ಕೋವಿಡ್ ಎರಡನೇ ಅಲೆ ಆರಂಭವಾಗಬಹುದು ಎಂಬ ಆತಂಕವು ದಟ್ಟವಾಗುತ್ತಿರುವ ಹಿಂದೆಯೇ ಕೇಂದ್ರ ಆರೋಗ್ಯ ಸಚಿವಾಲಯ, ಕಟ್ಟು ನಿಟ್ಟಿನ ಕ್ರಮಕ್ಕೆ ಸಲಹೆ ಮಾಡಿದೆ. ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಲಾಕ್ಡೌನ್ ಪರಿಣಾಮಗಳು ಸೀಮಿತವಾಗಿದೆ ಎಂದಿದೆ. ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸೀತಾರಾಂ ಕುಂಟೆ ಅವರಿಗೆ ಮೂರು ದಿನಗಳಲ್ಲಿ ಎರಡು ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ಮಹಾರಾಷ್ಟ್ರಕ್ಕೆ ಮಾರ್ಚ್ 7–14ರ ಅವಧಿಯಲ್ಲಿ ಭೇಟಿ ನೀಡಿದ್ದ ಕೇಂದ್ರ ತಂಡದ ವರದಿಯನ್ನು ಉಲ್ಲೇಖಿಸಿದ್ದಾರೆ.