ಏತನ್ಮಧ್ಯೆ ಸೋನಿಯಾ ಗಾಂಧಿ, ಶರದ್ ಪವಾರ್, ಉದ್ದವ್ ಠಾಕ್ರೆ, ಮಮತಾ ಬ್ಯಾನರ್ಜಿ, ಎಂ.ಕೆ. ಸ್ಟಾಲಿನ್, ಹೇಮಂತ್ ಸೊರೆನ್ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ವಿರೋಧ ಪಕ್ಷದ 12 ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಂಟಿ ಪತ್ರವನ್ನು ಬರೆದಿದ್ದಾರೆ. ಇದರಲ್ಲಿ ದೇಶದಾದ್ಯಂತ ಉಚಿತ ಸಾರ್ವತ್ರಿಕ ಕೋವಿಡ್ ಲಸಿಕೆ ಅಭಿಯಾನ, ಸೆಂಟ್ರಲ್ ವಿಸ್ತಾಯೋಜನೆಯ ನಿರ್ಮಾಣವನ್ನು ಸ್ಥಗಿತಗೊಳಿಸುವುದು ಮತ್ತು ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಮನವಿ ಮಾಡಲಾಗಿದೆ.