<p><strong>ನವದೆಹಲಿ: </strong>ಲಾಕ್ಡೌನ್ ಹೇರಿಕೆಯನ್ನು ತಪ್ಪಿಸಬೇಕು. ಲಾಕ್ಡೌನ್ ಹೇರಿಕೆಯು ಕೊನೆಯ ಆಯ್ಕೆ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಕರೆ ಕೊಟ್ಟಿದ್ದಾರೆ.</p>.<p>ದೇಶದಾದ್ಯಂತ ಕೋವಿಡ್ ಪ್ರಕರಣಗಳ ತೀವ್ರ ಹೆಚ್ಚಳ, ವೈದ್ಯಕೀಯ ಆಮ್ಲಜನಕ ಮತ್ತು ಕೋವಿಡ್ ತಡೆ ಲಸಿಕೆ ಕೊರತೆಯ ಹಿನ್ನೆಲೆಯಲ್ಲಿ ಅವರು ದೇಶ ವನ್ನು ಉದ್ದೇಶಿಸಿ ಮಂಗಳವಾರ ರಾತ್ರಿ 8.45ಕ್ಕೆ ಮಾತನಾಡಿದರು.</p>.<p>ಈಗ ದೇಶವು ಕೋವಿಡ್ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದೆ. ಹಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಕೈಗೊಂಡ ನಿರ್ಧಾರಗಳಿಂದ ಪರಿಸ್ಥಿತಿ ಸುಧಾರಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.</p>.<p>ಮೈಕ್ರೊ ಕಂಟೈನ್ಮೆಂಟ್ ವಲಯಗಳ ಮೂಲಕ ಕೋವಿಡ್ ಹರಡುವಿಕೆ ತಡೆ ಸಾಧ್ಯವಿದೆ. ನಾವೆಲ್ಲರೂ ಕೋವಿಡ್ ತಡೆ ಮಾರ್ಗಸೂಚಿಗಳನ್ನು ಪಾಲಿಸಿದರೆ ಲಾಕ್ಡೌನ್ನ ಅಗತ್ಯವೇ ಇರುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಈಗಿನ ಪರಿಸ್ಥಿತಿ ಭಿನ್ನವಾಗಿದೆ. ಕಳೆದ ವರ್ಷ ನಮಗೆ ಕೋವಿಡ್ ಬಗ್ಗೆ ಹೆಚ್ಚಿನ ತಿಳಿವಳಿಕೆ ಇರಲಿಲ್ಲ. ಈಗ ಹಾಗಲ್ಲ; ಜತೆಗೆ, ಈಗ ಲಸಿಕೆ ಇದೆ. ಪಿಪಿಇ ಕಿಟ್ ಮತ್ತು ಇತರ ವೈದ್ಯಕೀಯ ಸಲಕರಣೆಗಳು ಲಭ್ಯ ಇವೆ ಎಂದು ಅವರು ಹೇಳಿದರು.</p>.<p>ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ತಲೆದೋರಿದೆ. ಅದೊಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಈ ಸವಾಲು ಎದುರಿಸಲು ಸಂಬಂಧಪಟ್ಟ ಎಲ್ಲರೂ ಜತೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದರು.</p>.<p>ಕೋವಿಡ್ ವಿರುದ್ಧದ ಹೋರಾಟದಲ್ಲಿ ನಿರಂತರ<br />ವಾಗಿ ಕೆಲಸ ಮಾಡುತ್ತಿರುವ ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ಔಷಧ ತಯಾರಿಕೆ ಕ್ಷೇತ್ರವನ್ನು ಅವರು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಲಾಕ್ಡೌನ್ ಹೇರಿಕೆಯನ್ನು ತಪ್ಪಿಸಬೇಕು. ಲಾಕ್ಡೌನ್ ಹೇರಿಕೆಯು ಕೊನೆಯ ಆಯ್ಕೆ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಕರೆ ಕೊಟ್ಟಿದ್ದಾರೆ.</p>.<p>ದೇಶದಾದ್ಯಂತ ಕೋವಿಡ್ ಪ್ರಕರಣಗಳ ತೀವ್ರ ಹೆಚ್ಚಳ, ವೈದ್ಯಕೀಯ ಆಮ್ಲಜನಕ ಮತ್ತು ಕೋವಿಡ್ ತಡೆ ಲಸಿಕೆ ಕೊರತೆಯ ಹಿನ್ನೆಲೆಯಲ್ಲಿ ಅವರು ದೇಶ ವನ್ನು ಉದ್ದೇಶಿಸಿ ಮಂಗಳವಾರ ರಾತ್ರಿ 8.45ಕ್ಕೆ ಮಾತನಾಡಿದರು.</p>.<p>ಈಗ ದೇಶವು ಕೋವಿಡ್ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದೆ. ಹಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಕೈಗೊಂಡ ನಿರ್ಧಾರಗಳಿಂದ ಪರಿಸ್ಥಿತಿ ಸುಧಾರಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.</p>.<p>ಮೈಕ್ರೊ ಕಂಟೈನ್ಮೆಂಟ್ ವಲಯಗಳ ಮೂಲಕ ಕೋವಿಡ್ ಹರಡುವಿಕೆ ತಡೆ ಸಾಧ್ಯವಿದೆ. ನಾವೆಲ್ಲರೂ ಕೋವಿಡ್ ತಡೆ ಮಾರ್ಗಸೂಚಿಗಳನ್ನು ಪಾಲಿಸಿದರೆ ಲಾಕ್ಡೌನ್ನ ಅಗತ್ಯವೇ ಇರುವುದಿಲ್ಲ ಎಂದು ಅವರು ಪ್ರತಿಪಾದಿಸಿದರು.</p>.<p>ಕಳೆದ ವರ್ಷಕ್ಕೆ ಹೋಲಿಸಿದರೆ ಈಗಿನ ಪರಿಸ್ಥಿತಿ ಭಿನ್ನವಾಗಿದೆ. ಕಳೆದ ವರ್ಷ ನಮಗೆ ಕೋವಿಡ್ ಬಗ್ಗೆ ಹೆಚ್ಚಿನ ತಿಳಿವಳಿಕೆ ಇರಲಿಲ್ಲ. ಈಗ ಹಾಗಲ್ಲ; ಜತೆಗೆ, ಈಗ ಲಸಿಕೆ ಇದೆ. ಪಿಪಿಇ ಕಿಟ್ ಮತ್ತು ಇತರ ವೈದ್ಯಕೀಯ ಸಲಕರಣೆಗಳು ಲಭ್ಯ ಇವೆ ಎಂದು ಅವರು ಹೇಳಿದರು.</p>.<p>ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ತಲೆದೋರಿದೆ. ಅದೊಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಈ ಸವಾಲು ಎದುರಿಸಲು ಸಂಬಂಧಪಟ್ಟ ಎಲ್ಲರೂ ಜತೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದರು.</p>.<p>ಕೋವಿಡ್ ವಿರುದ್ಧದ ಹೋರಾಟದಲ್ಲಿ ನಿರಂತರ<br />ವಾಗಿ ಕೆಲಸ ಮಾಡುತ್ತಿರುವ ವೈದ್ಯರು, ಆರೋಗ್ಯ ಕಾರ್ಯಕರ್ತರು ಮತ್ತು ಔಷಧ ತಯಾರಿಕೆ ಕ್ಷೇತ್ರವನ್ನು ಅವರು ಶ್ಲಾಘಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>