<p><strong>ಮುಂಬೈ</strong>: ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ಒತ್ತು ನೀಡಿದೆ. ಆ ಮೂಲಕ ಮೂರು ಕೋಟಿಗೂ ಅಧಿಕ ಡೋಸ್ಗಳನ್ನು ನೀಡಿದ ಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಮಹಾರಾಷ್ಟ್ರವು ಪಾತ್ರವಾಗಿದೆ.</p>.<p>'ಇಂದು (ಜೂನ್ 25) ಮಧ್ಯಾಹ್ನ 2 ಗಂಟೆಯವರೆಗೆ 3,00,27,217 ವ್ಯಾಕ್ಸಿನ್ ಡೋಸ್ಗಳನ್ನು ಮಹಾರಾಷ್ಟ್ರದಲ್ಲಿ ನೀಡಲಾಗಿದೆ' ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಡಾ.ಪ್ರದೀಪ್ ವ್ಯಾಸ್ ಮಾಹಿತಿ ನೀಡಿದ್ದಾರೆ.</p>.<p>ಕೋವಿಡ್-19 ಮೂರನೇ ಅಲೆಯ ಭೀತಿ ಇರುವುದರಿಂದ ಎಲ್ಲ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಇಲಾಖೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ.</p>.<p>ರಾಯಗಡ, ರತ್ನಗಿರಿ, ಸಿಂಧೂದುರ್ಗ, ಸತಾರ, ಸಾಂಗ್ಲಿ, ಕೊಲ್ಹಾಪುರ ಮತ್ತು ಹಿಂಗೋಲಿ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ.</p>.<p>ಲಸಿಕೆ ಹಾಕಿಸಿಕೊಳ್ಳಲು ಜನರು ಹಾಜರಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಉದ್ದವ್ ಠಾಕ್ರೆ ತಿಳಿಸಿದ್ದಾರೆ.</p>.<p>ಭಾರತದಲ್ಲಿ ಈವರೆಗೆ 40 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿದ್ದು, ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವು ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ಒತ್ತು ನೀಡಿದೆ. ಆ ಮೂಲಕ ಮೂರು ಕೋಟಿಗೂ ಅಧಿಕ ಡೋಸ್ಗಳನ್ನು ನೀಡಿದ ಮೊದಲ ರಾಜ್ಯವೆಂಬ ಹೆಗ್ಗಳಿಕೆಗೆ ಮಹಾರಾಷ್ಟ್ರವು ಪಾತ್ರವಾಗಿದೆ.</p>.<p>'ಇಂದು (ಜೂನ್ 25) ಮಧ್ಯಾಹ್ನ 2 ಗಂಟೆಯವರೆಗೆ 3,00,27,217 ವ್ಯಾಕ್ಸಿನ್ ಡೋಸ್ಗಳನ್ನು ಮಹಾರಾಷ್ಟ್ರದಲ್ಲಿ ನೀಡಲಾಗಿದೆ' ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಡಾ.ಪ್ರದೀಪ್ ವ್ಯಾಸ್ ಮಾಹಿತಿ ನೀಡಿದ್ದಾರೆ.</p>.<p>ಕೋವಿಡ್-19 ಮೂರನೇ ಅಲೆಯ ಭೀತಿ ಇರುವುದರಿಂದ ಎಲ್ಲ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಇಲಾಖೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚಿಸಿದ್ದಾರೆ.</p>.<p>ರಾಯಗಡ, ರತ್ನಗಿರಿ, ಸಿಂಧೂದುರ್ಗ, ಸತಾರ, ಸಾಂಗ್ಲಿ, ಕೊಲ್ಹಾಪುರ ಮತ್ತು ಹಿಂಗೋಲಿ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ.</p>.<p>ಲಸಿಕೆ ಹಾಕಿಸಿಕೊಳ್ಳಲು ಜನರು ಹಾಜರಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಉದ್ದವ್ ಠಾಕ್ರೆ ತಿಳಿಸಿದ್ದಾರೆ.</p>.<p>ಭಾರತದಲ್ಲಿ ಈವರೆಗೆ 40 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿದ್ದು, ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>