<p><strong>ನವದೆಹಲಿ: </strong>ಉನ್ನಾವೊ ಆತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಮತ್ತು ಇತರ ಐವರನ್ನು ದೆಹಲಿಯ ನ್ಯಾಯಾಲಯ ಖುಲಾಸೆಗೊಳಿಸಿದೆ.</p>.<p>ಆರೋಪಿಗಳ ವಿರುದ್ಧ ಪ್ರಾಥಮಿಕವಾಗಿ ಯಾವುದೇ ಪುರಾವೆಗಳಿಲ್ಲದ ಕಾರಣ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಅವರು ಕುಲದೀಪ್ ಸಿಂಗ್, ಕೋಮಲ್ ಸಿಂಗ್, ಅರುಣ್ ಸಿಂಗ್, ಗ್ಯಾನೇಂದ್ರ ಸಿಂಗ್, ರಿಂಕು ಸಿಂಗ್ ಮತ್ತು ಅವದೇಶ್ ಸಿಂಗ್ರನ್ನು ಖುಲಾಸೆಗೊಳಿಸಿದ್ದಾರೆ.</p>.<p>ಇತರ ಆರೋಪಿಗಾದ ಆಶಿಷ್ ಕುಮಾರ್ ಪಾಲ್, ವಿನೋದ್ ಮಿಶ್ರಾ, ಹರಿಪಾಲ್ ಸಿಂಗ್ ಮತ್ತು ನವೀನ್ ಸಿಂಗ್ ವಿರುದ್ಧ ಪ್ರಾಥಮಿಕ ಹಂತದ ಸಾಕ್ಷ್ಯಾಧಾರಗಳಿರುವುದರಿಂದ, ಅವರ ವಿರುದ್ಧ ಆರೋಪ ಹೊರಿಸುವಂತೆ ನ್ಯಾಯಾಲಯ ಆದೇಶಿಸಿದೆ.</p>.<p>ಇತರ ಆರೋಪಿಗಳ ಜೊತೆ ಸೇರಿ ಕುಲದೀಪ್ ಸಿಂಗ್ ಪಿತೂರಿ ನಡೆಸಿರುವ ಬಗ್ಗೆ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿಲ್ಲ ಎಂದೂ ನ್ಯಾಯಾಲಯ ಸೋಮವಾರ ಆದೇಶದಲ್ಲಿ ತಿಳಿಸಿದೆ.</p>.<p>2019ರಲ್ಲಿ ಉನ್ನಾವೊ ಅತ್ಯಾಚಾರ ಪ್ರರಕಣದ ಸಂತ್ರಸ್ತೆ ಇಬ್ಬರು ಸಂಬಂಧಿಕರು ಹಾಗೂ ವಕೀಲರ ಜೊತೆ ವಾಹನವೊಂದರಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಸಂತ್ರೆಸ್ತೆಯ ಇಬ್ಬರು ಸಂಬಂಧಿಕರು ಮೃತಪಟ್ಟಿದ್ದರು. ಸಂತ್ರಸ್ತೆ ಹಾಗೂ ವಕೀಲರು ತೀವ್ರವಾಗಿ ಗಾಯಗೊಂಡಿದ್ದರು.</p>.<p>ಸಂತ್ರಸ್ತೆ ಹಾಗೂ ಕುಟುಂಬದವರಿಗೆ ಬೆದರಿಕೆಯೊಡ್ಡಲಾಗಿತ್ತು ಎಂದು ಆರೋಪಿಸಿದ್ದ ಸಂದರ್ಭದಲ್ಲಿ ಕಲದೀಪ್ ಸಿಂಗ್ ನ್ಯಾಯಾಂಗ ಬಂಧನದಲ್ಲಿದ್ದರು ಎಂಬುದನ್ನೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಉನ್ನಾವೊ ಆತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಮತ್ತು ಇತರ ಐವರನ್ನು ದೆಹಲಿಯ ನ್ಯಾಯಾಲಯ ಖುಲಾಸೆಗೊಳಿಸಿದೆ.</p>.<p>ಆರೋಪಿಗಳ ವಿರುದ್ಧ ಪ್ರಾಥಮಿಕವಾಗಿ ಯಾವುದೇ ಪುರಾವೆಗಳಿಲ್ಲದ ಕಾರಣ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಅವರು ಕುಲದೀಪ್ ಸಿಂಗ್, ಕೋಮಲ್ ಸಿಂಗ್, ಅರುಣ್ ಸಿಂಗ್, ಗ್ಯಾನೇಂದ್ರ ಸಿಂಗ್, ರಿಂಕು ಸಿಂಗ್ ಮತ್ತು ಅವದೇಶ್ ಸಿಂಗ್ರನ್ನು ಖುಲಾಸೆಗೊಳಿಸಿದ್ದಾರೆ.</p>.<p>ಇತರ ಆರೋಪಿಗಾದ ಆಶಿಷ್ ಕುಮಾರ್ ಪಾಲ್, ವಿನೋದ್ ಮಿಶ್ರಾ, ಹರಿಪಾಲ್ ಸಿಂಗ್ ಮತ್ತು ನವೀನ್ ಸಿಂಗ್ ವಿರುದ್ಧ ಪ್ರಾಥಮಿಕ ಹಂತದ ಸಾಕ್ಷ್ಯಾಧಾರಗಳಿರುವುದರಿಂದ, ಅವರ ವಿರುದ್ಧ ಆರೋಪ ಹೊರಿಸುವಂತೆ ನ್ಯಾಯಾಲಯ ಆದೇಶಿಸಿದೆ.</p>.<p>ಇತರ ಆರೋಪಿಗಳ ಜೊತೆ ಸೇರಿ ಕುಲದೀಪ್ ಸಿಂಗ್ ಪಿತೂರಿ ನಡೆಸಿರುವ ಬಗ್ಗೆ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿಲ್ಲ ಎಂದೂ ನ್ಯಾಯಾಲಯ ಸೋಮವಾರ ಆದೇಶದಲ್ಲಿ ತಿಳಿಸಿದೆ.</p>.<p>2019ರಲ್ಲಿ ಉನ್ನಾವೊ ಅತ್ಯಾಚಾರ ಪ್ರರಕಣದ ಸಂತ್ರಸ್ತೆ ಇಬ್ಬರು ಸಂಬಂಧಿಕರು ಹಾಗೂ ವಕೀಲರ ಜೊತೆ ವಾಹನವೊಂದರಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಸಂತ್ರೆಸ್ತೆಯ ಇಬ್ಬರು ಸಂಬಂಧಿಕರು ಮೃತಪಟ್ಟಿದ್ದರು. ಸಂತ್ರಸ್ತೆ ಹಾಗೂ ವಕೀಲರು ತೀವ್ರವಾಗಿ ಗಾಯಗೊಂಡಿದ್ದರು.</p>.<p>ಸಂತ್ರಸ್ತೆ ಹಾಗೂ ಕುಟುಂಬದವರಿಗೆ ಬೆದರಿಕೆಯೊಡ್ಡಲಾಗಿತ್ತು ಎಂದು ಆರೋಪಿಸಿದ್ದ ಸಂದರ್ಭದಲ್ಲಿ ಕಲದೀಪ್ ಸಿಂಗ್ ನ್ಯಾಯಾಂಗ ಬಂಧನದಲ್ಲಿದ್ದರು ಎಂಬುದನ್ನೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>