<p><strong>ನವದೆಹಲಿ: </strong>ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯವಿರುವಷ್ಟು ಆಮ್ಲಜನಕವನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿ ಡಿ.ವೈ.ಚಂದ್ರೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದ್ದು, ‘ಹೆಚ್ಚುವರಿ ಆಮ್ಲಜನಕ ಸಂಗ್ರಹವನ್ನು ವಿಕೇಂದ್ರಿಕರಣಗೊಳಿಸಬೇಕು ಎಂದು ಸೂಚಿಸಿದೆ.</p>.<p>‘ಇದರಿಂದ, ನಿತ್ಯದ ಆಮ್ಲಜನಕ ಪೂರೈಕೆಯಲ್ಲಿ ತುಸು ವ್ಯತ್ಯಾಸವಾದರೂ, ತಕ್ಷಣವೇ ಸರಿಪಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p>.<p>‘ಮುಂದಿನ ನಾಲ್ಕು ದಿನಗಳಲ್ಲಿ ತುರ್ತು ಬಳಕೆಗೆ ಬೇಕಾಗುವ ಆಮ್ಲಜನಕವನ್ನು ಸಂಗ್ರಹಿಸಬೇಕು. ಈ ದಾಸ್ತಾನು ಪ್ರತಿ ರಾಜ್ಯ ಮತ್ತು ಕೇಂದ್ರಾಳಿತ ಪ್ರದೇಶಕ್ಕೆ ಪೂರೈಕೆಯಾಗುತ್ತಿರುವುದನ್ನು ವರ್ಚುವಲ್ ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡಬೇಕು. ಇದು ದಿನ ನಿತ್ಯ ರಾಜ್ಯಗಳಿಗೆ ಪೂರೈಕೆಯಾಗುವ ಆಮ್ಲಜನಕದ ಜತೆಗೆ, ಹೆಚ್ಚುವರಿಯಾಗಿ ಪೂರೈಸಬೇಕು‘ ಎಂದು ನ್ಯಾಯಪೀಠ ಹೇಳಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/tamil-nadu-assembly-election-k-annamalai-aravakurichi-bjp-politics-aiadmk-dmk-827636.html" target="_blank">ಸೋಲು ಜೀವನದ ಒಂದು ಭಾಗ, ಹಲವು ಸೋಲುಗಳನ್ನು ನೋಡಿದ್ದೇನೆ: ಅಣ್ಣಾಮಲೈ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯವಿರುವಷ್ಟು ಆಮ್ಲಜನಕವನ್ನು ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿ ಡಿ.ವೈ.ಚಂದ್ರೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದ್ದು, ‘ಹೆಚ್ಚುವರಿ ಆಮ್ಲಜನಕ ಸಂಗ್ರಹವನ್ನು ವಿಕೇಂದ್ರಿಕರಣಗೊಳಿಸಬೇಕು ಎಂದು ಸೂಚಿಸಿದೆ.</p>.<p>‘ಇದರಿಂದ, ನಿತ್ಯದ ಆಮ್ಲಜನಕ ಪೂರೈಕೆಯಲ್ಲಿ ತುಸು ವ್ಯತ್ಯಾಸವಾದರೂ, ತಕ್ಷಣವೇ ಸರಿಪಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p>.<p>‘ಮುಂದಿನ ನಾಲ್ಕು ದಿನಗಳಲ್ಲಿ ತುರ್ತು ಬಳಕೆಗೆ ಬೇಕಾಗುವ ಆಮ್ಲಜನಕವನ್ನು ಸಂಗ್ರಹಿಸಬೇಕು. ಈ ದಾಸ್ತಾನು ಪ್ರತಿ ರಾಜ್ಯ ಮತ್ತು ಕೇಂದ್ರಾಳಿತ ಪ್ರದೇಶಕ್ಕೆ ಪೂರೈಕೆಯಾಗುತ್ತಿರುವುದನ್ನು ವರ್ಚುವಲ್ ಕಂಟ್ರೋಲ್ ರೂಮ್ ಮೂಲಕ ಮೇಲ್ವಿಚಾರಣೆ ಮಾಡಬೇಕು. ಇದು ದಿನ ನಿತ್ಯ ರಾಜ್ಯಗಳಿಗೆ ಪೂರೈಕೆಯಾಗುವ ಆಮ್ಲಜನಕದ ಜತೆಗೆ, ಹೆಚ್ಚುವರಿಯಾಗಿ ಪೂರೈಸಬೇಕು‘ ಎಂದು ನ್ಯಾಯಪೀಠ ಹೇಳಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/tamil-nadu-assembly-election-k-annamalai-aravakurichi-bjp-politics-aiadmk-dmk-827636.html" target="_blank">ಸೋಲು ಜೀವನದ ಒಂದು ಭಾಗ, ಹಲವು ಸೋಲುಗಳನ್ನು ನೋಡಿದ್ದೇನೆ: ಅಣ್ಣಾಮಲೈ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>