<p><strong>ಮುಂಬೈ</strong>: ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಲ್ಲಿ ಮಧ್ಯಪ್ರವೇಶಿಸಲು ಅವರ ಪತ್ನಿ ಶೆಹ್ಜೀನ್ ಸಿದ್ದೀಕಿ ಅವರಿಗೆ ಶನಿವಾರ ಇಲ್ಲಿನ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.</p>.<p>2024ರ ಅ.12ರಂದು ಮುಂಬೈನ ಬಾಂದ್ರಾ (ಪೂರ್ವ)ದಲ್ಲಿರುವ ಅವರ ಪುತ್ರ ಝೀಶನ್ ಕಚೇರಿಯ ಮುಂಭಾಗದಲ್ಲಿಯೇ ಅಪರಿಚಿತರ ಗುಂಡಿನ ದಾಳಿಗೆ 66 ವರ್ಷದ ಬಾಬಾ ಸಿದ್ದೀಕಿ ಅವರು ಬಲಿಯಾಗಿದ್ದರು.</p>.<p>ಪತಿಯ ಸಾವಿನಿಂದ ತುಂಬಲಾರದ ನಷ್ಟ ಉಂಟಾಗಿದ್ದು, ಸತ್ಯ ಹಾಗೂ ನೈಜ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸುವ ದೃಷ್ಟಿಯಿಂದ ಪ್ರಕರಣದಲ್ಲಿ ಮಧ್ಯಪ್ರವೇಶಕ್ಕೆ ಅವಕಾಶ ಕೋರಿ ಮಹಾರಾಷ್ಟ್ರದ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಡಿ.ಶೆಲ್ಕೆ ಅವರಿಗೆ ಶೆಹ್ಜೀನ್ ಸಿದ್ದೀಕಿ ಮನವಿ ಮಾಡಿದ್ದರು.</p>.<p class="bodytext">‘ಈ ಪ್ರಕರಣದಲ್ಲಿ ಶೆಹ್ಜೀನ್ ಅವರು ಪ್ರತಿವಾದಿಯಾಗಲಿದ್ದು, ಪ್ರಾಸಿಕ್ಯೂಷನ್ಗೆ ಸಹಕರಿಸಲಿದ್ದಾರೆ. ಕಾನೂನು ಪ್ರಕ್ರಿಯೆಯಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದೆ’ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಲ್ಲಿ ಮಧ್ಯಪ್ರವೇಶಿಸಲು ಅವರ ಪತ್ನಿ ಶೆಹ್ಜೀನ್ ಸಿದ್ದೀಕಿ ಅವರಿಗೆ ಶನಿವಾರ ಇಲ್ಲಿನ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.</p>.<p>2024ರ ಅ.12ರಂದು ಮುಂಬೈನ ಬಾಂದ್ರಾ (ಪೂರ್ವ)ದಲ್ಲಿರುವ ಅವರ ಪುತ್ರ ಝೀಶನ್ ಕಚೇರಿಯ ಮುಂಭಾಗದಲ್ಲಿಯೇ ಅಪರಿಚಿತರ ಗುಂಡಿನ ದಾಳಿಗೆ 66 ವರ್ಷದ ಬಾಬಾ ಸಿದ್ದೀಕಿ ಅವರು ಬಲಿಯಾಗಿದ್ದರು.</p>.<p>ಪತಿಯ ಸಾವಿನಿಂದ ತುಂಬಲಾರದ ನಷ್ಟ ಉಂಟಾಗಿದ್ದು, ಸತ್ಯ ಹಾಗೂ ನೈಜ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸುವ ದೃಷ್ಟಿಯಿಂದ ಪ್ರಕರಣದಲ್ಲಿ ಮಧ್ಯಪ್ರವೇಶಕ್ಕೆ ಅವಕಾಶ ಕೋರಿ ಮಹಾರಾಷ್ಟ್ರದ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಡಿ.ಶೆಲ್ಕೆ ಅವರಿಗೆ ಶೆಹ್ಜೀನ್ ಸಿದ್ದೀಕಿ ಮನವಿ ಮಾಡಿದ್ದರು.</p>.<p class="bodytext">‘ಈ ಪ್ರಕರಣದಲ್ಲಿ ಶೆಹ್ಜೀನ್ ಅವರು ಪ್ರತಿವಾದಿಯಾಗಲಿದ್ದು, ಪ್ರಾಸಿಕ್ಯೂಷನ್ಗೆ ಸಹಕರಿಸಲಿದ್ದಾರೆ. ಕಾನೂನು ಪ್ರಕ್ರಿಯೆಯಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದೆ’ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>