<p><strong>ಚೆನ್ನೈ: </strong>ಕೋವಿಡ್–19ನಿಂದಾಗಿ ಹಲವರು ಖಿನ್ನತೆಗೆ ಒಳಗಾಗುತ್ತಿದ್ದು, ಕೆಲವೆಡೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿವೆ ಎಂದು ಮಾನಸಿಕ ತಜ್ಞರು ವಿಶ್ಲೇಷಿಸಿದ್ದಾರೆ.</p>.<p>ನಿದ್ರಾಹೀನತೆ, ಒಂಟಿತನ, ಸೋಂಕಿಗೆ ಒಳಗಾಗುವ ಭೀತಿ ಹಾಗೂ ಆರ್ಥಿಕ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಜನರು ಖಿನ್ನತೆ ಮತ್ತು ಆತಂಕಕ್ಕೆ ಒಳಗಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಉದ್ಯೋಗ ಕಡಿತ, ಹಣಕಾಸಿನ ತೊಂದರೆ, ಭವಿಷ್ಯದ ಬಗ್ಗೆ ಅನಿಶ್ಚಿತತೆ ಹಾಗೂ ಆಹಾರ ಕೊರತೆಯಾಗುವ ಆತಂಕವೂ ಈ ಸಮಸ್ಯೆಗೆ ಕಾರಣಗಳಾಗಿವೆ. ಕೆಲವರು ಆತಂಕದಿಂದ ಹಲ್ಲೆ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿಸಿದ್ದಾರೆ.</p>.<p>‘ಕೊರೊನಾ ವೈರಸ್ನಿಂದಾಗಿ ಪ್ರತಿಯೊಬ್ಬರು ಒತ್ತಡ ಅಥವಾ ಆತಂಕಕ್ಕೆ ಒಳಗಾಗಿದ್ದಾರೆ. ಆದರೆ, ಸಹಿಸಿಕೊಳ್ಳುವ ಸಾಮರ್ಥ್ಯ ಒಬ್ಬರಿಂದ ಇನ್ನೊಬ್ಬರಿಗೆ ವಿಭಿನ್ನವಾಗಿದೆ. ಹಲವರು ಒತ್ತಡಗಳನ್ನು ಸುಲಭವಾಗಿ ನಿಭಾಯಿಸಿಕೊಳ್ಳಬಹುದು. ಈ ಮೂಲಕ ಉಲ್ಲಾಸದ ಜೀವನ ನಡೆಸುತ್ತಾರೆ’ ಎಂದು ಚೆನ್ನೈ ಮೂಲದ ಮಾಸ್ಟರ್ಮೈಂಡ್ ಫೌಂಡೇಷನ್ನ ಲೆಫ್ಟಿನೆಂಟ್ ಕರ್ನಲ್ ಎನ್.ಟಿ. ರಾಜನ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ವೈರಸ್ ಸೋಂಕು ದೃಢಪಟ್ಟರೆ ಯಾವ ರೀತಿ ಎದುರಿಸಬೇಕು ಎನ್ನುವ ಬಗ್ಗೆ ಕೌನ್ಸೆಲಿಂಗ್ ಅಗತ್ಯವಿದೆ. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ತೆರಳಿದ ಬಳಿಕವೂ ಯಾವ ರೀತಿ ಬದುಕಬೇಕು ಎನ್ನುವ ಬಗ್ಗೆ ಕೌನ್ಸೆಲಿಂಗ್ ಮಾಡಬೇಕು’ ಎಂದು ಹೇಳಿದ್ದಾರೆ.</p>.<p>ದೇಶದಲ್ಲಿ ಮೊದಲ ಕೊರೊನಾ ವೈರಸ್ ಕಾಣಿಸಿಕೊಂಡ ದಿನದಿಂದಲೂ ಮಾಸ್ಟರ್ಮೈಂಡ್ ಫೌಂಡೇಷನ್ ದೇಶದಾದ್ಯಂತ ಜನರಿಗೆ ಉಚಿತ ಕೌನ್ಸಲಿಂಗ್ ನೀಡುವ ಕಾರ್ಯದಲ್ಲಿ ತೊಡಗಿದೆ.</p>.<p>‘ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ತೀವ್ರ ಮಾನಸಿಕ ಆರೋಗ್ಯಕ್ಕೆ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಆತ್ಮಹತ್ಯೆ ಪ್ರಕರಣಗಳು ಹೆಚ್ಚಬಹುದು’ ಎಂದು ಮನೋವೈದ್ಯ ಡಾ.ಎಸ್.ಸೇಂಥಿಲ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಮಾರ್ಚ್ 1ರಿಂದ ಜೂನ್ 20ರ ಅವಧಿ ಒಳಗೆ ಆನ್ಲೈನ್ ಮೂಲಕ ಸಂಪರ್ಕಿಸುವವರ ಸಂಖ್ಯೆ ಶೇಕಡ 180ರಷ್ಟು ಹೆಚ್ಚಾಗಿದೆ ಎಂದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಕಾರ್ಯನಿರ್ವಹಿಸುವ ‘ಲಿಬ್ರಾಟ್’ ಸಂಸ್ಥೆ ತಿಳಿಸಿದೆ.</p>.<p>ಮುಂಬೈ, ದೆಹಲಿ, ಪುಣೆ, ಬೆಂಗಳೂರು, ಅಹಮದಾಬಾದ್, ಚೆನ್ನೈಗಳಿಂದ ಅತಿ ಹೆಚ್ಚು ಮಂದಿ ಸಂಪರ್ಕಿಸಿದ್ದರು. ಅದರಲ್ಲೂ 25ರಿಂದ 45 ವರ್ಷದ ಒಳಗಿನವರು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ಅದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಕೋವಿಡ್–19ನಿಂದಾಗಿ ಹಲವರು ಖಿನ್ನತೆಗೆ ಒಳಗಾಗುತ್ತಿದ್ದು, ಕೆಲವೆಡೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿವೆ ಎಂದು ಮಾನಸಿಕ ತಜ್ಞರು ವಿಶ್ಲೇಷಿಸಿದ್ದಾರೆ.