ನವದೆಹಲಿ: ಕೋವಿಡ್-19 ಲಸಿಕೆಗಳಿಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಜ್ಯ ಸರ್ಕಾರಗಳು ಪರಸ್ಪರ ಸ್ಪರ್ಧಿಸುವಂತೆ ಹಾಗೂ ಕಿತ್ತಾಡುವಂತೆ ಮಾಡಿರುವುದು ದೇಶಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಲಸಿಕೆ ಕೊರತೆ ಬಗ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ರಾಜ್ಯಗಳ ಪರವಾಗಿ ಕೇಂದ್ರ ಸರ್ಕಾರವೇ ಲಸಿಕೆಯನ್ನು ಖರೀದಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ರಾಜ್ಯಗಳು ಪರಸ್ಪರ ಸ್ಪರ್ಧಿಸುವಂತಾಗಿದೆ. ಉತ್ತರ ಪ್ರದೇಶವು ಮಹಾರಾಷ್ಟ್ರ ವಿರುದ್ಧ, ಮಹಾರಾಷ್ಟ್ರವು ಒಡಿಶಾದ ವಿರುದ್ಧ, ಒಡಿಶಾವು ದೆಹಲಿ ವಿರುದ್ಧ ಸ್ಪರ್ಧಿಸುತ್ತಿವೆ. ಹಾಗಿದ್ದರೆ ಎಲ್ಲಿದೆ ಭಾರತ? ದೇಶಕ್ಕೆ ಕೆಟ್ಟ ಹೆಸರನ್ನುಂಟು ಮಾಡಿದೆ. ದೇಶದೆಲ್ಲ ರಾಜ್ಯಗಳ ಪರವಾಗಿ 'ಭಾರತ' ಎಂಬ ಒಂದು ರಾಷ್ಟ್ರವಾಗಿಲಸಿಕೆಗಳನ್ನು ಖರೀದಿಸಬೇಕಾಗಿದೆ ಎಂದು ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
Indian states left to compete/fight with each other in international market. UP fighting Maha, Maha fighting Orissa, Orissa fighting Delhi. Where is “India”? Portrays such a bad image of India
— Arvind Kejriwal (@ArvindKejriwal) May 13, 2021
India, as one country, shud procure vaccines on behalf of all Indian states https://t.co/Etby5kenOk
ಮಗದೊಂದು ಟ್ವೀಟ್ನಲ್ಲಿ ಲಸಿಕೆ ಉತ್ಪಾದನಾ ರಾಷ್ಟ್ರಗಳನ್ನು ರಾಜ್ಯಗಳು ಪ್ರತ್ಯೇಕವಾಗಿ ಸಮೀಪಿಸುವ ಬದಲು ಭಾರತ ಸರ್ಕಾರವು ನೇರವಾಗಿ ಸಂಪರ್ಕಿಸಿದರೆ ಹೆಚ್ಚು ಚೌಕಾಶಿ ಮಾಡಬಹುದು. ಅಂತಹ ದೇಶಗಳೊಂದಿಗೆ ಮಾತುಕತೆ ನಡೆಸಲು ಭಾರತ ಸರ್ಕಾರಕ್ಕೆ ಹೆಚ್ಚಿನ ರಾಜತಾಂತ್ರಿಕ ಶಕ್ತಿಯಿದೆ ಎಂದು ಹೇಳಿದ್ದಾರೆ.
Also when we approach vaccine manufacturers and their countries as “India” rather than individual states, our bargaining power is much more, Indian govt has much more diplomatic space to negotiate with their countries. https://t.co/ZcMmbWTnsh
— Arvind Kejriwal (@ArvindKejriwal) May 13, 2021
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.