<p><strong>ನವದೆಹಲಿ</strong>: ವ್ಯಾಪಕಪರೀಕ್ಷಾ ಸೌಲಭ್ಯಗಳಿಲ್ಲದೇ ಭಾರತವು ಕೋವಿಡ್-19 ಸವಾಲುಗಳನ್ನು ಜಯಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.</p>.<p>ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಪರೀಕ್ಷಿಸುವಿಕೆ ಮತ್ತು ಪತ್ತೆ ಹಚ್ಚುವಿಕೆ ಪ್ರಮುಖ ಅಸ್ತ್ರಗಳಾಗಿವೆ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ವಿಡಿಯೊದಲ್ಲಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.</p>.<p>'ಪರೀಕ್ಷಾ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳಿವೆ. ಪರೀಕ್ಷೆಗಳು ವ್ಯಾಪಕವಾಗಿ ನಡೆಯದಿದ್ದರೆ ಕೋವಿಡ್-19 ಅನ್ನು ಜಯಿಸಲು ಸಾಧ್ಯವಿಲ್ಲ' ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.</p>.<p>ಕೊರೊನಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಲವು ನಾಯಕರು ವಿಡಿಯೊದಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಾರೆ.</p>.<p>ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರ ಸಮಸ್ಯೆಯ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, 'ವಲಸೆ ಕಾರ್ಮಿಕರ ರಕ್ಷಣೆಗಾಗಿ ಪಕ್ಷವು ಯೋಜನೆಯನ್ನು ರೂಪಿಸಲಿದೆ' ಎಂದಿದ್ದಾರೆ.</p>.<p>'ಪರೀಕ್ಷಿಸುವುದು ಮತ್ತು ಪತ್ತೆ ಹಚ್ಚುವುದು ಕೋವಿಡ್-19 ವಿರುದ್ಧದ ಹೋರಾಟದ ಅಸ್ತ್ರಗಳು. ವಲಸೆ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಮಾನವತಾವಾದ, ರಕ್ಷಣೆ ಮತ್ತು ಆರ್ಥಿಕ ಭದ್ರತೆಗಳನ್ನು ಅನುಸರಿಸಬೇಕು. ನಮ್ಮ ಮುಂದಿರುವ ದಾರಿ ಇದೊಂದೇ' ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವು ವಿಡಿಯೊ ಟ್ವೀಟ್ ಮಾಡಿದೆ. </p>.<p>ವಿಡಿಯೊದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ, ಮುಖಂಡರಾದ ಕೆ.ಸಿ.ವೇಣುಗೋಪಾಲ್, ಜಯರಾಮ್ ರಮೇಶ್ ಮತ್ತು ಮನೀಷ್ ತಿವಾರಿ ಮಾತನಾಡಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವ್ಯಾಪಕಪರೀಕ್ಷಾ ಸೌಲಭ್ಯಗಳಿಲ್ಲದೇ ಭಾರತವು ಕೋವಿಡ್-19 ಸವಾಲುಗಳನ್ನು ಜಯಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.</p>.<p>ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಪರೀಕ್ಷಿಸುವಿಕೆ ಮತ್ತು ಪತ್ತೆ ಹಚ್ಚುವಿಕೆ ಪ್ರಮುಖ ಅಸ್ತ್ರಗಳಾಗಿವೆ ಎಂದು ಕಾಂಗ್ರೆಸ್ ಬಿಡುಗಡೆ ಮಾಡಿರುವ ವಿಡಿಯೊದಲ್ಲಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.</p>.<p>'ಪರೀಕ್ಷಾ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳಿವೆ. ಪರೀಕ್ಷೆಗಳು ವ್ಯಾಪಕವಾಗಿ ನಡೆಯದಿದ್ದರೆ ಕೋವಿಡ್-19 ಅನ್ನು ಜಯಿಸಲು ಸಾಧ್ಯವಿಲ್ಲ' ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.</p>.<p>ಕೊರೊನಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ನ ಹಲವು ನಾಯಕರು ವಿಡಿಯೊದಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದಾರೆ.</p>.<p>ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ವಲಸೆ ಕಾರ್ಮಿಕರ ಸಮಸ್ಯೆಯ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, 'ವಲಸೆ ಕಾರ್ಮಿಕರ ರಕ್ಷಣೆಗಾಗಿ ಪಕ್ಷವು ಯೋಜನೆಯನ್ನು ರೂಪಿಸಲಿದೆ' ಎಂದಿದ್ದಾರೆ.</p>.<p>'ಪರೀಕ್ಷಿಸುವುದು ಮತ್ತು ಪತ್ತೆ ಹಚ್ಚುವುದು ಕೋವಿಡ್-19 ವಿರುದ್ಧದ ಹೋರಾಟದ ಅಸ್ತ್ರಗಳು. ವಲಸೆ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಮಾನವತಾವಾದ, ರಕ್ಷಣೆ ಮತ್ತು ಆರ್ಥಿಕ ಭದ್ರತೆಗಳನ್ನು ಅನುಸರಿಸಬೇಕು. ನಮ್ಮ ಮುಂದಿರುವ ದಾರಿ ಇದೊಂದೇ' ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವು ವಿಡಿಯೊ ಟ್ವೀಟ್ ಮಾಡಿದೆ. </p>.<p>ವಿಡಿಯೊದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ, ಮುಖಂಡರಾದ ಕೆ.ಸಿ.ವೇಣುಗೋಪಾಲ್, ಜಯರಾಮ್ ರಮೇಶ್ ಮತ್ತು ಮನೀಷ್ ತಿವಾರಿ ಮಾತನಾಡಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>