<p><strong>ನವದೆಹಲಿ: </strong>ದೇಶದಲ್ಲಿ ಈವರೆಗೆ ಕೋವಿಡ್ನಿಂದಾಗಿ 162 ವೈದ್ಯರು, 107 ದಾದಿಯರು ಮತ್ತು 44 ಆಶಾ ಕಾರ್ಯಕರ್ತೆಯರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಸರ್ಕಾರ, ರಾಜ್ಯಸಭೆಗೆ ಮಂಗಳವಾರ ತಿಳಿಸಿದೆ.</p>.<p>ಜನವರಿ 22 ವರೆಗೆ ರಾಜ್ಯಗಳು ನೀಡಿದ ಮಾಹಿತಿಗೆ ಆಧರಿಸಿ ಈ ಅಂಕಿಅಂಶವನ್ನು ಸಿದ್ಧಪಡಿಸಲಾಗಿದೆ.</p>.<p>ಕೋವಿಡ್ ಸಂಬಂಧಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರದ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರು,‘ ಈ ಅಂಕಿಅಂಶವನ್ನು ಭಾರತೀಯ ವೈದ್ಯಕೀಯ ಅಸೋಸಿಯೇಶನ್ ಸಿದ್ಧಪಡಿಸಿದೆ. ಇದನ್ನು ಆರೋಗ್ಯ ಸಚಿವಾಲಯವು ಪರಿಶೀಲಿಸಿದೆ. ಅಲ್ಲದೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ ಸಂತ್ರಸ್ತರ ಕುಟುಂಬದವರಿಗೆ ವಿಮೆ ವಿತರಣಾ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ’ ಎಂದರು.</p>.<p>‘ಕೋವಿಡ್ ಪೀಡಿತ ಮತ್ತು ಸೋಂಕಿನಿಂದ ಮೃತಪಟ್ಟ ಆರೋಗ್ಯ ಕಾರ್ಯಕರ್ತರ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳು ಕಾಳಜಿ ವಹಿಸುತ್ತಿದ್ದಾರೆ. ಈ ಸಂಬಂಧಿತ ಪ್ರಮಾಣೀಕರಣ ಕಾರ್ಯವನ್ನು ಕಾರ್ಯಕರ್ತರು ಕೆಲಸ ಮಾಡುತ್ತಿದ್ದ ಆರೋಗ್ಯ ಕೇಂದ್ರ, ಸಂಸ್ಥೆ ಮತ್ತು ಕಚೇರಿಗಳು ನೋಡಿಕೊಳ್ಳಲಿದೆ’ ಎಂದು ಅವರು ತಿಳಿಸಿದರು.</p>.<p>‘ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರಾಧಿಕಾರಗಳಲ್ಲಿ, ಕೇಂದ್ರ ಸರ್ಕಾರದ ಆಸ್ಪತ್ರೆಗಳು, ಎಐಐಎಂಎಸ್, ಐಎನ್ಐ ಮತ್ತು ಕೇಂದ್ರ ಸಚಿವಾಲಯಗಳಲ್ಲಿ ಆರೋಗ್ಯ ವಿಮೆಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಸಲ್ಲಿಸಬಹುದು. ಈ ಬಳಿಕ ಅಧಿಕಾರಿಗಳು ಅದನ್ನು ಪರಿಶೀಲಿಸಿ, ವಿಮಾ ಕಂಪೆನಿಗಳಿಗೆ ವರ್ಗಾಯಿಸುತ್ತಾರೆ’ ಎಂದು ಚೌಬೆ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಲ್ಲಿ ಈವರೆಗೆ ಕೋವಿಡ್ನಿಂದಾಗಿ 162 ವೈದ್ಯರು, 107 ದಾದಿಯರು ಮತ್ತು 44 ಆಶಾ ಕಾರ್ಯಕರ್ತೆಯರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಸರ್ಕಾರ, ರಾಜ್ಯಸಭೆಗೆ ಮಂಗಳವಾರ ತಿಳಿಸಿದೆ.</p>.<p>ಜನವರಿ 22 ವರೆಗೆ ರಾಜ್ಯಗಳು ನೀಡಿದ ಮಾಹಿತಿಗೆ ಆಧರಿಸಿ ಈ ಅಂಕಿಅಂಶವನ್ನು ಸಿದ್ಧಪಡಿಸಲಾಗಿದೆ.</p>.<p>ಕೋವಿಡ್ ಸಂಬಂಧಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರದ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರು,‘ ಈ ಅಂಕಿಅಂಶವನ್ನು ಭಾರತೀಯ ವೈದ್ಯಕೀಯ ಅಸೋಸಿಯೇಶನ್ ಸಿದ್ಧಪಡಿಸಿದೆ. ಇದನ್ನು ಆರೋಗ್ಯ ಸಚಿವಾಲಯವು ಪರಿಶೀಲಿಸಿದೆ. ಅಲ್ಲದೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ ಸಂತ್ರಸ್ತರ ಕುಟುಂಬದವರಿಗೆ ವಿಮೆ ವಿತರಣಾ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ’ ಎಂದರು.</p>.<p>‘ಕೋವಿಡ್ ಪೀಡಿತ ಮತ್ತು ಸೋಂಕಿನಿಂದ ಮೃತಪಟ್ಟ ಆರೋಗ್ಯ ಕಾರ್ಯಕರ್ತರ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳು ಕಾಳಜಿ ವಹಿಸುತ್ತಿದ್ದಾರೆ. ಈ ಸಂಬಂಧಿತ ಪ್ರಮಾಣೀಕರಣ ಕಾರ್ಯವನ್ನು ಕಾರ್ಯಕರ್ತರು ಕೆಲಸ ಮಾಡುತ್ತಿದ್ದ ಆರೋಗ್ಯ ಕೇಂದ್ರ, ಸಂಸ್ಥೆ ಮತ್ತು ಕಚೇರಿಗಳು ನೋಡಿಕೊಳ್ಳಲಿದೆ’ ಎಂದು ಅವರು ತಿಳಿಸಿದರು.</p>.<p>‘ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರಾಧಿಕಾರಗಳಲ್ಲಿ, ಕೇಂದ್ರ ಸರ್ಕಾರದ ಆಸ್ಪತ್ರೆಗಳು, ಎಐಐಎಂಎಸ್, ಐಎನ್ಐ ಮತ್ತು ಕೇಂದ್ರ ಸಚಿವಾಲಯಗಳಲ್ಲಿ ಆರೋಗ್ಯ ವಿಮೆಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ಸಲ್ಲಿಸಬಹುದು. ಈ ಬಳಿಕ ಅಧಿಕಾರಿಗಳು ಅದನ್ನು ಪರಿಶೀಲಿಸಿ, ವಿಮಾ ಕಂಪೆನಿಗಳಿಗೆ ವರ್ಗಾಯಿಸುತ್ತಾರೆ’ ಎಂದು ಚೌಬೆ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>