‘ಜನಸಂಖ್ಯೆ, ಆಹಾರ ಭದ್ರತೆ, ಪೌಷ್ಟಿಕತೆ, ಸುಸ್ಥಿರ ಅಭಿವೃದ್ಧಿ ಪ್ರಮುಖ ವಿಷಯಗಳಾಗಿವೆ. ಕೋವಿಡ್ ಬಿಕ್ಕಟ್ಟಿನ ವೇಳೆಯಲ್ಲಿ ಇದಕ್ಕೆ ಇನ್ನಷ್ಟು ಮಹತ್ವವನ್ನು ನೀಡಲಾಗಿದೆ. ಅಲ್ಲದೆ ಈ ಸಮಯದಲ್ಲಿ ಸೋಂಕು ನಿಯಂತ್ರಣದೊಂದಿಗೆ ರೈತರಿಗೆ, ಕಾರ್ಮಿಕರಿಗೆ, ಹಿಂದುಳಿದ ಜನರಿಗೆ, ಸ್ವ–ಸಹಾಯ ಸಂಘಗಳಿಗೆ, ಮಹಿಳೆಯರಿಗೆ, ಬಡ ಹಿರಿಯ ನಾಗರಿಕರಿಗೆ ಹೆಚ್ಚಿನ ನೆರವುಗಳನ್ನು ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.