<p><strong>ರತಲಾಮ್</strong> : ಮಧ್ಯಪ್ರದೇಶದ ಜಾವರಾ ಪಟ್ಟಣದ ದೇವಾಲಯವೊಂದರ ಆವರಣದೊಳಗೆ ಕತ್ತರಿಸಿದ್ದ ಗೋವಿನ ತಲೆಯನ್ನು ಎಸೆದ ಆರೋಪದ ಮೇಲೆ ನಾಲ್ವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್ಎಸ್ಎ) ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ಶುಕ್ರವಾರ ಬೆಳಿಗ್ಗೆ ಎರಡು ಬೈಕ್ಗಳಲ್ಲಿ ಬಂದ ಆರೋಪಿಗಳು ಗೋವಿನ ದೇಹದ ಭಾಗಗಳನ್ನು ದೇಗುಲದ ಆವರಣದೊಳಗೆ ಎಸೆದಿದ್ದಾರೆ. ಇದರಿಂದ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು ಎಂದಿದ್ದಾರೆ.</p><p>ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಹಾಗೂ ಇತರ ಅಪರಾಧಗಳಿಗಾಗಿ ನಾಲ್ವರನ್ನು ಬಂಧಿಸಲಾಗಿದೆ. ಸಾಮರಸ್ಯ ಕದಡಲಿಕ್ಕಾಗಿಯೇ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಡಿಐಜಿ ಮನೋಜ್ ಕುಮಾರ್ ಸಿಂಗ್ ವರದಿಗಾರರಿಗೆ ತಿಳಿಸಿದರು.</p><p>ಸಲ್ಮಾನ್ ಮೇವತಿ, ಶಕೀರ್ ಖುರೇಷಿ, ನೌಶಾದ್ ಖುರೇಷಿ ಮತ್ತು ಶಾರುಖ್ ಸತ್ತಾರ್ ಬಂಧಿತರು. ನೌಶಾದ್ ವಿರುದ್ಧ 20 ಪ್ರಕರಣಗಳಿದ್ದು, ಒಮ್ಮೆ ಜಿಲ್ಲೆಯಿಂದ ಗಡಿಪಾರು ಮಾಡಲಾಗಿತ್ತು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಕೇಶ್ ಖಾಖಾ ಹೇಳಿದ್ದಾರೆ.</p><p>ಆರೋಪಿಗಳಿಗೆ ಸೇರಿದ ಮನೆಯ ಒತ್ತುವರಿ ಭಾಗಗಳನ್ನು ಸ್ಥಳೀಯ ಆಡಳಿತವು ನೆಲಸಮಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಘಟನೆಯ ನಂತರ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಜಾವರಾ ಬಂದ್ಗೆ ಕರೆ ನೀಡಿವೆ.</p><p>ಗೌರವ್ ಪುರಿ ಗೋಸ್ವಾಮಿ ಎಂಬಾತ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರತಲಾಮ್</strong> : ಮಧ್ಯಪ್ರದೇಶದ ಜಾವರಾ ಪಟ್ಟಣದ ದೇವಾಲಯವೊಂದರ ಆವರಣದೊಳಗೆ ಕತ್ತರಿಸಿದ್ದ ಗೋವಿನ ತಲೆಯನ್ನು ಎಸೆದ ಆರೋಪದ ಮೇಲೆ ನಾಲ್ವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್ಎಸ್ಎ) ಪ್ರಕರಣ ದಾಖಲಿಸಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ಶುಕ್ರವಾರ ಬೆಳಿಗ್ಗೆ ಎರಡು ಬೈಕ್ಗಳಲ್ಲಿ ಬಂದ ಆರೋಪಿಗಳು ಗೋವಿನ ದೇಹದ ಭಾಗಗಳನ್ನು ದೇಗುಲದ ಆವರಣದೊಳಗೆ ಎಸೆದಿದ್ದಾರೆ. ಇದರಿಂದ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು ಎಂದಿದ್ದಾರೆ.</p><p>ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಹಾಗೂ ಇತರ ಅಪರಾಧಗಳಿಗಾಗಿ ನಾಲ್ವರನ್ನು ಬಂಧಿಸಲಾಗಿದೆ. ಸಾಮರಸ್ಯ ಕದಡಲಿಕ್ಕಾಗಿಯೇ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಡಿಐಜಿ ಮನೋಜ್ ಕುಮಾರ್ ಸಿಂಗ್ ವರದಿಗಾರರಿಗೆ ತಿಳಿಸಿದರು.</p><p>ಸಲ್ಮಾನ್ ಮೇವತಿ, ಶಕೀರ್ ಖುರೇಷಿ, ನೌಶಾದ್ ಖುರೇಷಿ ಮತ್ತು ಶಾರುಖ್ ಸತ್ತಾರ್ ಬಂಧಿತರು. ನೌಶಾದ್ ವಿರುದ್ಧ 20 ಪ್ರಕರಣಗಳಿದ್ದು, ಒಮ್ಮೆ ಜಿಲ್ಲೆಯಿಂದ ಗಡಿಪಾರು ಮಾಡಲಾಗಿತ್ತು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಕೇಶ್ ಖಾಖಾ ಹೇಳಿದ್ದಾರೆ.</p><p>ಆರೋಪಿಗಳಿಗೆ ಸೇರಿದ ಮನೆಯ ಒತ್ತುವರಿ ಭಾಗಗಳನ್ನು ಸ್ಥಳೀಯ ಆಡಳಿತವು ನೆಲಸಮಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಘಟನೆಯ ನಂತರ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಜಾವರಾ ಬಂದ್ಗೆ ಕರೆ ನೀಡಿವೆ.</p><p>ಗೌರವ್ ಪುರಿ ಗೋಸ್ವಾಮಿ ಎಂಬಾತ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>