<p><strong>ನವದೆಹಲಿ:</strong> ಮಧ್ಯಸ್ಥಿಕೆ ಮತ್ತು ರಾಜೀಸಂಧಾನ ಕಾಯ್ದೆ–1996ರ ಅಡಿಯಲ್ಲಿ ನ್ಯಾಯಾಲಯಗಳು ಮಧ್ಯಸ್ಥಿಕೆ ತೀರ್ಪುಗಳನ್ನು ಬದಲಾಯಿಸಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ.</p>.<p>1996ರ ಕಾಯ್ದೆಯ ಅಡಿಯಲ್ಲಿ, ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ, ಮಧ್ಯಸ್ಥಿಕೆ ತೀರ್ಪುಗಳಲ್ಲಿ ನ್ಯಾಯಾಲಯ ಬದಲಾವಣೆ ತರಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಪೀಠವು ಬಹುಮತದ ತೀರ್ಪಿನಲ್ಲಿ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಸಂಜಯ್ ಕುಮಾರ್, ಆಗಸ್ಟೀನ್ ಜಾರ್ಜ್ ಮಸೀಹ್, ಕೆ.ವಿ. ವಿಶ್ವನಾಥನ್ ಅವರೂ ಈ ಪೀಠದಲ್ಲಿ ಇದ್ದರು. ನ್ಯಾಯಮೂರ್ತಿ ವಿಶ್ವನಾಥನ್ ಅವರು ಮಾತ್ರ ಭಿನ್ನ ತೀರ್ಪು ಬರೆದಿದ್ದು, ಮಧ್ಯಸ್ಥಿಕೆ ತೀರ್ಪುಗಳನ್ನು ನ್ಯಾಯಾಲಯಗಳು ಬದಲಾಯಿಸುವಂತಿಲ್ಲ ಎಂದು ಹೇಳಿದ್ದಾರೆ.</p>.<p>ಸುಪ್ರೀಂ ಕೋರ್ಟ್ನ ಈ ತೀರ್ಪು ವಾಣಿಜ್ಯ ವಿಚಾರಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ದೇಶದ ಹಾಗೂ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರಗಳು ನೀಡಿದ ತೀರ್ಪುಗಳ ಮೇಲೆ ಪರಿಣಾಮ ಬೀರಲಿದೆ.</p>.<p>ತೀರ್ಪು ಪ್ರಕಟಿಸಿದ ಸಿಜೆಐ ಅವರು, ಮಧ್ಯಸ್ಥಿಕೆ ಕೇಂದ್ರಗಳು ನೀಡಿದ ತೀರ್ಪುಗಳಲ್ಲಿ ಬದಲಾವಣೆ ತರುವಾಗ ನ್ಯಾಯಾಲಯಗಳು ಎಚ್ಚರಿಕೆ ವಹಿಸಬೇಕು ಎಂಬ ಕಿವಿಮಾತು ಹೇಳಿದ್ದಾರೆ.</p>.<p>‘ಸಂವಿಧಾನದ 142ನೆಯ ವಿಧಿಯು ಸುಪ್ರೀಂ ಕೋರ್ಟ್ಗೆ ನೀಡಿರುವ ವಿಶೇಷ ಅಧಿಕಾರವನ್ನು ಬಳಸಿ ಮಧ್ಯಸ್ಥಿಕೆ ಕೇಂದ್ರಗಳ ತೀರ್ಪುಗಳಲ್ಲಿ ಬದಲಾವಣೆ ತರಬಹುದು. ಆದರೆ ಈ ಅಧಿಕಾರವನ್ನು ಸಂವಿಧಾನದ ಚೌಕಟ್ಟಿನ ಒಳಗೆ ಬಹಳ ಎಚ್ಚರಿಕೆಯಿಂದ ಬಳಸಬೇಕು’ ಎಂದು ಸಿಜೆಐ ಖನ್ನಾ ಸ್ಪಷ್ಟಪಡಿಸಿದ್ದಾರೆ.</p>.<p>‘ಮಧ್ಯಸ್ಥಿಕೆ ಮತ್ತು ರಾಜೀಸಂಧಾನ ಕಾಯ್ದೆಯ ಸೆಕ್ಷನ್ 34 ಹಾಗೂ 37ರ ಅಡಿಯಲ್ಲಿ, ಮಧ್ಯಸ್ಥಿಕೆ ಕೇಂದ್ರದ ತೀರ್ಪು ಬದಲಾವಣೆ ಮಾಡಲು ನ್ಯಾಯಾಲಯಗಳಿಗೆ ಸೀಮಿತ ಅಧಿಕಾರ ಇದೆ’ ಎಂದು ಸಿಜೆಐ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಧ್ಯಸ್ಥಿಕೆ ಮತ್ತು ರಾಜೀಸಂಧಾನ ಕಾಯ್ದೆ–1996ರ ಅಡಿಯಲ್ಲಿ ನ್ಯಾಯಾಲಯಗಳು ಮಧ್ಯಸ್ಥಿಕೆ ತೀರ್ಪುಗಳನ್ನು ಬದಲಾಯಿಸಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ.