<p><strong>ಠಾಣೆ: </strong>ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಕಳೆದ ವರ್ಷದ ಏಪ್ರಿಲ್ನಲ್ಲಿ ನಡೆದಿದ್ದ ಗುಂಪು ಹಲ್ಲೆ ಪ್ರಕರಣದ 89 ಆರೋಪಿಗಳಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಶನಿವಾರ ಜಾಮೀನು ಮಂಜೂರು ಮಾಡಿದೆ.</p>.<p>ಪಾಲ್ಘರ್ ಜಿಲ್ಲೆಯ ಗ್ರಾಮವೊಂದರಲ್ಲಿ ಮಕ್ಕಳ ಕಳ್ಳರೆಂದು ಶಂಕಿಸಿ ಇಬ್ಬರು ಸಾಧುಗಳು ಹಾಗೂ ಅವರ ಕಾರಿನ ಚಾಲಕನನ್ನು ನೂರಾರು ಜನ ದೊಣ್ಣೆಗಳಿಂದ ಹೊಡೆದು ಕೊಂದಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎಸ್.ಬಿ.ಬಹಲ್ಕರ್ ಅವರು ಆರೋಪಿಗಳಿಗೆ ಜಾಮೀನು ನೀಡಿ, ವಿಚಾರಣೆಯನ್ನು ಫೆಬ್ರುವರಿ 15ಕ್ಕೆ ಮುಂದೂಡಿದರು.</p>.<p>‘ಗಲಭೆಯಲ್ಲಿ ನಮ್ಮ ಕಕ್ಷಿದಾರರ ಪಾತ್ರವೇನೂ ಇಲ್ಲ. ಪೊಲೀಸರು ಕೇವಲ ಅನುಮಾನದ ಮೇಲೆ ಅವರನ್ನು ಬಂಧಿಸಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರಾದ ಅಮೃತ್ ಅಧಿಕಾರಿ ಮತ್ತು ಅತುಲ್ ಪಾಟೀಲ್ ಅವರು ನ್ಯಾಯಾಲಯಕ್ಕೆ ತಿಳಿಸಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಮೂರು ಎಫ್ಐಆರ್ಗಳ ಸಿಂಧುತ್ವವನ್ನೂ ಆರೋಪಿಗಳು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.</p>.<p>ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 201 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ 75 ಮಂದಿ ಮುಖ್ಯ ಆರೋಪಿಗಳನ್ನು ಜೈಲಿಗೆ ಅಟ್ಟಲಾಗಿತ್ತು.</p>.<p>ಫಿರ್ಯಾದಿಯ (ಪ್ರಾಸಿಕ್ಯೂಷನ್) ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸತೀಶ್ ಮಾಣೆಶಿಂಧೆ ಹಾಗೂ ಮೃತ ಸಾಧುಗಳ ಕುಟುಂಬದ ಪರ ವಕೀಲ ಪಿ.ಎನ್.ಓಜಾ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ: </strong>ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಕಳೆದ ವರ್ಷದ ಏಪ್ರಿಲ್ನಲ್ಲಿ ನಡೆದಿದ್ದ ಗುಂಪು ಹಲ್ಲೆ ಪ್ರಕರಣದ 89 ಆರೋಪಿಗಳಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಶನಿವಾರ ಜಾಮೀನು ಮಂಜೂರು ಮಾಡಿದೆ.</p>.<p>ಪಾಲ್ಘರ್ ಜಿಲ್ಲೆಯ ಗ್ರಾಮವೊಂದರಲ್ಲಿ ಮಕ್ಕಳ ಕಳ್ಳರೆಂದು ಶಂಕಿಸಿ ಇಬ್ಬರು ಸಾಧುಗಳು ಹಾಗೂ ಅವರ ಕಾರಿನ ಚಾಲಕನನ್ನು ನೂರಾರು ಜನ ದೊಣ್ಣೆಗಳಿಂದ ಹೊಡೆದು ಕೊಂದಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಎಸ್.ಬಿ.ಬಹಲ್ಕರ್ ಅವರು ಆರೋಪಿಗಳಿಗೆ ಜಾಮೀನು ನೀಡಿ, ವಿಚಾರಣೆಯನ್ನು ಫೆಬ್ರುವರಿ 15ಕ್ಕೆ ಮುಂದೂಡಿದರು.</p>.<p>‘ಗಲಭೆಯಲ್ಲಿ ನಮ್ಮ ಕಕ್ಷಿದಾರರ ಪಾತ್ರವೇನೂ ಇಲ್ಲ. ಪೊಲೀಸರು ಕೇವಲ ಅನುಮಾನದ ಮೇಲೆ ಅವರನ್ನು ಬಂಧಿಸಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರಾದ ಅಮೃತ್ ಅಧಿಕಾರಿ ಮತ್ತು ಅತುಲ್ ಪಾಟೀಲ್ ಅವರು ನ್ಯಾಯಾಲಯಕ್ಕೆ ತಿಳಿಸಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಮೂರು ಎಫ್ಐಆರ್ಗಳ ಸಿಂಧುತ್ವವನ್ನೂ ಆರೋಪಿಗಳು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.</p>.<p>ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 201 ಮಂದಿಯನ್ನು ಬಂಧಿಸಿದ್ದರು. ಈ ಪೈಕಿ 75 ಮಂದಿ ಮುಖ್ಯ ಆರೋಪಿಗಳನ್ನು ಜೈಲಿಗೆ ಅಟ್ಟಲಾಗಿತ್ತು.</p>.<p>ಫಿರ್ಯಾದಿಯ (ಪ್ರಾಸಿಕ್ಯೂಷನ್) ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸತೀಶ್ ಮಾಣೆಶಿಂಧೆ ಹಾಗೂ ಮೃತ ಸಾಧುಗಳ ಕುಟುಂಬದ ಪರ ವಕೀಲ ಪಿ.ಎನ್.ಓಜಾ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>