</p>.<p>ನಿದ್ರಾಹೀನತೆ, ಒಂಟಿತನ, ಸೋಂಕಿಗೆ ಒಳಗಾಗುವ ಭೀತಿ ಹಾಗೂ ಆರ್ಥಿಕ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಜನರು ಖಿನ್ನತೆ ಮತ್ತು ಆತಂಕಕ್ಕೆ ಒಳಗಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಉದ್ಯೋಗ ಕಡಿತ, ಹಣಕಾಸಿನ ತೊಂದರೆ, ಭವಿಷ್ಯದ ಬಗ್ಗೆ ಅನಿಶ್ಚಿತತೆ ಹಾಗೂ ಆಹಾರ ಕೊರತೆಯಾಗುವ ಆತಂಕವೂ ಈ ಸಮಸ್ಯೆಗೆ ಕಾರಣಗಳಾಗಿವೆ. ಕೆಲವರು ಆತಂಕದಿಂದ ಹಲ್ಲೆ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿಸಿದ್ದಾರೆ.</p>.<p>‘ಕೊರೊನಾ ವೈರಸ್ನಿಂದಾಗಿ ಪ್ರತಿಯೊಬ್ಬರು ಒತ್ತಡ ಅಥವಾ ಆತಂಕಕ್ಕೆ ಒಳಗಾಗಿದ್ದಾರೆ. ಆದರೆ, ಸಹಿಸಿಕೊಳ್ಳುವ ಸಾಮರ್ಥ್ಯ ಒಬ್ಬರಿಂದ ಇನ್ನೊಬ್ಬರಿಗೆ ವಿಭಿನ್ನವಾಗಿದೆ. ಹಲವರು ಒತ್ತಡಗಳನ್ನು ಸುಲಭವಾಗಿ ನಿಭಾಯಿಸಿಕೊಳ್ಳಬಹುದು. ಈ ಮೂಲಕ ಉಲ್ಲಾಸದ ಜೀವನ ನಡೆಸುತ್ತಾರೆ’ ಎಂದು ಚೆನ್ನೈ ಮೂಲದ ಮಾಸ್ಟರ್ಮೈಂಡ್ ಫೌಂಡೇಷನ್ನ ಲೆಫ್ಟಿನೆಂಟ್ ಕರ್ನಲ್ ಎನ್.ಟಿ. ರಾಜನ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ವೈರಸ್ ಸೋಂಕು ದೃಢಪಟ್ಟರೆ ಯಾವ ರೀತಿ ಎದುರಿಸಬೇಕು ಎನ್ನುವ ಬಗ್ಗೆ ಕೌನ್ಸೆಲಿಂಗ್ ಅಗತ್ಯವಿದೆ. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಮನೆಗೆ ತೆರಳಿದ ಬಳಿಕವೂ ಯಾವ ರೀತಿ ಬದುಕಬೇಕು ಎನ್ನುವ ಬಗ್ಗೆ ಕೌನ್ಸೆಲಿಂಗ್ ಮಾಡಬೇಕು’ ಎಂದು ಹೇಳಿದ್ದಾರೆ.</p>.<p>ದೇಶದಲ್ಲಿ ಮೊದಲ ಕೊರೊನಾ ವೈರಸ್ ಕಾಣಿಸಿಕೊಂಡ ದಿನದಿಂದಲೂ ಮಾಸ್ಟರ್ಮೈಂಡ್ ಫೌಂಡೇಷನ್ ದೇಶದಾದ್ಯಂತ ಜನರಿಗೆ ಉಚಿತ ಕೌನ್ಸಲಿಂಗ್ ನೀಡುವ ಕಾರ್ಯದಲ್ಲಿ ತೊಡಗಿದೆ.</p>.<p>‘ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ತೀವ್ರ ಮಾನಸಿಕ ಆರೋಗ್ಯಕ್ಕೆ ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಆತ್ಮಹತ್ಯೆ ಪ್ರಕರಣಗಳು ಹೆಚ್ಚಬಹುದು’ ಎಂದು ಮನೋವೈದ್ಯ ಡಾ.ಎಸ್.ಸೇಂಥಿಲ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಮಾರ್ಚ್ 1ರಿಂದ ಜೂನ್ 20ರ ಅವಧಿ ಒಳಗೆ ಆನ್ಲೈನ್ ಮೂಲಕ ಸಂಪರ್ಕಿಸುವವರ ಸಂಖ್ಯೆ ಶೇಕಡ 180ರಷ್ಟು ಹೆಚ್ಚಾಗಿದೆ ಎಂದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಕಾರ್ಯನಿರ್ವಹಿಸುವ ‘ಲಿಬ್ರಾಟ್’ ಸಂಸ್ಥೆ ತಿಳಿಸಿದೆ.</p>.<p>ಮುಂಬೈ, ದೆಹಲಿ, ಪುಣೆ, ಬೆಂಗಳೂರು, ಅಹಮದಾಬಾದ್, ಚೆನ್ನೈಗಳಿಂದ ಅತಿ ಹೆಚ್ಚು ಮಂದಿ ಸಂಪರ್ಕಿಸಿದ್ದರು. ಅದರಲ್ಲೂ 25ರಿಂದ 45 ವರ್ಷದ ಒಳಗಿನವರು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ಅದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>