<p><strong>ನವದೆಹಲಿ</strong>: ಪ್ರಸ್ತುತ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡುವ ಅಭಿಯಾನದ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಲಸಿಕೆ ನೀಡಿಕೆಯ ಪ್ರಮಾಣವನ್ನು ಹೆಚ್ಚಿಸಲು ನವ –ನವೀನ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಲಸಿಕೆ ನೀಡಿಕೆಯಲ್ಲಿ ಹಿಂದುಳಿದಿರುವ ಜಿಲ್ಲೆಗಳ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ದೇಶದಲ್ಲಿ ಲಸಿಕೆ ನೀಡಿಕೆಯಲ್ಲಿ ಹಿಂದಿರುವ 40ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಪ್ರಧಾನಿ ಮೋದಿಯವರು ಮಾತನಾಡಿದರು.</p>.<p>‘ಇಲ್ಲಿವರೆಗೂ ನೀವು ಲಸಿಕಾ ಕೇಂದ್ರದ ಬಳಿಗೆ ಜನರನ್ನು ಕರೆತರುತ್ತಿದ್ದಿರಿ. ಈಗ ನೀವೇ ಪ್ರತಿ ಮನೆಗೂ ತೆರಳಿ ಲಸಿಕೆ ನೀಡುವ ಮೂಲಕ ‘ಹರ್ ಘರ್ ದಸ್ತಕ್ ಆಂದೋಲನ‘ದೊಂದಿಗೆ ಕೈಜೋಡಿಸಬೇಕು‘ ಎಂದು ಮೋದಿ ಹೇಳಿದರು.</p>.<p>ಇತ್ತೀಚೆಗೆ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಉಲ್ಲೇಖಿಸಿ ಮಾತನಾಡಿದ ಮೋದಿ, ‘ಲಸಿಕೆ ಅಗತ್ಯ ಕುರಿತು ಧಾರ್ಮಿಕ ನಾಯಕರ ಮೂಲಕ ಜನರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು‘ ಎಂದು ಅವರು ಹೇಳಿದರು.</p>.<p>ಈ ಹಿನ್ನೆಲೆಯಲ್ಲಿ ಸ್ಥಳೀಯ ಧಾರ್ಮಿಕ ನಾಯಕರ ನೆರವು ಪಡೆದು ಲಸಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿಗಳಿಗೆ ಪ್ರಧಾನಿ ಸೂಚಿಸಿದರು. ಲಸಿಕೆ ನೀಡಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವುದಕ್ಕೆ ನೂತನ ವಿಧಾನಗಳನ್ನು ಅನಸುರಿಸುವ ಕುರಿತೂ ಅವರು ಒತ್ತಿ ಹೇಳಿದರು.</p>.<p>ಶೇ 50ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮೊದಲ ಡೋಸ್ ಪಡೆದಿರುವ ಮತ್ತು ಕಡಿಮೆ ಪ್ರಮಾಣದಲ್ಲಿ ಎರಡನೇ ಡೋಸ್ ಪಡೆದಿರುವ ಜಿಲ್ಲೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಜಾರ್ಖಂಡ್, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಮೇಘಾಲಯ ಸೇರಿದಂತೆ ಕೆಲವು ರಾಜ್ಯಗಳ 40 ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆ ಪ್ರಮಾಣ ಶೇ 50ಕ್ಕಿಂತ ಕಡಿಮೆ ಇದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.</p>.<p>ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಮತ್ತು ಛತ್ತೀಸ್ಗಡದ ಭೂಪೇಶ್ ಬಘೇಲ್ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೂ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಸ್ತುತ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡುವ ಅಭಿಯಾನದ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಲಸಿಕೆ ನೀಡಿಕೆಯ ಪ್ರಮಾಣವನ್ನು ಹೆಚ್ಚಿಸಲು ನವ –ನವೀನ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಲಸಿಕೆ ನೀಡಿಕೆಯಲ್ಲಿ ಹಿಂದುಳಿದಿರುವ ಜಿಲ್ಲೆಗಳ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ದೇಶದಲ್ಲಿ ಲಸಿಕೆ ನೀಡಿಕೆಯಲ್ಲಿ ಹಿಂದಿರುವ 40ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಪ್ರಧಾನಿ ಮೋದಿಯವರು ಮಾತನಾಡಿದರು.</p>.<p>‘ಇಲ್ಲಿವರೆಗೂ ನೀವು ಲಸಿಕಾ ಕೇಂದ್ರದ ಬಳಿಗೆ ಜನರನ್ನು ಕರೆತರುತ್ತಿದ್ದಿರಿ. ಈಗ ನೀವೇ ಪ್ರತಿ ಮನೆಗೂ ತೆರಳಿ ಲಸಿಕೆ ನೀಡುವ ಮೂಲಕ ‘ಹರ್ ಘರ್ ದಸ್ತಕ್ ಆಂದೋಲನ‘ದೊಂದಿಗೆ ಕೈಜೋಡಿಸಬೇಕು‘ ಎಂದು ಮೋದಿ ಹೇಳಿದರು.</p>.<p>ಇತ್ತೀಚೆಗೆ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರ ಭೇಟಿಯನ್ನು ಉಲ್ಲೇಖಿಸಿ ಮಾತನಾಡಿದ ಮೋದಿ, ‘ಲಸಿಕೆ ಅಗತ್ಯ ಕುರಿತು ಧಾರ್ಮಿಕ ನಾಯಕರ ಮೂಲಕ ಜನರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು‘ ಎಂದು ಅವರು ಹೇಳಿದರು.</p>.<p>ಈ ಹಿನ್ನೆಲೆಯಲ್ಲಿ ಸ್ಥಳೀಯ ಧಾರ್ಮಿಕ ನಾಯಕರ ನೆರವು ಪಡೆದು ಲಸಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿಗಳಿಗೆ ಪ್ರಧಾನಿ ಸೂಚಿಸಿದರು. ಲಸಿಕೆ ನೀಡಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವುದಕ್ಕೆ ನೂತನ ವಿಧಾನಗಳನ್ನು ಅನಸುರಿಸುವ ಕುರಿತೂ ಅವರು ಒತ್ತಿ ಹೇಳಿದರು.</p>.<p>ಶೇ 50ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮೊದಲ ಡೋಸ್ ಪಡೆದಿರುವ ಮತ್ತು ಕಡಿಮೆ ಪ್ರಮಾಣದಲ್ಲಿ ಎರಡನೇ ಡೋಸ್ ಪಡೆದಿರುವ ಜಿಲ್ಲೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ಜಾರ್ಖಂಡ್, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಮೇಘಾಲಯ ಸೇರಿದಂತೆ ಕೆಲವು ರಾಜ್ಯಗಳ 40 ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆ ಪ್ರಮಾಣ ಶೇ 50ಕ್ಕಿಂತ ಕಡಿಮೆ ಇದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.</p>.<p>ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಮತ್ತು ಛತ್ತೀಸ್ಗಡದ ಭೂಪೇಶ್ ಬಘೇಲ್ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೂ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>