<p><strong>ಹೈದರಾಬಾದ್</strong>: ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಕ್ಕಳ ಕಳ್ಳಸಾಗಣೆ ಹಾಗೂ ಅನೈತಿಕ ಐವಿಎಫ್ ಪ್ರಕ್ರಿಯೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ಹೈದರಾಬಾದ್ನ ಯುನಿವರ್ಸಲ್ ಸೃಷ್ಟಿ ಫರ್ಟಿಲಿಟಿ ಸೆಂಟರ್ನ ಮುಖ್ಯಸ್ಥೆ ಡಾ. ಅತಲೂರಿ ನಮೃತಾ ಹಾಗೂ ಇತರ ಐವರನ್ನು ಬಂಧಿಸಲಾಗಿದೆ.</p><p>ಭಾನುವಾರ ಹೈದರಾಬಾದ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಡಿಸಿಪಿ ರಶ್ಮಿ ಪೆರುಮಾಳ್ ಅವರು ಈ ವಿಷಯ ತಿಳಿಸಿದ್ದಾರೆ.</p><p>ಸಿಕಂದರಾಬಾದ್ನಲ್ಲಿ ನೆಲೆಸಿದ್ದ ರಾಜಸ್ಥಾನ ಮೂಲದ ದಂಪತಿಯೊಬ್ಬರು ಯುನಿವರ್ಸಲ್ ಸೃಷ್ಟಿ ಫರ್ಟಿಲಿಟಿ ಸೆಂಟರ್ನಿಂದ ನಮಗೆ ಮೋಸ ಆಗಿದೆ ಎಂದು ಗೋಪಾಲಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.</p><p>ಪತ್ನಿಗೆ ಗರ್ಭಧಾರಣೆ ಸಮಸ್ಯೆ ಇದ್ದಿದ್ದಕ್ಕೆ 2024 ರಲ್ಲಿ ಬಾಡಿಗೆ ತಾಯ್ತನದ ಮೊರೆ ಹೋಗಲಾಗಿತ್ತು. ಇದಕ್ಕಾಗಿ ಆಸ್ಪತ್ರೆಯವರು ಹಂತ ಹಂತವಾಗಿ ₹35 ಲಕ್ಷ ಕಟ್ಟಿಸಿಕೊಂಡಿದ್ದರು. ನಮಗೆ ಮಗು ಕೊಟ್ಟಾಗ ಮಗುವಿನ ಅನುವಂಶೀಕ ಲಕ್ಷಣಗಳ ಮೇಲೆ ಅನುಮಾನ ಬಂದು ಡಿಎನ್ಎ ಪರೀಕ್ಷೆಯನ್ನು ದೆಹಲಿಯಲ್ಲಿ ಮಾಡಿಸಿದ್ದೆವು. ಆ ಪರೀಕ್ಷೆಯಲ್ಲಿ ಬಾಡಿಗೆ ತಾಯ್ತನದ ಮೂಲಕ ನಮಗೆ ಸಿಕ್ಕಿರುವ ಮಗು ನಮ್ಮದಲ್ಲ ಎಂದು ತಿಳಿದು ಬಂದಿತ್ತು. ಹೀಗಾಗಿ ನಮಗೆ ನ್ಯಾಯ ಕೊಡಿಸಿ ಎಂದು ಸಂತ್ರಸ್ತ ದೂರು ದಾಖಲಿಸಿದ್ದರು.</p><p>ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಕಳೆದ ಒಂದು ವಾರದಿಂದ ಯುನಿವರ್ಸಲ್ ಸೃಷ್ಟಿ ಫರ್ಟಿಲಿಟಿ ಸೆಂಟರ್ನ ಹೈದರಾಬಾದ್, ವಿಜಯವಾಡ ಹಾಗೂ ವಿಶಾಖಪಟ್ಟಣದ ಶಾಖೆಗಳಲ್ಲಿ ತೀವ್ರ ತಪಾಸಣೆ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು ಎಂದು ಎನ್ಡಿಟಿವಿ ಸುದ್ದಿ ವೆಬ್ಸೈಟ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಕ್ಕಳ ಕಳ್ಳಸಾಗಣೆ ಹಾಗೂ ಅನೈತಿಕ ಐವಿಎಫ್ ಪ್ರಕ್ರಿಯೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ಹೈದರಾಬಾದ್ನ ಯುನಿವರ್ಸಲ್ ಸೃಷ್ಟಿ ಫರ್ಟಿಲಿಟಿ ಸೆಂಟರ್ನ ಮುಖ್ಯಸ್ಥೆ ಡಾ. ಅತಲೂರಿ ನಮೃತಾ ಹಾಗೂ ಇತರ ಐವರನ್ನು ಬಂಧಿಸಲಾಗಿದೆ.</p><p>ಭಾನುವಾರ ಹೈದರಾಬಾದ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಡಿಸಿಪಿ ರಶ್ಮಿ ಪೆರುಮಾಳ್ ಅವರು ಈ ವಿಷಯ ತಿಳಿಸಿದ್ದಾರೆ.</p><p>ಸಿಕಂದರಾಬಾದ್ನಲ್ಲಿ ನೆಲೆಸಿದ್ದ ರಾಜಸ್ಥಾನ ಮೂಲದ ದಂಪತಿಯೊಬ್ಬರು ಯುನಿವರ್ಸಲ್ ಸೃಷ್ಟಿ ಫರ್ಟಿಲಿಟಿ ಸೆಂಟರ್ನಿಂದ ನಮಗೆ ಮೋಸ ಆಗಿದೆ ಎಂದು ಗೋಪಾಲಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.</p><p>ಪತ್ನಿಗೆ ಗರ್ಭಧಾರಣೆ ಸಮಸ್ಯೆ ಇದ್ದಿದ್ದಕ್ಕೆ 2024 ರಲ್ಲಿ ಬಾಡಿಗೆ ತಾಯ್ತನದ ಮೊರೆ ಹೋಗಲಾಗಿತ್ತು. ಇದಕ್ಕಾಗಿ ಆಸ್ಪತ್ರೆಯವರು ಹಂತ ಹಂತವಾಗಿ ₹35 ಲಕ್ಷ ಕಟ್ಟಿಸಿಕೊಂಡಿದ್ದರು. ನಮಗೆ ಮಗು ಕೊಟ್ಟಾಗ ಮಗುವಿನ ಅನುವಂಶೀಕ ಲಕ್ಷಣಗಳ ಮೇಲೆ ಅನುಮಾನ ಬಂದು ಡಿಎನ್ಎ ಪರೀಕ್ಷೆಯನ್ನು ದೆಹಲಿಯಲ್ಲಿ ಮಾಡಿಸಿದ್ದೆವು. ಆ ಪರೀಕ್ಷೆಯಲ್ಲಿ ಬಾಡಿಗೆ ತಾಯ್ತನದ ಮೂಲಕ ನಮಗೆ ಸಿಕ್ಕಿರುವ ಮಗು ನಮ್ಮದಲ್ಲ ಎಂದು ತಿಳಿದು ಬಂದಿತ್ತು. ಹೀಗಾಗಿ ನಮಗೆ ನ್ಯಾಯ ಕೊಡಿಸಿ ಎಂದು ಸಂತ್ರಸ್ತ ದೂರು ದಾಖಲಿಸಿದ್ದರು.</p><p>ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು, ಕಳೆದ ಒಂದು ವಾರದಿಂದ ಯುನಿವರ್ಸಲ್ ಸೃಷ್ಟಿ ಫರ್ಟಿಲಿಟಿ ಸೆಂಟರ್ನ ಹೈದರಾಬಾದ್, ವಿಜಯವಾಡ ಹಾಗೂ ವಿಶಾಖಪಟ್ಟಣದ ಶಾಖೆಗಳಲ್ಲಿ ತೀವ್ರ ತಪಾಸಣೆ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು ಎಂದು ಎನ್ಡಿಟಿವಿ ಸುದ್ದಿ ವೆಬ್ಸೈಟ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>