<p><strong>ತಿರುವನಂತಪುರಂ</strong>:ಕೋವಿಡ್-19 ನಂತರ ಯಾವುದೇ ಬಿಕ್ಕಟ್ಟಿನಿಂದ ಹೊರಬರಲು ಕೇರಳಕ್ಕೆ ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.</p>.<p>ಟ್ವಿಟರ್ ಇಂಡಿಯಾ ಆಯೋಜಿಸಿದ್ದ #AskTheCM ನ ಮೊದಲ ಆವೃತ್ತಿಯಲ್ಲಿ ಮಾತನಾಡಿರುವ ಅವರು, 'ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ನವೀನ ಮಾರ್ಗಗಳನ್ನು ಅಭಿವೃದ್ಧಿಪಡಿಸುವಲ್ಲಿ ಕೇರಳ ರಾಜ್ಯವು ಮುಂಚೂಣಿಯಲ್ಲಿದೆ. ಆ ಕಾರಣ, ಇನ್ನು ಮುಂದಿನ ಯಾವುದೇ ಬಿಕ್ಕಟ್ಟನ್ನು ಎದುರಿಸಿ, ಅದರಿಂದ ಹೊರಬರಲು ಕೇರಳಕ್ಕೆ ಸಾಧ್ಯವಾಗಲಿದೆ' ಎಂದು ತಿಳಿಸಿದ್ದಾರೆ.</p>.<p>ಕೇರಳಿಗರು ವಿದೇಶದಿಂದ ಮರಳುತ್ತಿರುವುದು, ಅವರ ಉದ್ಯೋಗ ಸಮಸ್ಯೆ, ಮುಂಬರುವ ಮಳೆಗಾಲ, ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪದ ಸಾಧ್ಯತೆಗಳು ಮತ್ತು ಅದನ್ನು ಎದುರಿಸಲು ರಾಜ್ಯದ ಸಿದ್ಧತೆ ಹಾಗೂ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಪಿಣರಾಯಿ ವಿಜಯನ್ ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>:ಕೋವಿಡ್-19 ನಂತರ ಯಾವುದೇ ಬಿಕ್ಕಟ್ಟಿನಿಂದ ಹೊರಬರಲು ಕೇರಳಕ್ಕೆ ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.</p>.<p>ಟ್ವಿಟರ್ ಇಂಡಿಯಾ ಆಯೋಜಿಸಿದ್ದ #AskTheCM ನ ಮೊದಲ ಆವೃತ್ತಿಯಲ್ಲಿ ಮಾತನಾಡಿರುವ ಅವರು, 'ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ನವೀನ ಮಾರ್ಗಗಳನ್ನು ಅಭಿವೃದ್ಧಿಪಡಿಸುವಲ್ಲಿ ಕೇರಳ ರಾಜ್ಯವು ಮುಂಚೂಣಿಯಲ್ಲಿದೆ. ಆ ಕಾರಣ, ಇನ್ನು ಮುಂದಿನ ಯಾವುದೇ ಬಿಕ್ಕಟ್ಟನ್ನು ಎದುರಿಸಿ, ಅದರಿಂದ ಹೊರಬರಲು ಕೇರಳಕ್ಕೆ ಸಾಧ್ಯವಾಗಲಿದೆ' ಎಂದು ತಿಳಿಸಿದ್ದಾರೆ.</p>.<p>ಕೇರಳಿಗರು ವಿದೇಶದಿಂದ ಮರಳುತ್ತಿರುವುದು, ಅವರ ಉದ್ಯೋಗ ಸಮಸ್ಯೆ, ಮುಂಬರುವ ಮಳೆಗಾಲ, ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪದ ಸಾಧ್ಯತೆಗಳು ಮತ್ತು ಅದನ್ನು ಎದುರಿಸಲು ರಾಜ್ಯದ ಸಿದ್ಧತೆ ಹಾಗೂ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಪಿಣರಾಯಿ ವಿಜಯನ್ ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>