<p><strong>ಲಖನೌ:</strong>ಉತ್ತರ ಪ್ರದೇಶದಲ್ಲಿ ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿಯ ಒಳಗೆ ಸಮೀಕ್ಷೆ, ವಿಡಿಯೊ ಚಿತ್ರೀಕರಣ ಮುಂದುವರಿಯಲಿದೆ ಎಂದು ವಾರಾಣಸಿಯ ಸ್ಥಳೀಯ ನ್ಯಾಯಾಲಯ ಹೇಳಿದೆ.</p>.<p>ಮಸೀದಿ ಸ್ಥಳದ ಸಮೀಕ್ಷೆ ಮತ್ತು ವಿಡಿಯೊ ಚಿತ್ರೀಕರಣ ನಿಲ್ಲಿಸಲು ಆದೇಶಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಕೋರ್ಟ್ ತಳ್ಳಿಹಾಕಿತು.</p>.<p>ಮೇ 17ರೊಳಗೆ ಸಮೀಕ್ಷೆ ಮುಗಿಸಿ, ವರದಿ ಸಲ್ಲಿಸಬೇಕು ಎಂದೂ ಆದೇಶಿಸಿತು.ಕೆಳಮಹಡಿ, ಮುಚ್ಚಿದ ಕೊಠಡಿಗಳು ಸೇರಿ ಸಂಪೂರ್ಣವಾಗಿ ಸಮೀಕ್ಷೆ ಕಾರ್ಯ ನಡೆಯಬೇಕು ಎಂದು ಕೋರ್ಟ್ ಆದೇಶಿಸಿತು.</p>.<p>ಅಜಯ್ ಕುಮಾರ್ ಮಿಶ್ರಾ ಅವರನ್ನು ಅಡ್ವೊಕೇಟ್ ಕಮಿಷನರ್ ಸ್ಥಾನದಿಂದ ಕೈಬಿಡಬೇಕು ಎಂದು ಕೋರಿದ್ದ ಮುಸಲ್ಮಾನರ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತು. ಅಲ್ಲದೆ, ಮಿಶ್ರಾ ಅವರಿಗೆ ನೆರವಾಗಲು ಹೆಚ್ಚುವರಿ ಕಮಿಷನರ್ ಮತ್ತು ಸಹಾಯಕ ಕಮಿಷನರ್ ಅವರನ್ನು ಕೋರ್ಟ್ ನೇಮಕ ಮಾಡಿತು.</p>.<p>ಸಮೀಕ್ಷೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮುಸಲ್ಮಾನ ಸಂಘಟನೆಗಳು ಯಾವುದೇ ಕೋರ್ಟ್ ಆದೇಶವಿರದಿದ್ದರೂ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದವು.</p>.<p>ಕಾಶಿ ವಿಶ್ವನಾಥ ದೇವಸ್ಥಾನ –ಜ್ಞಾನವಾಪಿ ಮಸೀದಿ ಆವರಣದಲ್ಲಿಯೇ ಇರುವ ಶೃಂಗಾರ ಗೌರಿ ದೇವಸ್ಥಾನದಲ್ಲಿ ನಿತ್ಯ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಆಧರಿಸಿ ಈಗ ಕೋರ್ಟ್ ಮಸೀದಿ ಒಳಗೆ ಸಮೀಕ್ಷೆ ಮತ್ತು ವಿಡಿಯೊಗ್ರಫಿ ನಡೆಸಲು ಆದೇಶಿಸಿದೆ.</p>.<p>ಮತ್ತೊಬ್ಬ ಅರ್ಜಿದಾರ ವಿಜಯ್ ಶಂಕರ್ ರಸ್ತೋಗಿ ಅವರು, ಮಸೀದಿ ಸ್ಥಳ ಸೇರಿದಂತೆ ಇಡೀ ಆವರಣ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಸೇರಿದ್ದಾಗಿದೆ ಎಂದು ವಾದಿಸಿದ್ದು, ಈ ಅರ್ಜಿಯು 1991ರಿಂದ ಕೋರ್ಟ್ನಲ್ಲಿದೆ.</p>.<p>ಕಾಶಿ ವಿಶ್ವನಾಥ ದೇವಸ್ಥಾನವನ್ನು ಎರಡು ಸಾವಿರ ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ಈ ದೇವಸ್ಥಾನವನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆಡಳಿತದಲ್ಲಿ ನೆಲಸಮಗೊಳಿಸಲಾಗಿದೆ ಎಂದು ರಸ್ತೋಗಿ ವಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong>ಉತ್ತರ ಪ್ರದೇಶದಲ್ಲಿ ಕಾಶಿ ವಿಶ್ವನಾಥ ದೇಗುಲಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿಯ ಒಳಗೆ ಸಮೀಕ್ಷೆ, ವಿಡಿಯೊ ಚಿತ್ರೀಕರಣ ಮುಂದುವರಿಯಲಿದೆ ಎಂದು ವಾರಾಣಸಿಯ ಸ್ಥಳೀಯ ನ್ಯಾಯಾಲಯ ಹೇಳಿದೆ.