<p><strong>ನವದೆಹಲಿ</strong>: ‘ಕೋವಿಡ್–19 ಲಸಿಕೆಯ ಕೊರತೆಯಿಂದ ದೇಶದಲ್ಲಿ ಲಸಿಕೆ ಕಾರ್ಯಕ್ರಮಕ್ಕೆ ತೀವ್ರ ಹಿನ್ನಡೆಯಾಗಿದೆ. ಹಲವು ರಾಜ್ಯಗಳು ಲಸಿಕೆ ಕೇಂದ್ರಗಳನ್ನು ಮುಚ್ಚಿವೆ ಎಂಬ ಹೇಳಿಕೆಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ. ಅವೆಲ್ಲ ತಿರುಚಿದ ಹೇಳಿಕೆಗಳು’ ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪೌಲ್ ಗುರುವಾರ ಹೇಳಿದರು.</p>.<p>‘ಕೋವಿಡ್–19 ಲಸಿಕೆಯನ್ನು ಪೂರೈಸುವ ಸಂಬಂಧ ಫೈಜರ್ ಕಂಪನಿಯ ಪ್ರಸ್ತಾವನೆ ಕುರಿತಂತೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಕೋಟ್ಯಂತರ ಜನರ ಹಿತಾಸಕ್ತಿ ಹಾಗೂ ಲಸಿಕೆಯ ಗುಣಮಟ್ಟವನ್ನು ಪರಿಗಣಿಸಿಯೇ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಅವರು ತಿರುಗೇಟು ನೀಡಿದ್ದಾರೆ.</p>.<p>ಡಾ.ಪೌಲ್ ಅವರು ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದ ತಜ್ಞರ ತಂಡದ (ಎನ್ಇಜಿವಿಎ) ಮುಖ್ಯಸ್ಥರೂ ಆಗಿದ್ದಾರೆ.</p>.<p>‘ಫೈಜರ್, ಮೊಡೆರ್ನಾ ಹಾಗೂ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಗಳೊಂದಿಗೆ ಕಳೆದ ವರ್ಷದಿಂದಲೇ ಸರ್ಕಾರ ಮಾತುಕತೆ ಆರಂಭಿಸಿದೆ. ಆದರೆ, ಈ ಕಂಪನಿಗಳ ಆದ್ಯತೆಗಳೇ ಬೇರೆಯಾಗಿವೆ. ಲಸಿಕೆ ವಿತರಣೆಗೆ ಸಂಬಂಧಿಸಿ ತಮ್ಮದೇ ಆದ ಕಟ್ಟುಪಾಡುಗಳನ್ನು ಅವು ಹೊಂದಿವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕೋವಿಡ್–19 ಲಸಿಕೆಯ ಕೊರತೆಯಿಂದ ದೇಶದಲ್ಲಿ ಲಸಿಕೆ ಕಾರ್ಯಕ್ರಮಕ್ಕೆ ತೀವ್ರ ಹಿನ್ನಡೆಯಾಗಿದೆ. ಹಲವು ರಾಜ್ಯಗಳು ಲಸಿಕೆ ಕೇಂದ್ರಗಳನ್ನು ಮುಚ್ಚಿವೆ ಎಂಬ ಹೇಳಿಕೆಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ. ಅವೆಲ್ಲ ತಿರುಚಿದ ಹೇಳಿಕೆಗಳು’ ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪೌಲ್ ಗುರುವಾರ ಹೇಳಿದರು.</p>.<p>‘ಕೋವಿಡ್–19 ಲಸಿಕೆಯನ್ನು ಪೂರೈಸುವ ಸಂಬಂಧ ಫೈಜರ್ ಕಂಪನಿಯ ಪ್ರಸ್ತಾವನೆ ಕುರಿತಂತೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಕೋಟ್ಯಂತರ ಜನರ ಹಿತಾಸಕ್ತಿ ಹಾಗೂ ಲಸಿಕೆಯ ಗುಣಮಟ್ಟವನ್ನು ಪರಿಗಣಿಸಿಯೇ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಅವರು ತಿರುಗೇಟು ನೀಡಿದ್ದಾರೆ.</p>.<p>ಡಾ.ಪೌಲ್ ಅವರು ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದ ತಜ್ಞರ ತಂಡದ (ಎನ್ಇಜಿವಿಎ) ಮುಖ್ಯಸ್ಥರೂ ಆಗಿದ್ದಾರೆ.</p>.<p>‘ಫೈಜರ್, ಮೊಡೆರ್ನಾ ಹಾಗೂ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಗಳೊಂದಿಗೆ ಕಳೆದ ವರ್ಷದಿಂದಲೇ ಸರ್ಕಾರ ಮಾತುಕತೆ ಆರಂಭಿಸಿದೆ. ಆದರೆ, ಈ ಕಂಪನಿಗಳ ಆದ್ಯತೆಗಳೇ ಬೇರೆಯಾಗಿವೆ. ಲಸಿಕೆ ವಿತರಣೆಗೆ ಸಂಬಂಧಿಸಿ ತಮ್ಮದೇ ಆದ ಕಟ್ಟುಪಾಡುಗಳನ್ನು ಅವು ಹೊಂದಿವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>