<p><strong>ರಾಜಮಹೇಂದ್ರವರಂ</strong>: ಆಂಧ್ರಪ್ರದೇಶದ ರಾಜಮಹೇಂದ್ರವರಂ ಕಾರಾಗೃಹದಲ್ಲಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಿತ ಕೊಠಡಿ ವ್ಯವಸ್ಥೆ ಕಲ್ಪಿಸಲು ವಿಜಯವಾಡದ ಎಸಿಬಿ ನ್ಯಾಯಾಲಯವು ಶನಿವಾರ ಅನುಮತಿ ನೀಡಿದೆ. </p>.<p>ಕೌಶಲ ಅಭಿವೃದ್ಧಿ ನಿಗಮದ ₹300 ಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಚಂದ್ರಬಾಬು ಅವರು, ಸದ್ಯ ನ್ಯಾಯಾಂಗ ವಶದಲ್ಲಿದ್ದಾರೆ.</p>.<p>ಬೆಳಿಗ್ಗೆ ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡವು, ಮಾಜಿ ಮುಖ್ಯಮಂತ್ರಿ ಅವರ ಆರೋಗ್ಯ ತಪಾಸಣೆ ನಡೆಸಿತ್ತು. ಚಂದ್ರಬಾಬು ಅವರ ಆರೋಗ್ಯ ಸ್ಥಿರವಾಗಿದೆ. ಹಾಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ. ಆದರೆ, ಅವರ ವಾಸ್ತವ್ಯಕ್ಕೆ ತಂಪಾದ ವಾತಾವರಣ ಕಲ್ಪಿಸಬೇಕಿದೆ ಎಂದು ಶಿಫಾರಸು ಮಾಡಿತ್ತು.</p>.<p>ವೈದ್ಯರ ಈ ಶಿಫಾರಸು ವರದಿ ಆಧರಿಸಿ ಚಂದ್ರಬಾಬು ಪರ ವಕೀಲರ ತಂಡವು ಕೋರ್ಟ್ ಮೊರೆ ಹೋಗಿತ್ತು.</p>.<p>‘ಚರ್ಮದ ಅಲರ್ಜಿ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ. ಹಾಗಾಗಿ, ಕಾರಾಗೃಹದಲ್ಲಿರುವ ಅವರ ಕೊಠಡಿಗೆ ಹವಾನಿಯಂತ್ರಿತ ವ್ಯವಸ್ಥೆ ಕಲ್ಪಿಸಬೇಕು’ ಎಂದು ಕೋರಿದ್ದ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜಮಹೇಂದ್ರವರಂ</strong>: ಆಂಧ್ರಪ್ರದೇಶದ ರಾಜಮಹೇಂದ್ರವರಂ ಕಾರಾಗೃಹದಲ್ಲಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರಿಗೆ ಹವಾನಿಯಂತ್ರಿತ ಕೊಠಡಿ ವ್ಯವಸ್ಥೆ ಕಲ್ಪಿಸಲು ವಿಜಯವಾಡದ ಎಸಿಬಿ ನ್ಯಾಯಾಲಯವು ಶನಿವಾರ ಅನುಮತಿ ನೀಡಿದೆ. </p>.<p>ಕೌಶಲ ಅಭಿವೃದ್ಧಿ ನಿಗಮದ ₹300 ಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಚಂದ್ರಬಾಬು ಅವರು, ಸದ್ಯ ನ್ಯಾಯಾಂಗ ವಶದಲ್ಲಿದ್ದಾರೆ.</p>.<p>ಬೆಳಿಗ್ಗೆ ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡವು, ಮಾಜಿ ಮುಖ್ಯಮಂತ್ರಿ ಅವರ ಆರೋಗ್ಯ ತಪಾಸಣೆ ನಡೆಸಿತ್ತು. ಚಂದ್ರಬಾಬು ಅವರ ಆರೋಗ್ಯ ಸ್ಥಿರವಾಗಿದೆ. ಹಾಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ. ಆದರೆ, ಅವರ ವಾಸ್ತವ್ಯಕ್ಕೆ ತಂಪಾದ ವಾತಾವರಣ ಕಲ್ಪಿಸಬೇಕಿದೆ ಎಂದು ಶಿಫಾರಸು ಮಾಡಿತ್ತು.</p>.<p>ವೈದ್ಯರ ಈ ಶಿಫಾರಸು ವರದಿ ಆಧರಿಸಿ ಚಂದ್ರಬಾಬು ಪರ ವಕೀಲರ ತಂಡವು ಕೋರ್ಟ್ ಮೊರೆ ಹೋಗಿತ್ತು.</p>.<p>‘ಚರ್ಮದ ಅಲರ್ಜಿ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ. ಹಾಗಾಗಿ, ಕಾರಾಗೃಹದಲ್ಲಿರುವ ಅವರ ಕೊಠಡಿಗೆ ಹವಾನಿಯಂತ್ರಿತ ವ್ಯವಸ್ಥೆ ಕಲ್ಪಿಸಬೇಕು’ ಎಂದು ಕೋರಿದ್ದ ಅರ್ಜಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>