<p><strong>ನವದೆಹಲಿ:</strong> ಭಾರತದಲ್ಲಿ ಕೊರೊನಾ ಸೋಂಕಿನಿಂದ ಇಲ್ಲಿಯವರೆಗೆ 9 ಮಂದಿ ಸಾವಿಗೀಡಾಗಿದ್ದು, ಸೋಂಕಿತರ ಸಂಖ್ಯೆ 500ಕ್ಕೇರಿದೆ. ದೇಶದ 75 ಜಿಲ್ಲೆಗಳನ್ನು ಲಾಕ್ಡೌನ್ ಮಾಡಿದ್ದು, ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣ ಪತ್ತೆಯಾಗಿದೆ.</p>.<p><strong>ದೆಹಲಿಯಲ್ಲಿ ಹೊಸ ಪ್ರಕರಣ ಇಲ್ಲ : ಕೇಜ್ರಿವಾಲ್</strong><br />ದೆಹಲಿಯಲ್ಲಿ ಮಂಗಳವಾರ ಕೋವಿಡ್-19 ಹೊಸ ಪ್ರಕರಣಗಳು ವರದಿಯಾಗಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಪರಿಸ್ಥಿತಿ ಕೈಮೀರದಂತೆ ನೋಡಿಕೊಳ್ಳುವುದೇ ಈಗಿರುವ ಸವಾಲು ಎಂದ ಅವರು ಕೋವಿಡ್ -19 ಸೋಂಕು ತಗಲಿ ಆಸ್ಪತ್ರೆಗೆ ದಾಖಲಾಗಿದ್ದ 5 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಟ್ವೀಟಿಸಿದ್ದಾರೆ. ದೆಹಲಿಯಲ್ಲಿ ಕೋವಿಡ್-19 ಸೋಂಕು ಇರುವ 30 ಪ್ರಕರಣಗಳಿವೆ.<br /></p>.<p><strong>ಈಶಾನ್ಯ ರಾಜ್ಯಗಳಲ್ಲಿ ಮೊದಲ ಪ್ರಕರಣ ಪತ್ತೆ</strong><br />ಬ್ರಿಟನ್ನಿಂದ ಮಣಿಪುರಕ್ಕೆ ಮರಳಿದ್ದ 23ರ ಹರೆಯದ ಮಹಿಳೆಯೊಬ್ಬರಿಗೆ ಕೋವಿಡ್-19 ಸೋಂಕು ಇರುವುದ ಪತ್ತೆಯಾಗಿದೆ. ಈಶಾನ್ಯ ರಾಜ್ಯದಲ್ಲಿ ಪತ್ತೆಯಾದ ಮೊದಲ ಪ್ರಕರಣ ಇದು.<br /></p>.<p><strong>ಗುಜರಾತ್ನಲ್ಲಿ ಹೊಸ ನಾಲ್ಕು ಪ್ರಕರಣ</strong><br />ಗುಜರಾತಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೇರಿದೆ. ಮಂಗಳವಾರ ಹೊಸ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಹೊರದೇಶಕ್ಕೆ ಹೋಗಿ ಬಂದ ವ್ಯಕ್ತಿಯಿಂದ ಇತರ ಮೂವರಿಗೆ ಈ ಸೋಂಕು ತಗಲಿದೆ ಎಂದು ಆರೋಗ್ಯ ಇಲಾಖೆಯ ಕಾರ್ಯದರ್ಶಿ ಜಯಂತಿ ರವಿ ತಿಳಿಸಿದ್ದಾರೆ.</p>.