‘ಕೋವಿಡ್–19 ನಿಯಂತ್ರಣಕ್ಕಾಗಿ ಈ ಹಿಂದೆ ಆರಂಭಿಸಿದ್ದ ಕೇಂದ್ರಗಳನ್ನು ಹಲವು ರಾಜ್ಯಗಳು ಸ್ಥಗಿತಗೊಳಿಸಿವೆ. ಈ ಎಲ್ಲ ಕೇಂದ್ರಗಳನ್ನು ಕಾರ್ಯಾಚರಣೆಗೆ ಸಿದ್ಧಪಡಿಸಲು ಕ್ರಿಯಾಯೋಜನೆ ರೂಪಿಸಿ, ವೈದ್ಯರು, ಆಂಬುಲೆನ್ಸ್ ಇತ್ಯಾದಿ ಲಭ್ಯ ಇರುವಂತೆ ನೋಡಿಕೊಳ್ಳಿ’ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.