ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಂಬೈನ ಕಾಂಗ್ರೆಸ್ ಘಟಕದ ಮುಖ್ಯಸ್ಥ ಭಾಯ್ ಜಗತಾಪ್, ‘ಸುಮಾರು ಹದಿನೆಂಟು ತಿಂಗಳಿನಿಂದ ಈಜುಕೊಳಗಳನ್ನು ಮುಚ್ಚಲಾಗಿದೆ. ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಈಜು ಪಂದ್ಯಗಳು ನಡೆಯುತ್ತಿದ್ದು, ಅದರಲ್ಲಿ ಭಾಗಹಿಸುವ ವೃತ್ತಿಪರ ಈಜುಪಟುಗಳಿಗೆ ಅಭ್ಯಾಸ ಮಾಡುವುದಕ್ಕಾಗಿ ಕೋವಿಡ್ ಮಾರ್ಗಸೂಚಿಗೊಳೊಂದಿಗೆ ಈಜುಕೊಳಗಳನ್ನು ಪುನರಾರರಂಭಿಸಲು ಅನುಮತಿ ನೀಡಬೇಕು‘ ಎಂದು ಒತ್ತಾಯಿಸಿದ್ದಾರೆ.