<p><strong>ಮುಂಜಾಗ್ರತಾ ಕ್ರಮಗಳಿಗೆ ಸಹಕರಿಸದ ವ್ಯಕ್ತಿಯ ಬಂಧನ</strong><br />ಕೊರೊನಾ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಿದರೂ ಅದನ್ನು ಪಾಲಿಸದೇ ಇರುವ ವಿಮಾನ ಪ್ರಯಾಣಿಕರೊಬ್ಬರನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p><strong>ಮಧ್ಯಪ್ರದೇಶದ ಭೋಪಾಲ್ , ಜಬಲ್ಪುರ್ ನಗರದಲ್ಲಿ ಕರ್ಫ್ಯೂ ಜಾರಿ</strong><br />ಕೊರೊನಾ ಸೋಂಕು ಪತ್ತೆಯಾಗಿರುವ ಭೋಪಾಲ್ ಮತ್ತು ಜಬಲ್ಪುರ್ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲು ಮಧ್ಯಪ್ರದೇಶ ಸರ್ಕಾರ ಸೋಮವಾರ ಮಧ್ಯರಾತ್ರಿ ತೀರ್ಮಾನ ಕೈಗೊಂಡಿದೆ.<br />ರಾತ್ರಿ ಸಭೆ ಕರೆದ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ನಗರಗಳಲ್ಲಿ ಕರ್ಫ್ಯೂ ಜಾರಿಗೆ ಆದೇಶ ನೀಡಿದ್ದಾರೆ. ಇಲ್ಲಿಯವರೆಗೆ ಜಬಲ್ಪುರ್ನಲ್ಲಿ 5 ಮತ್ತು ಭೋಪಾಲ್ನಲ್ಲಿ 1 ಪ್ರಕರಣ ಪತ್ತೆಯಾಗಿದೆ. ಇಲ್ಲಿನ 51 ಜಿಲ್ಲೆಗಳ ಪೈಕಿ 39 ಜಿಲ್ಲೆಗಳು ಲಾಕ್ಡೌನ್ ಆಗಿದೆ, ಅದೇ ವೇಳೆ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಸಮಸ್ಯೆಯುಂಟಾಗಬಾರದು ಎಂದು ಚೌಹಾಣ್ ಅಧಿಕಾರಿಗಳಿಗೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದಲ್ಲಿ ಕೊರೊನಾ ಸೋಂಕಿನಿಂದ ಇಲ್ಲಿಯವರೆಗೆ 9 ಮಂದಿ ಸಾವಿಗೀಡಾಗಿದ್ದು, ಸೋಂಕಿತರ ಸಂಖ್ಯೆ 500ಕ್ಕೇರಿದೆ. ದೇಶದ 75 ಜಿಲ್ಲೆಗಳನ್ನು ಲಾಕ್ಡೌನ್ ಮಾಡಿದ್ದು, ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸೋಂಕು ಪ್ರಕರಣ ಪತ್ತೆಯಾಗಿದೆ.</p>.<p><strong>ದೆಹಲಿಯಲ್ಲಿ ಹೊಸ ಪ್ರಕರಣ ಇಲ್ಲ : ಕೇಜ್ರಿವಾಲ್</strong><br />ದೆಹಲಿಯಲ್ಲಿ ಮಂಗಳವಾರ ಕೋವಿಡ್-19 ಹೊಸ ಪ್ರಕರಣಗಳು ವರದಿಯಾಗಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಪರಿಸ್ಥಿತಿ ಕೈಮೀರದಂತೆ ನೋಡಿಕೊಳ್ಳುವುದೇ ಈಗಿರುವ ಸವಾಲು ಎಂದ ಅವರು ಕೋವಿಡ್ -19 ಸೋಂಕು ತಗಲಿ ಆಸ್ಪತ್ರೆಗೆ ದಾಖಲಾಗಿದ್ದ 5 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಟ್ವೀಟಿಸಿದ್ದಾರೆ. ದೆಹಲಿಯಲ್ಲಿ ಕೋವಿಡ್-19 ಸೋಂಕು ಇರುವ 30 ಪ್ರಕರಣಗಳಿವೆ.<br /></p>.