<p><strong>ನವದೆಹಲಿ</strong>: ಶುಲ್ಕ ಪಾವತಿಸದ ಕಾರಣ ವಿದ್ಯಾರ್ಥಿಗಳಿಗೆ ಅಗೌರವ ತೋರಿ, ಅವರನ್ನು ಗ್ರಂಥಾಲಯದಲ್ಲಿ ಬಂಧಿಸಿದ ಮತ್ತು ತರಗತಿ ಪ್ರವೇಶಕ್ಕೆ ನಿರಾಕರಿಸಿದ ದ್ವಾರಕ ಪಬ್ಲಿಕ್ ಶಾಲೆಯನ್ನು ದೆಹಲಿ ಹೈಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿತು.</p>.<p>ನ್ಯಾಯಮೂರ್ತಿ ಸಚಿನ್ ದತ್ತಾ ಅವರು, ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಆಸ್ತಿ ಎಂಬಂತೆ ಬೇಕಾಬಿಟ್ಟಿ ನಡೆಸಿಕೊಳ್ಳುವ ಶಾಲೆಯು ಬಾಗಿಲು ಮುಚ್ಚಲು ಅರ್ಹವಾಗಿದೆ ಎಂದು ಛೀಮಾರಿ ಹಾಕಿದರು.</p>.<p>ಶಾಲೆಯು ‘ಹಣ ಗಳಿಸುವ ಸಾಧನ’ ಎಂಬಂತೆ ಪರಿಗಣಿಸುವ ಶೈಕ್ಷಣಿಕ ಸಂಸ್ಥೆಗಳು ಮಕ್ಕಳಿಗೆ ಕಿರುಕುಳ ನೀಡದಂತೆ ರಕ್ಷಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.</p>.<p>ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ಅವರನ್ನು ಅಮಾನವೀಯವಾಗಿ, ಅಗೌರವದಿಂದ ನಡೆಸಿಕೊಳ್ಳಲು ಶಾಲೆಗಳಿಗೆ ಪರವಾನಗಿ ನೀಡಿಲ್ಲ ಎಂದು ಕಟುವಾಗಿ ಹೇಳಿದರು.</p>.<p>ವಿಚಾರಣೆ ಸಂದರ್ಭದಲ್ಲಿ ಶಾಲೆಯ ಹಲವು ವಿದ್ಯಾರ್ಥಿಗಳು ಸಮವಸ್ತ್ರ, ಪುಸ್ತಕ ಮತ್ತು ಬ್ಯಾಗ್ಗಳೊಂದಿಗೆ ಕೋರ್ಟ್ನಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಶುಲ್ಕ ಪಾವತಿಸದ ಕಾರಣ ವಿದ್ಯಾರ್ಥಿಗಳಿಗೆ ಅಗೌರವ ತೋರಿ, ಅವರನ್ನು ಗ್ರಂಥಾಲಯದಲ್ಲಿ ಬಂಧಿಸಿದ ಮತ್ತು ತರಗತಿ ಪ್ರವೇಶಕ್ಕೆ ನಿರಾಕರಿಸಿದ ದ್ವಾರಕ ಪಬ್ಲಿಕ್ ಶಾಲೆಯನ್ನು ದೆಹಲಿ ಹೈಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿತು.</p>.<p>ನ್ಯಾಯಮೂರ್ತಿ ಸಚಿನ್ ದತ್ತಾ ಅವರು, ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಆಸ್ತಿ ಎಂಬಂತೆ ಬೇಕಾಬಿಟ್ಟಿ ನಡೆಸಿಕೊಳ್ಳುವ ಶಾಲೆಯು ಬಾಗಿಲು ಮುಚ್ಚಲು ಅರ್ಹವಾಗಿದೆ ಎಂದು ಛೀಮಾರಿ ಹಾಕಿದರು.</p>.<p>ಶಾಲೆಯು ‘ಹಣ ಗಳಿಸುವ ಸಾಧನ’ ಎಂಬಂತೆ ಪರಿಗಣಿಸುವ ಶೈಕ್ಷಣಿಕ ಸಂಸ್ಥೆಗಳು ಮಕ್ಕಳಿಗೆ ಕಿರುಕುಳ ನೀಡದಂತೆ ರಕ್ಷಿಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.</p>.<p>ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ಅವರನ್ನು ಅಮಾನವೀಯವಾಗಿ, ಅಗೌರವದಿಂದ ನಡೆಸಿಕೊಳ್ಳಲು ಶಾಲೆಗಳಿಗೆ ಪರವಾನಗಿ ನೀಡಿಲ್ಲ ಎಂದು ಕಟುವಾಗಿ ಹೇಳಿದರು.</p>.<p>ವಿಚಾರಣೆ ಸಂದರ್ಭದಲ್ಲಿ ಶಾಲೆಯ ಹಲವು ವಿದ್ಯಾರ್ಥಿಗಳು ಸಮವಸ್ತ್ರ, ಪುಸ್ತಕ ಮತ್ತು ಬ್ಯಾಗ್ಗಳೊಂದಿಗೆ ಕೋರ್ಟ್ನಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>