2018ರಲ್ಲಿ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಪಡೆದಿರುವ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಎರಡು ಸ್ಥಾನಗಳು ದೊರೆಯುವ ಸಾಧ್ಯತೆ ಇದೆ.ಮಧ್ಯ ಪ್ರದೇಶದಿಂದ ಪ್ರಿಯಾಂಕಾ ಅವರನ್ನು ರಾಜ್ಯಸಭೆ ಚುನಾವಣೆಗೆ ನಿಲ್ಲಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಅರುಣ್ ಯಾದವ್, ಮಧ್ಯ ಪ್ರದೇಶದ ಸಚಿವರಾದ ಸಜ್ಜನ್ ಸಿಂಗ್ ವರ್ಮಾ, ಪಿ.ಸಿ. ಶರ್ಮಾ ಮತ್ತು ಜೈವರ್ಧನ್ ಸಿಂಗ್ ಅವರು ಆಗ್ರಹಿಸಿದ್ದಾರೆ.