾಗೂ ರಾಜ್ಯ ಜೀವವೈವಿಧ್ಯ ಮಂಡಳಿ ಗುರುತಿಸಿರುವ ಅಪಾಯ ಹಾಗೂ ಅಳಿವಿನಂಚಿನಲ್ಲಿರುವ ಔಷಧೀಯ ಸಸ್ಯಗಳನ್ನು ಈ ಉದ್ಯಾನದಲ್ಲಿ ಸಂರಕ್ಷಿಸಲಾಗಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್: </strong>ದೇಶದ ಅತಿ ಎತ್ತರದ ಪ್ರದೇಶವಾದ (ಸಮುದ್ರ ಮಟ್ಟದಿಂದ 11 ಸಾವಿರ ಅಡಿ ಎತ್ತರ) ಉತ್ತರಾಖಂಡ ರಾಜ್ಯದ, ಚಮೋಲಿ ಜಿಲ್ಲೆಯ ಮಾನಾ ಗ್ರಾಮದಲ್ಲಿ ಅಪರೂಪದ ಔಷಧೀಯ ಸಸ್ಯಗಳ ಉದ್ಯಾನವನ್ನು ಇತ್ತೀಚೆಗೆ ಉದ್ಘಾಟಿಸಲಾಗಿದೆ.</p>.<p>ಮಾನಾ ವನ ಪಂಚಾಯತ್ ನೀಡಿದ ಮೂರು ಎಕರೆ ಭೂಮಿಯಲ್ಲಿ ಉತ್ತರಾಖಂಡದ ಅರಣ್ಯ ಇಲಾಖೆಯ ಸಂಶೋಧನಾ ವಿಭಾಗವು ಈ ಔಷಧೀಯ ಉದ್ಯಾನವನ್ನು ಅಭಿವೃದ್ಧಿಪಡಿಸಿದೆ. ಕೇಂದ್ರ ಸರ್ಕಾರದ ‘ಕಾಂಪಾ(ಸಿಎಎಂಪಿಎ) ಯೋಜನೆ' ಅಥವಾ ‘ಪರ್ಯಾಯ ಅರಣ್ಯೀಕರಣ ನಿಧಿ ಕಾಯಿದೆ‘ ಅಡಿ ಈ ಔಷಧೀಯ ವನ ನಿರ್ಮಾಣವಾಗಿದೆ.</p>.<p>ಭಾರತ – ಚೀನಾ ಗಡಿಗೆ ಹತ್ತಿರವಿರುವ, ಹಿಮಾಲಯದ ತಪ್ಪಲಿನಲ್ಲಿನ ಪ್ರಸಿದ್ಧ ಬದ್ರಿನಾಥ ದೇವಾಲಯದ ಸಮೀಪದಲ್ಲಿರುವ ಈ ಉದ್ಯಾನದಲ್ಲಿ 40 ವಿಧದ ಸಸ್ಯ ಪ್ರಭೇದಗಳಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಂಶೋಧನೆ) ಸಂಜೀವ್ ಚತುರ್ವೇದಿ ತಿಳಿಸಿದ್ದಾರೆ.</p>.<p>ಅಂತರರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಸಂಘಟನೆ (ಐಯುಸಿಎನ್) ಹಾಗೂ ರಾಜ್ಯ ಜೀವವೈವಿಧ್ಯ ಮಂಡಳಿ ಗುರುತಿಸಿರುವ ಅಪಾಯ ಹಾಗೂ ಅಳಿವಿನಂಚಿನಲ್ಲಿರುವ ಔಷಧೀಯ ಸಸ್ಯಗಳನ್ನು ಈ ಉದ್ಯಾನದಲ್ಲಿ ಸಂರಕ್ಷಿಸಲಾಗಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>