<p><strong>ರಾಯಗಂಜ್</strong>: ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾದ ಜೋಡಿಯ ಮೇಲೆ ಬರ್ಬರ ಹಲ್ಲೆ ಮಾಡಿರುವ ಕೃತ್ಯ ಕುರಿತ ವಿಡಿಯೊ ಜಾಲತಾಣದಲ್ಲಿ ಹರಿದಾಡಿದ ಹಿಂದೆಯೇ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಜೋಡಿಗೆ ವ್ಯಕ್ತಿಯೊಬ್ಬರು ಬಿದಿರಿನ ಕೋಲಿನಿಂದ ತೀವ್ರವಾಗಿ ಥಳಿಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಥಳಿಸುತ್ತಿರುವ ವ್ಯಕ್ತಿಯನ್ನು ಉತ್ತರ ದಿನಜ್ಪುರ್ ಜಿಲ್ಲೆಯ ಚೋಪ್ರಾದ ಸ್ಥಳೀಯ ಟಿಎಂಸಿ ನಾಯಕ ಎಂದು ಗುರುತಿಸಲಾಗಿದೆ. ವಿಡಿಯೊದ ಅಸಲೀಯತ್ತನ್ನು ಪರಿಶೀಲಿಸಲಾಗಿಲ್ಲ ಎಂದು ಸುದ್ದಿಸಂಸ್ಥೆಯು ತಿಳಿಸಿದೆ. </p>.<p>ಆರೋಪಿ ತಜ್ಮುಲ್ ಅಲಿಯಾಸ್ ಜೆಸಿಬಿ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವಿಡಿಯೊ ಹರಿದಾಡಿದ ಬೆನ್ನಲ್ಲೇ ವಿರೋಧ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪಕ್ಷಗಳು ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿವೆ. ಆಡಳಿತಾರೂಢ ಟಿಎಂಸಿ ಈ ಕೃತ್ಯದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದೆ.</p>.<p>ವಿಡಿಯೊ ಆಧರಿಸಿ, ಮಹಿಳೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಗುರುತಿಸಿ, ಬಂಧಿಸಲಾಗಿದೆ ಎಂದು ಇಸ್ಲಾಂಪುರ್ ಜಿಲ್ಲಾ ಪೊಲೀಸರು ಹೇಳಿಕೆ ನೀಡಿದ್ದಾರೆ. </p>.<p>ಹಲ್ಲೆಗೊಳಗಾಗಿರುವ ಜೋಡಿಗೆ ರಕ್ಷಣೆ ಒದಗಿಸಲಾಗಿದೆ. ಈ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಗಂಜ್</strong>: ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾದ ಜೋಡಿಯ ಮೇಲೆ ಬರ್ಬರ ಹಲ್ಲೆ ಮಾಡಿರುವ ಕೃತ್ಯ ಕುರಿತ ವಿಡಿಯೊ ಜಾಲತಾಣದಲ್ಲಿ ಹರಿದಾಡಿದ ಹಿಂದೆಯೇ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಜೋಡಿಗೆ ವ್ಯಕ್ತಿಯೊಬ್ಬರು ಬಿದಿರಿನ ಕೋಲಿನಿಂದ ತೀವ್ರವಾಗಿ ಥಳಿಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಥಳಿಸುತ್ತಿರುವ ವ್ಯಕ್ತಿಯನ್ನು ಉತ್ತರ ದಿನಜ್ಪುರ್ ಜಿಲ್ಲೆಯ ಚೋಪ್ರಾದ ಸ್ಥಳೀಯ ಟಿಎಂಸಿ ನಾಯಕ ಎಂದು ಗುರುತಿಸಲಾಗಿದೆ. ವಿಡಿಯೊದ ಅಸಲೀಯತ್ತನ್ನು ಪರಿಶೀಲಿಸಲಾಗಿಲ್ಲ ಎಂದು ಸುದ್ದಿಸಂಸ್ಥೆಯು ತಿಳಿಸಿದೆ. </p>.<p>ಆರೋಪಿ ತಜ್ಮುಲ್ ಅಲಿಯಾಸ್ ಜೆಸಿಬಿ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವಿಡಿಯೊ ಹರಿದಾಡಿದ ಬೆನ್ನಲ್ಲೇ ವಿರೋಧ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪಕ್ಷಗಳು ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿವೆ. ಆಡಳಿತಾರೂಢ ಟಿಎಂಸಿ ಈ ಕೃತ್ಯದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದೆ.</p>.<p>ವಿಡಿಯೊ ಆಧರಿಸಿ, ಮಹಿಳೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಗುರುತಿಸಿ, ಬಂಧಿಸಲಾಗಿದೆ ಎಂದು ಇಸ್ಲಾಂಪುರ್ ಜಿಲ್ಲಾ ಪೊಲೀಸರು ಹೇಳಿಕೆ ನೀಡಿದ್ದಾರೆ. </p>.<p>ಹಲ್ಲೆಗೊಳಗಾಗಿರುವ ಜೋಡಿಗೆ ರಕ್ಷಣೆ ಒದಗಿಸಲಾಗಿದೆ. ಈ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>