</p>.<p>1996ರ ಕಾಯ್ದೆಯ ಅಡಿಯಲ್ಲಿ, ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ, ಮಧ್ಯಸ್ಥಿಕೆ ತೀರ್ಪುಗಳಲ್ಲಿ ನ್ಯಾಯಾಲಯ ಬದಲಾವಣೆ ತರಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ನೇತೃತ್ವದ ಪೀಠವು ಬಹುಮತದ ತೀರ್ಪಿನಲ್ಲಿ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಸಂಜಯ್ ಕುಮಾರ್, ಆಗಸ್ಟೀನ್ ಜಾರ್ಜ್ ಮಸೀಹ್, ಕೆ.ವಿ. ವಿಶ್ವನಾಥನ್ ಅವರೂ ಈ ಪೀಠದಲ್ಲಿ ಇದ್ದರು. ನ್ಯಾಯಮೂರ್ತಿ ವಿಶ್ವನಾಥನ್ ಅವರು ಮಾತ್ರ ಭಿನ್ನ ತೀರ್ಪು ಬರೆದಿದ್ದು, ಮಧ್ಯಸ್ಥಿಕೆ ತೀರ್ಪುಗಳನ್ನು ನ್ಯಾಯಾಲಯಗಳು ಬದಲಾಯಿಸುವಂತಿಲ್ಲ ಎಂದು ಹೇಳಿದ್ದಾರೆ.</p>.<p>ಸುಪ್ರೀಂ ಕೋರ್ಟ್ನ ಈ ತೀರ್ಪು ವಾಣಿಜ್ಯ ವಿಚಾರಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ದೇಶದ ಹಾಗೂ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರಗಳು ನೀಡಿದ ತೀರ್ಪುಗಳ ಮೇಲೆ ಪರಿಣಾಮ ಬೀರಲಿದೆ.</p>.<p>ತೀರ್ಪು ಪ್ರಕಟಿಸಿದ ಸಿಜೆಐ ಅವರು, ಮಧ್ಯಸ್ಥಿಕೆ ಕೇಂದ್ರಗಳು ನೀಡಿದ ತೀರ್ಪುಗಳಲ್ಲಿ ಬದಲಾವಣೆ ತರುವಾಗ ನ್ಯಾಯಾಲಯಗಳು ಎಚ್ಚರಿಕೆ ವಹಿಸಬೇಕು ಎಂಬ ಕಿವಿಮಾತು ಹೇಳಿದ್ದಾರೆ.</p>.<p>‘ಸಂವಿಧಾನದ 142ನೆಯ ವಿಧಿಯು ಸುಪ್ರೀಂ ಕೋರ್ಟ್ಗೆ ನೀಡಿರುವ ವಿಶೇಷ ಅಧಿಕಾರವನ್ನು ಬಳಸಿ ಮಧ್ಯಸ್ಥಿಕೆ ಕೇಂದ್ರಗಳ ತೀರ್ಪುಗಳಲ್ಲಿ ಬದಲಾವಣೆ ತರಬಹುದು. ಆದರೆ ಈ ಅಧಿಕಾರವನ್ನು ಸಂವಿಧಾನದ ಚೌಕಟ್ಟಿನ ಒಳಗೆ ಬಹಳ ಎಚ್ಚರಿಕೆಯಿಂದ ಬಳಸಬೇಕು’ ಎಂದು ಸಿಜೆಐ ಖನ್ನಾ ಸ್ಪಷ್ಟಪಡಿಸಿದ್ದಾರೆ.</p>.<p>‘ಮಧ್ಯಸ್ಥಿಕೆ ಮತ್ತು ರಾಜೀಸಂಧಾನ ಕಾಯ್ದೆಯ ಸೆಕ್ಷನ್ 34 ಹಾಗೂ 37ರ ಅಡಿಯಲ್ಲಿ, ಮಧ್ಯಸ್ಥಿಕೆ ಕೇಂದ್ರದ ತೀರ್ಪು ಬದಲಾವಣೆ ಮಾಡಲು ನ್ಯಾಯಾಲಯಗಳಿಗೆ ಸೀಮಿತ ಅಧಿಕಾರ ಇದೆ’ ಎಂದು ಸಿಜೆಐ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>