<p><strong>ನವದೆಹಲಿ</strong>: ದೇಶದಲ್ಲಿ ಪ್ರಸ್ತುತ 1.39 ಲಕ್ಷ ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇವುಗಳಲ್ಲಿ ಶೇ 76.5ರಷ್ಟು ಪ್ರಕರಣಗಳು ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿವೆ.</p>.<p class="bodytext">ಉಳಿದಂತೆ ಕಳೆದ 24 ಗಂಟೆಗಳ ಮಾಹಿತಿಯಂತೆ, 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತಲೂ ಕಡಿಮೆ ಇರುವುದು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಕೇರಳ ಮತ್ತು ಮಹಾರಾಷ್ಟ್ರದಲ್ಲಿಯೇ ಶೇ 74.72ರಷ್ಟು ಪ್ರಕರಣಗಳಿವೆ. ತ್ರಿಪುರಾ, ದಮನ್ ಮತ್ತು ಡಿಯು, ನಗರ್ ಹವೇಲಿಯಲ್ಲಿ ತಲಾ 2 ಸಕ್ರಿಯ ಪ್ರಕರಣಗಳಷ್ಟೇ ಇವೆ.</p>.<p>ಕಳೆದ 24 ಗಂಟೆಗಳಲ್ಲಿ 18 ರಾಜ್ಯಗಳಲ್ಲಿ ಒಂದು ಸಾವು ಪ್ರಕರಣ ವರದಿಯಾಗಿಲ್ಲ. 10 ರಾಜ್ಯಗಳಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಒಂದೂ ಸಾವಿನ ಪ್ರಕರಣ ವರದಿಯಾಗಿಲ್ಲ ಎಂದು ಸಚಿವಾಲಯ ವಿವರಿಸಿದೆ.</p>.<p>ಲಸಿಕೆ ಅಭಿಯಾನ: ಸೋಮವಾರ ಬೆಳಿಗ್ಗೆ 8 ಗಂಟೆಯವರೆಗೂ ಒಟ್ಟು 83 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಒಟ್ಟು 82,85,295 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.</p>.<p>ಎರಡನೇ ಹಂತದಲ್ಲಿ ಒಟ್ಟು 24,561 ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ಫೆ.13ರಂದು ಎರಡನೇ ಹಂತದ ಅಭಿಯಾನ ಆರಂಭವಾಗಿದೆ. ಮೊದಲ ಹಂತದಲ್ಲಿ ಲಸಿಕೆ ಪಡೆದವರಿಗೆ 28 ದಿನದ ನಂತರ ಎರಡನೇ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ.</p>.<p>ಲಸಿಕೆ ನೀಡಿಕೆಯಲ್ಲಿ 10 ರಾಜ್ಯಗಳಲ್ಲಿ ಉತ್ತಮ ಪ್ರಗತಿಯಾಗಿದೆ. ಒಟ್ಟು ಫಲಾನುಭವಿಗಳಲ್ಲಿ ಶೇ 69ರಷ್ಟು ಮಂದಿ 10 ರಾಜ್ಯಗಳಲ್ಲಿದ್ದಾರೆ. ಉತ್ತರ ಪ್ರದೇಶದಲ್ಲಿ ಗರಿಷ್ಠ ಅಂದರೆ ಶೇ 10.4ರಷ್ಟು ಫಲಾನುಭವಿಗಳಿಗೆ (8.58 ಲಕ್ಷ) ನೀಡಲಾಗಿದೆ.</p>.<p>ಕಳೆದ 24 ಗಂಟೆಗಳಲ್ಲಿ 9,489 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಗುಣಮುಖಗೊಂಡವರ ಸಂಖ್ಯೆ 1.06 ಕೋಟಿಗೆ ಏರಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 90 ಜನರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಪ್ರಸ್ತುತ 1.39 ಲಕ್ಷ ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಇವುಗಳಲ್ಲಿ ಶೇ 76.5ರಷ್ಟು ಪ್ರಕರಣಗಳು ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿವೆ.</p>.<p class="bodytext">ಉಳಿದಂತೆ ಕಳೆದ 24 ಗಂಟೆಗಳ ಮಾಹಿತಿಯಂತೆ, 33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತಲೂ ಕಡಿಮೆ ಇರುವುದು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಕೇರಳ ಮತ್ತು ಮಹಾರಾಷ್ಟ್ರದಲ್ಲಿಯೇ ಶೇ 74.72ರಷ್ಟು ಪ್ರಕರಣಗಳಿವೆ. ತ್ರಿಪುರಾ, ದಮನ್ ಮತ್ತು ಡಿಯು, ನಗರ್ ಹವೇಲಿಯಲ್ಲಿ ತಲಾ 2 ಸಕ್ರಿಯ ಪ್ರಕರಣಗಳಷ್ಟೇ ಇವೆ.</p>.<p>ಕಳೆದ 24 ಗಂಟೆಗಳಲ್ಲಿ 18 ರಾಜ್ಯಗಳಲ್ಲಿ ಒಂದು ಸಾವು ಪ್ರಕರಣ ವರದಿಯಾಗಿಲ್ಲ. 10 ರಾಜ್ಯಗಳಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಒಂದೂ ಸಾವಿನ ಪ್ರಕರಣ ವರದಿಯಾಗಿಲ್ಲ ಎಂದು ಸಚಿವಾಲಯ ವಿವರಿಸಿದೆ.</p>.<p>ಲಸಿಕೆ ಅಭಿಯಾನ: ಸೋಮವಾರ ಬೆಳಿಗ್ಗೆ 8 ಗಂಟೆಯವರೆಗೂ ಒಟ್ಟು 83 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಒಟ್ಟು 82,85,295 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.</p>.<p>ಎರಡನೇ ಹಂತದಲ್ಲಿ ಒಟ್ಟು 24,561 ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ಫೆ.13ರಂದು ಎರಡನೇ ಹಂತದ ಅಭಿಯಾನ ಆರಂಭವಾಗಿದೆ. ಮೊದಲ ಹಂತದಲ್ಲಿ ಲಸಿಕೆ ಪಡೆದವರಿಗೆ 28 ದಿನದ ನಂತರ ಎರಡನೇ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ.</p>.<p>ಲಸಿಕೆ ನೀಡಿಕೆಯಲ್ಲಿ 10 ರಾಜ್ಯಗಳಲ್ಲಿ ಉತ್ತಮ ಪ್ರಗತಿಯಾಗಿದೆ. ಒಟ್ಟು ಫಲಾನುಭವಿಗಳಲ್ಲಿ ಶೇ 69ರಷ್ಟು ಮಂದಿ 10 ರಾಜ್ಯಗಳಲ್ಲಿದ್ದಾರೆ. ಉತ್ತರ ಪ್ರದೇಶದಲ್ಲಿ ಗರಿಷ್ಠ ಅಂದರೆ ಶೇ 10.4ರಷ್ಟು ಫಲಾನುಭವಿಗಳಿಗೆ (8.58 ಲಕ್ಷ) ನೀಡಲಾಗಿದೆ.</p>.<p>ಕಳೆದ 24 ಗಂಟೆಗಳಲ್ಲಿ 9,489 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಗುಣಮುಖಗೊಂಡವರ ಸಂಖ್ಯೆ 1.06 ಕೋಟಿಗೆ ಏರಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 90 ಜನರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>