ನಾಸಿಕ್: ಮಹಾರಾಷ್ಟ್ರದ ಸಚಿವ ದಾದಾ ಭೂಸೆ ಅವರ ದೂರಿನ ಮೇಲೆ ದಾಖಲಾಗಿದ್ದ ಮಾನನಷ್ಟ ಪ್ರಕರಣದಲ್ಲಿ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಅವರಿಗೆ ಮಾಲೇಗಾಂವ್ನ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ.
ಅರ್ಜಿಯ ವಿಚಾರಣೆ ವೇಳೆ ರಾವುತ್ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು. ಜಾಮೀನು ನೀಡಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು 2024ರ ಫೆ.3ಕ್ಕೆ ನಿಗದಿಪಡಿಸಿದೆ.
ಭೂಸೆ ಅವರು ನಾಸಿಕ್ ಜಿಲ್ಲೆಯ ಮಾಲೇಗಾಂವ್ನ ಗಿರ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ₹ 178 ಕೋಟಿ ಮೊತ್ತದ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ರಾವುತ್ ಆರೋಪಿಸಿದ್ದರು.