<p class="title"><strong>ಮುಂಬೈ (ಪಿಟಿಐ):</strong> ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ, ಜಾಮೀನು ಕೋರಿದ್ದ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ದೋಷಾರೋಪ ಪಟ್ಟಿಯನ್ನು ಇನ್ನೊಂದು ತಿಂಗಳಲ್ಲಿ ದಾಖಲಿಸಬೇಕು ಎಂದೂ ಎನ್ಐಎಗೆ ಸೂಚಿಸಿದೆ.</p>.<p class="title">ದೋಷಾರೋಪ ಪಟ್ಟಿ ಸಲ್ಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಎರಡು ತಿಂಗಳ ಸಮಯ ನೀಡಿ ಜೂನ್ 9ರಂದು ಆದೇಶಿಸಿತ್ತು. ತನಿಖೆ ಪ್ರಗತಿಯಲ್ಲಿದ್ದು, ಅವಧಿ ವಿಸ್ತರಿಸಲು ಕೋರಿ ತನಿಖಾ ಸಂಸ್ಥೆಯು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಿತ್ತು.</p>.<p class="title">ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ದಾಖಲಿಸಲು ತನಿಖಾ ಸಂಸ್ಥೆಯು ವಿಫಲವಾಗಿದೆ ಎಂಬ ಕಾರಣವನ್ನೇ ನೀಡಿ ವಾಜೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸಂಬಂಧ ಮಾರ್ಚ್ 13, 2021ರಲ್ಲಿ ಇವರನ್ನು ಬಂಧಿಸಲಾಗಿತ್ತು.</p>.<p class="title"><a href="https://www.prajavani.net/india-news/rahul-gandhi-says-pegasus-a-tool-to-silence-people-854939.html" itemprop="url">ದೇಶದ ಜನರ ಧ್ವನಿ ಅಡಗಿಸುವ ಸಾಧನ ಪೆಗಾಸಸ್: ರಾಹುಲ್ ಗಾಂಧಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ (ಪಿಟಿಐ):</strong> ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ, ಜಾಮೀನು ಕೋರಿದ್ದ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ದೋಷಾರೋಪ ಪಟ್ಟಿಯನ್ನು ಇನ್ನೊಂದು ತಿಂಗಳಲ್ಲಿ ದಾಖಲಿಸಬೇಕು ಎಂದೂ ಎನ್ಐಎಗೆ ಸೂಚಿಸಿದೆ.</p>.<p class="title">ದೋಷಾರೋಪ ಪಟ್ಟಿ ಸಲ್ಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಎರಡು ತಿಂಗಳ ಸಮಯ ನೀಡಿ ಜೂನ್ 9ರಂದು ಆದೇಶಿಸಿತ್ತು. ತನಿಖೆ ಪ್ರಗತಿಯಲ್ಲಿದ್ದು, ಅವಧಿ ವಿಸ್ತರಿಸಲು ಕೋರಿ ತನಿಖಾ ಸಂಸ್ಥೆಯು ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಿತ್ತು.</p>.<p class="title">ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ದಾಖಲಿಸಲು ತನಿಖಾ ಸಂಸ್ಥೆಯು ವಿಫಲವಾಗಿದೆ ಎಂಬ ಕಾರಣವನ್ನೇ ನೀಡಿ ವಾಜೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸಂಬಂಧ ಮಾರ್ಚ್ 13, 2021ರಲ್ಲಿ ಇವರನ್ನು ಬಂಧಿಸಲಾಗಿತ್ತು.</p>.<p class="title"><a href="https://www.prajavani.net/india-news/rahul-gandhi-says-pegasus-a-tool-to-silence-people-854939.html" itemprop="url">ದೇಶದ ಜನರ ಧ್ವನಿ ಅಡಗಿಸುವ ಸಾಧನ ಪೆಗಾಸಸ್: ರಾಹುಲ್ ಗಾಂಧಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>