<p><strong>ನವದೆಹಲಿ</strong>: ‘ವರ್ಚುವಲ್ ವಿಚಾರಣೆ‘ಯಲ್ಲಿ ತಾಂತ್ರಿಕ ಅಡಚಣೆ ಎದುರಾಗಿರುವುದರಿಂದ ‘ಕೋವಿಡ್ 19 ನಿರ್ವಹಣೆ‘ ಕುರಿತು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣದ ವಿಚಾರಣೆಯನ್ನು ಮೇ 13ಕ್ಕೆ ಮುಂದೂಡಿರುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಭಾನುವಾರ ರಾತ್ರಿ ಅಫಿಡವಿಟ್ ಸಲ್ಲಿಸಿದೆ. ಅದನ್ನು ಪರಿಶೀಲಿಸಿ, ವಿಚಾರಣೆ ನಡೆಸುವುದಕ್ಕೆ ಸಮಯ ಹಿಡಿಯುತ್ತದೆ. ಈಗ ವರ್ಚುವಲ್ ವಿಚಾರಣೆಯಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿರುವ ಕಾರಣ, ಈ ವಿಚಾರಣೆಯನ್ನು ಮುಂದೂಡಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಎಲ್.ಎನ್.ರಾವ್ ಮತ್ತು ಎಸ್. ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.</p>.<p>‘ನಮ್ಮ ಸರ್ವರ್ ಇಂದು ಡೌನ್ ಆಗಿದೆ. ಈ ಕುರಿತು ನ್ಯಾಯಮೂರ್ತಿಗಳು ಚರ್ಚೆ ನಡೆಸಿದ್ದೇವೆ. ಗುರುವಾರ ಈ ವಿಷಯವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ‘ ಎಂದು ನ್ಯಾಯಪೀಠ ಹೇಳಿದೆ.</p>.<p>ನ್ಯಾಯಮೂರ್ತಿಗಳು ಕೇಂದ್ರ ಸಲ್ಲಿಸಿದ್ದ ಅಫಿಡವಿಟ್ ಅನ್ನು ಪರಿಶೀಲಿಸುತ್ತಾರೆ. ಈ ಪ್ರಮಾಣ ಪತ್ರದ ಬಗ್ಗೆ ಅಮಿಕಸ್ ಕ್ಯೂರಿಯವರ ಪ್ರತಿಕ್ರಿಯೆ ಅಗತ್ಯವಿದೆ. ಅವರು ಕೂಡ ಇದನ್ನು ಪರಿಶೀಲಿಸಬೇಕು‘ ಎಂದು ನ್ಯಾಯಮೂರ್ತಿ ಭಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವರ್ಚುವಲ್ ವಿಚಾರಣೆ‘ಯಲ್ಲಿ ತಾಂತ್ರಿಕ ಅಡಚಣೆ ಎದುರಾಗಿರುವುದರಿಂದ ‘ಕೋವಿಡ್ 19 ನಿರ್ವಹಣೆ‘ ಕುರಿತು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣದ ವಿಚಾರಣೆಯನ್ನು ಮೇ 13ಕ್ಕೆ ಮುಂದೂಡಿರುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.</p>.<p>ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಭಾನುವಾರ ರಾತ್ರಿ ಅಫಿಡವಿಟ್ ಸಲ್ಲಿಸಿದೆ. ಅದನ್ನು ಪರಿಶೀಲಿಸಿ, ವಿಚಾರಣೆ ನಡೆಸುವುದಕ್ಕೆ ಸಮಯ ಹಿಡಿಯುತ್ತದೆ. ಈಗ ವರ್ಚುವಲ್ ವಿಚಾರಣೆಯಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿರುವ ಕಾರಣ, ಈ ವಿಚಾರಣೆಯನ್ನು ಮುಂದೂಡಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಎಲ್.ಎನ್.ರಾವ್ ಮತ್ತು ಎಸ್. ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.</p>.<p>‘ನಮ್ಮ ಸರ್ವರ್ ಇಂದು ಡೌನ್ ಆಗಿದೆ. ಈ ಕುರಿತು ನ್ಯಾಯಮೂರ್ತಿಗಳು ಚರ್ಚೆ ನಡೆಸಿದ್ದೇವೆ. ಗುರುವಾರ ಈ ವಿಷಯವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ‘ ಎಂದು ನ್ಯಾಯಪೀಠ ಹೇಳಿದೆ.</p>.<p>ನ್ಯಾಯಮೂರ್ತಿಗಳು ಕೇಂದ್ರ ಸಲ್ಲಿಸಿದ್ದ ಅಫಿಡವಿಟ್ ಅನ್ನು ಪರಿಶೀಲಿಸುತ್ತಾರೆ. ಈ ಪ್ರಮಾಣ ಪತ್ರದ ಬಗ್ಗೆ ಅಮಿಕಸ್ ಕ್ಯೂರಿಯವರ ಪ್ರತಿಕ್ರಿಯೆ ಅಗತ್ಯವಿದೆ. ಅವರು ಕೂಡ ಇದನ್ನು ಪರಿಶೀಲಿಸಬೇಕು‘ ಎಂದು ನ್ಯಾಯಮೂರ್ತಿ ಭಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>