<p><strong>ಬೆಂಗಳೂರು: </strong>ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 63,489 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಇದೇ ಅವಧಿಯಲ್ಲಿ 944 ಮಂದಿ ಸೋಂಕಿನಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<p>ಒಟ್ಟು 25,89,682 ಕೊರೊನಾ ವೈರಸ್ ಸೋಂಕಿತರ ಪೈಕಿ ಈವರೆಗೂ 18,62,258 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಹಾಗೂ 49,980 ಮಂದಿ ಸಾವಿಗೀಡಾಗಿದ್ದಾರೆ. ಭಾರತದಲ್ಲಿ ಪ್ರಸ್ತುತ 6,77,444 ಸಕ್ರಿಯ ಪ್ರಕರಣಗಳಿವೆ.</p>.<p>ಶನಿವಾರ 8,68,679 ಗಂಟಲು ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 2.85 ಕೋಟಿ ಪರೀಕ್ಷೆಗಳನ್ನು ಪೂರೈಸಿರುವುದಾಗಿ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ 1,56,719 ಸಕ್ರಿಯ ಪ್ರಕರಣಗಳಿದ್ದು, 4,08,286 ಮಂದಿ ಗುಣಮುಖರಾಗಿದ್ದಾರೆ ಹಾಗೂ 19,749 ಮಂದಿ ಸಾವಿಗೀಡಾಗಿದ್ದಾರೆ. ರಾಜಧಾನಿ ದೆಹಲಿಯಲ್ಲಿ 11,489 ಸಕ್ರಿಯ ಪ್ರಕರಣಗಳಿದ್ದು, 1,36,251 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 4,188 ಮಂದಿ ಮೃತಪಟ್ಟಿದ್ದಾರೆ.</p>.<p>ತಮಿಳುನಾಡಿನಲ್ಲಿ 54,213 ಸಕ್ರಿಯ ಪ್ರಕರಣಗಳಿದ್ದು, 2,72,251 ಮಂದಿ ಗುಣಮುಖರಾಗಿದ್ದಾರೆ ಹಾಗೂ 5,641ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 81,284 ಸಕ್ರಿಯ ಪ್ರಕರಣಗಳಿವೆ ಹಾಗೂ 1,34,811 ಮಂದಿ ಗುಣಮುಖರಾಗಿದ್ದಾರೆ. 3,831 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 63,489 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಇದೇ ಅವಧಿಯಲ್ಲಿ 944 ಮಂದಿ ಸೋಂಕಿನಿಂದ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.</p>.<p>ಒಟ್ಟು 25,89,682 ಕೊರೊನಾ ವೈರಸ್ ಸೋಂಕಿತರ ಪೈಕಿ ಈವರೆಗೂ 18,62,258 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಹಾಗೂ 49,980 ಮಂದಿ ಸಾವಿಗೀಡಾಗಿದ್ದಾರೆ. ಭಾರತದಲ್ಲಿ ಪ್ರಸ್ತುತ 6,77,444 ಸಕ್ರಿಯ ಪ್ರಕರಣಗಳಿವೆ.</p>.<p>ಶನಿವಾರ 8,68,679 ಗಂಟಲು ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 2.85 ಕೋಟಿ ಪರೀಕ್ಷೆಗಳನ್ನು ಪೂರೈಸಿರುವುದಾಗಿ ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿ 1,56,719 ಸಕ್ರಿಯ ಪ್ರಕರಣಗಳಿದ್ದು, 4,08,286 ಮಂದಿ ಗುಣಮುಖರಾಗಿದ್ದಾರೆ ಹಾಗೂ 19,749 ಮಂದಿ ಸಾವಿಗೀಡಾಗಿದ್ದಾರೆ. ರಾಜಧಾನಿ ದೆಹಲಿಯಲ್ಲಿ 11,489 ಸಕ್ರಿಯ ಪ್ರಕರಣಗಳಿದ್ದು, 1,36,251 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 4,188 ಮಂದಿ ಮೃತಪಟ್ಟಿದ್ದಾರೆ.</p>.<p>ತಮಿಳುನಾಡಿನಲ್ಲಿ 54,213 ಸಕ್ರಿಯ ಪ್ರಕರಣಗಳಿದ್ದು, 2,72,251 ಮಂದಿ ಗುಣಮುಖರಾಗಿದ್ದಾರೆ ಹಾಗೂ 5,641ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 81,284 ಸಕ್ರಿಯ ಪ್ರಕರಣಗಳಿವೆ ಹಾಗೂ 1,34,811 ಮಂದಿ ಗುಣಮುಖರಾಗಿದ್ದಾರೆ. 3,831 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>