<p><strong>ಈಶಾನ್ಯ ರಾಜ್ಯಗಳಲ್ಲಿ ಮೊದಲ ಪ್ರಕರಣ ಪತ್ತೆ</strong><br />ಬ್ರಿಟನ್ನಿಂದ ಮಣಿಪುರಕ್ಕೆ ಮರಳಿದ್ದ 23ರ ಹರೆಯದ ಮಹಿಳೆಯೊಬ್ಬರಿಗೆ ಕೋವಿಡ್-19 ಸೋಂಕು ಇರುವುದ ಪತ್ತೆಯಾಗಿದೆ. ಈಶಾನ್ಯ ರಾಜ್ಯದಲ್ಲಿ ಪತ್ತೆಯಾದ ಮೊದಲ ಪ್ರಕರಣ ಇದು.<br /></p>.<p><strong>ಗುಜರಾತ್ನಲ್ಲಿ ಹೊಸ ನಾಲ್ಕು ಪ್ರಕರಣ</strong><br />ಗುಜರಾತಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೇರಿದೆ. ಮಂಗಳವಾರ ಹೊಸ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಹೊರದೇಶಕ್ಕೆ ಹೋಗಿ ಬಂದ ವ್ಯಕ್ತಿಯಿಂದ ಇತರ ಮೂವರಿಗೆ ಈ ಸೋಂಕು ತಗಲಿದೆ ಎಂದು ಆರೋಗ್ಯ ಇಲಾಖೆಯ ಕಾರ್ಯದರ್ಶಿ ಜಯಂತಿ ರವಿ ತಿಳಿಸಿದ್ದಾರೆ.</p>.<p><strong>ಮುಂಜಾಗ್ರತಾ ಕ್ರಮಗಳಿಗೆ ಸಹಕರಿಸದ ವ್ಯಕ್ತಿಯ ಬಂಧನ</strong><br />ಕೊರೊನಾ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಿದರೂ ಅದನ್ನು ಪಾಲಿಸದೇ ಇರುವ ವಿಮಾನ ಪ್ರಯಾಣಿಕರೊಬ್ಬರನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p><strong>ಮಧ್ಯಪ್ರದೇಶದ ಭೋಪಾಲ್ , ಜಬಲ್ಪುರ್ ನಗರದಲ್ಲಿ ಕರ್ಫ್ಯೂ ಜಾರಿ</strong><br />ಕೊರೊನಾ ಸೋಂಕು ಪತ್ತೆಯಾಗಿರುವ ಭೋಪಾಲ್ ಮತ್ತು ಜಬಲ್ಪುರ್ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲು ಮಧ್ಯಪ್ರದೇಶ ಸರ್ಕಾರ ಸೋಮವಾರ ಮಧ್ಯರಾತ್ರಿ ತೀರ್ಮಾನ ಕೈಗೊಂಡಿದೆ.<br />ರಾತ್ರಿ ಸಭೆ ಕರೆದ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ನಗರಗಳಲ್ಲಿ ಕರ್ಫ್ಯೂ ಜಾರಿಗೆ ಆದೇಶ ನೀಡಿದ್ದಾರೆ. ಇಲ್ಲಿಯವರೆಗೆ ಜಬಲ್ಪುರ್ನಲ್ಲಿ 5 ಮತ್ತು ಭೋಪಾಲ್ನಲ್ಲಿ 1 ಪ್ರಕರಣ ಪತ್ತೆಯಾಗಿದೆ. ಇಲ್ಲಿನ 51 ಜಿಲ್ಲೆಗಳ ಪೈಕಿ 39 ಜಿಲ್ಲೆಗಳು ಲಾಕ್ಡೌನ್ ಆಗಿದೆ, ಅದೇ ವೇಳೆ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಸಮಸ್ಯೆಯುಂಟಾಗಬಾರದು ಎಂದು ಚೌಹಾಣ್ ಅಧಿಕಾರಿಗಳಿಗೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>