<p><strong>ಮುಂಬೈ:</strong> ವಾಣಿಜ್ಯ ನಗರಿ ಮುಂಬೈ ಹಾಗೂ ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಕೋವಿಡ್-19 ಲಸಿಕೆ ವಿತರಣೆಯನ್ನು ಎರಡು ದಿನಗಳ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.</p>.<p>'ಕೋವಿನ್' ಆ್ಯಪ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಜನವರಿ 17 ಹಾಗೂ 18ರಂದು ಮುಂಬೈನಲ್ಲಿ ಕೋವಿಡ್-19 ಲಸಿಕೆ ಹಂಚಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಮಾಹಿತಿ ಒದಗಿಸಿದೆ.</p>.<p>ಕೋವಿಡ್-19 ಲಸಿಕೆ ಪಡೆಯುವ ಮುಂಚೂಣಿಯ ಸೇನಾನಿಗಳ ಹೆಸರುಗಳನ್ನು ಕೋವಿನ್ ಆ್ಯಪ್ನಲ್ಲಿ ನೊಂದಾಯಿಸಬೇಕಿದೆ. ಈ ಸಂಬಂಧ ತಾಂತ್ರಿಕ ದೋಷ ಕಂಡುಬಂದಿದೆ. ಇದನ್ನೀಗ ಕೇಂದ್ರ ಸರ್ಕಾರ ಸರಿಪಡಿಸುತ್ತಿದೆ ಎಂದು ಉಲ್ಲೇಖಿಸಲಾಗಿದೆ.</p>.<p>ಮುಂಬೈನಲ್ಲಿ ಭಾನುವಾರ ಹಾಗೂ ಸೋಮವಾರ ಕೋವಿಡ್-19 ಲಸಿಕೆ ವಿತರಣೆಯು ಸ್ಥಗತಿಗೊಳ್ಳಲಿದ್ದು, ಮಂಗಳವಾರದಂದು ಆರಂಭಗೊಳ್ಳಲಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/ram-manohar-lohia-hospital-doctors-covishield-covaxin-797021.html" itemprop="url">ಕೋವಿಶೀಲ್ಡ್ ಬೇಕು, ಕೋವ್ಯಾಕ್ಸಿನ್ ಬೇಡ: ವೈದ್ಯರ ಮನವಿ </a></p>.<p>ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ರಾಜೇಶ್ ತೋಪೆ ಸಮಸ್ಯೆಯನ್ನು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರ ಗಮನಕ್ಕೆ ತಂದಿದ್ದಾರೆ. ಅಲ್ಲದೆ ಕೇಂದ್ರ ಸಚಿವರು ತುರ್ತಾಗಿ ಪರಿಹರಿಸುವ ಭರವಸೆ ನೀಡಿದ್ದಾರೆ.</p>.<p>ಕೋವಿಡ್-19 ಲಸಿಕೆ ಚುಚ್ಚುಮದ್ದು ಪಡೆಯುವ ಎಲ್ಲರೂ ಕೋವಿನ್ ಆ್ಯಪ್ನಲ್ಲಿ ನೊಂದಾಯಿಸುವುದು ಕಡ್ಡಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವಾಣಿಜ್ಯ ನಗರಿ ಮುಂಬೈ ಹಾಗೂ ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಕೋವಿಡ್-19 ಲಸಿಕೆ ವಿತರಣೆಯನ್ನು ಎರಡು ದಿನಗಳ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.</p>.<p>'ಕೋವಿನ್' ಆ್ಯಪ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಜನವರಿ 17 ಹಾಗೂ 18ರಂದು ಮುಂಬೈನಲ್ಲಿ ಕೋವಿಡ್-19 ಲಸಿಕೆ ಹಂಚಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಮಾಹಿತಿ ಒದಗಿಸಿದೆ.</p>.<p>ಕೋವಿಡ್-19 ಲಸಿಕೆ ಪಡೆಯುವ ಮುಂಚೂಣಿಯ ಸೇನಾನಿಗಳ ಹೆಸರುಗಳನ್ನು ಕೋವಿನ್ ಆ್ಯಪ್ನಲ್ಲಿ ನೊಂದಾಯಿಸಬೇಕಿದೆ. ಈ ಸಂಬಂಧ ತಾಂತ್ರಿಕ ದೋಷ ಕಂಡುಬಂದಿದೆ. ಇದನ್ನೀಗ ಕೇಂದ್ರ ಸರ್ಕಾರ ಸರಿಪಡಿಸುತ್ತಿದೆ ಎಂದು ಉಲ್ಲೇಖಿಸಲಾಗಿದೆ.</p>.<p>ಮುಂಬೈನಲ್ಲಿ ಭಾನುವಾರ ಹಾಗೂ ಸೋಮವಾರ ಕೋವಿಡ್-19 ಲಸಿಕೆ ವಿತರಣೆಯು ಸ್ಥಗತಿಗೊಳ್ಳಲಿದ್ದು, ಮಂಗಳವಾರದಂದು ಆರಂಭಗೊಳ್ಳಲಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/ram-manohar-lohia-hospital-doctors-covishield-covaxin-797021.html" itemprop="url">ಕೋವಿಶೀಲ್ಡ್ ಬೇಕು, ಕೋವ್ಯಾಕ್ಸಿನ್ ಬೇಡ: ವೈದ್ಯರ ಮನವಿ </a></p>.<p>ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ರಾಜೇಶ್ ತೋಪೆ ಸಮಸ್ಯೆಯನ್ನು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರ ಗಮನಕ್ಕೆ ತಂದಿದ್ದಾರೆ. ಅಲ್ಲದೆ ಕೇಂದ್ರ ಸಚಿವರು ತುರ್ತಾಗಿ ಪರಿಹರಿಸುವ ಭರವಸೆ ನೀಡಿದ್ದಾರೆ.</p>.<p>ಕೋವಿಡ್-19 ಲಸಿಕೆ ಚುಚ್ಚುಮದ್ದು ಪಡೆಯುವ ಎಲ್ಲರೂ ಕೋವಿನ್ ಆ್ಯಪ್ನಲ್ಲಿ ನೊಂದಾಯಿಸುವುದು ಕಡ್ಡಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>