</p>.<p>ಮಸೀದಿ ಸ್ಥಳದ ಸಮೀಕ್ಷೆ ಮತ್ತು ವಿಡಿಯೊ ಚಿತ್ರೀಕರಣ ನಿಲ್ಲಿಸಲು ಆದೇಶಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಕೋರ್ಟ್ ತಳ್ಳಿಹಾಕಿತು.</p>.<p>ಮೇ 17ರೊಳಗೆ ಸಮೀಕ್ಷೆ ಮುಗಿಸಿ, ವರದಿ ಸಲ್ಲಿಸಬೇಕು ಎಂದೂ ಆದೇಶಿಸಿತು.ಕೆಳಮಹಡಿ, ಮುಚ್ಚಿದ ಕೊಠಡಿಗಳು ಸೇರಿ ಸಂಪೂರ್ಣವಾಗಿ ಸಮೀಕ್ಷೆ ಕಾರ್ಯ ನಡೆಯಬೇಕು ಎಂದು ಕೋರ್ಟ್ ಆದೇಶಿಸಿತು.</p>.<p>ಅಜಯ್ ಕುಮಾರ್ ಮಿಶ್ರಾ ಅವರನ್ನು ಅಡ್ವೊಕೇಟ್ ಕಮಿಷನರ್ ಸ್ಥಾನದಿಂದ ಕೈಬಿಡಬೇಕು ಎಂದು ಕೋರಿದ್ದ ಮುಸಲ್ಮಾನರ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತು. ಅಲ್ಲದೆ, ಮಿಶ್ರಾ ಅವರಿಗೆ ನೆರವಾಗಲು ಹೆಚ್ಚುವರಿ ಕಮಿಷನರ್ ಮತ್ತು ಸಹಾಯಕ ಕಮಿಷನರ್ ಅವರನ್ನು ಕೋರ್ಟ್ ನೇಮಕ ಮಾಡಿತು.</p>.<p>ಸಮೀಕ್ಷೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮುಸಲ್ಮಾನ ಸಂಘಟನೆಗಳು ಯಾವುದೇ ಕೋರ್ಟ್ ಆದೇಶವಿರದಿದ್ದರೂ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದವು.</p>.<p>ಕಾಶಿ ವಿಶ್ವನಾಥ ದೇವಸ್ಥಾನ –ಜ್ಞಾನವಾಪಿ ಮಸೀದಿ ಆವರಣದಲ್ಲಿಯೇ ಇರುವ ಶೃಂಗಾರ ಗೌರಿ ದೇವಸ್ಥಾನದಲ್ಲಿ ನಿತ್ಯ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಆಧರಿಸಿ ಈಗ ಕೋರ್ಟ್ ಮಸೀದಿ ಒಳಗೆ ಸಮೀಕ್ಷೆ ಮತ್ತು ವಿಡಿಯೊಗ್ರಫಿ ನಡೆಸಲು ಆದೇಶಿಸಿದೆ.</p>.<p>ಮತ್ತೊಬ್ಬ ಅರ್ಜಿದಾರ ವಿಜಯ್ ಶಂಕರ್ ರಸ್ತೋಗಿ ಅವರು, ಮಸೀದಿ ಸ್ಥಳ ಸೇರಿದಂತೆ ಇಡೀ ಆವರಣ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಸೇರಿದ್ದಾಗಿದೆ ಎಂದು ವಾದಿಸಿದ್ದು, ಈ ಅರ್ಜಿಯು 1991ರಿಂದ ಕೋರ್ಟ್ನಲ್ಲಿದೆ.</p>.<p>ಕಾಶಿ ವಿಶ್ವನಾಥ ದೇವಸ್ಥಾನವನ್ನು ಎರಡು ಸಾವಿರ ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ಈ ದೇವಸ್ಥಾನವನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆಡಳಿತದಲ್ಲಿ ನೆಲಸಮಗೊಳಿಸಲಾಗಿದೆ ಎಂದು ರಸ್ತೋಗಿ ವಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>