<p><strong>ನವದೆಹಲಿ</strong>: ವಕ್ಫ್ ತಿದ್ದುಪಡಿ ಕಾಯ್ದೆ –2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.</p><p>ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ. ರಾಜಾ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಜನರ ವಿರೋಧದ ನಡುವೆಯೂ ಮಸೂದೆ ಪರಿಶೀಲನೆಗೆ ನೇಮಕವಾಗಿದ್ದ ಜಂಟಿ ಸಂಸದೀಯ ಸಮಿತಿಯ ಆಕ್ಷೇಪಗಳು ಮತ್ತು ಇತರರ ಅಭಿಪ್ರಾಯಗಳನ್ನು ಪರಿಗಣಿಸದೆ ಕೇಂದ್ರವು ಕಾಯ್ದೆಗೆ ಅನುಮೋದನೆ ನೀಡಿದೆ ಎಂದು ಸಿಪಿಐ ವಾದಿಸಿದೆ.</p> <p>ರಾಷ್ಟ್ರಪತಿ ಒಪ್ಪಿಗೆಯ ನಂತರ ಏಪ್ರಿಲ್ 5ರಂದು ಪ್ರಕಟವಾದ ತಿದ್ದುಪಡಿ ಕಾಯ್ದೆಯು ವಕ್ಫ್ ಮಂಡಳಿಯ ಸ್ವಾಯತ್ತತೆಯನ್ನು ಗಣನೀಯವಾಗಿ ಮೊಟಕುಗೊಳಿಸುತ್ತದೆ ಮತ್ತು 1995ರ ವಕ್ಫ್ ಕಾಯ್ದೆಯ ಚೌಕಟ್ಟನ್ನು ಮೂಲಭೂತವಾಗಿ ಪರಿವರ್ತಿಸುತ್ತದೆ ಎಂದು ವಕೀಲ ರಾಮ್ ಶಂಕರ್ ಮೂಲಕ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ವಾದಿಸಲಾಗಿದೆ.</p><p>ಇದು ವಕ್ಫ್ ಮಂಡಳಿಯ ಆಡಳಿತದ ಮೇಲೆ ಕೇಂದ್ರ ಸರ್ಕಾರಕ್ಕೆ ಅನಿಯಂತ್ರಿತ ಅಧಿಕಾರವನ್ನು ನೀಡುತ್ತದೆ. ಇದರಿಂದಾಗಿ ಸಂವಿಧಾನದ 25, 26 ಮತ್ತು 29 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಲಾದ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಸಿಪಿಐ ಹೇಳಿದೆ.</p><p>ಈ ಹಿಂದೆ, ಕಾಯ್ದೆಯ ಲೋಪಗಳನ್ನು ಉಲ್ಲೇಖಿಸಿ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಕ್ಫ್ ತಿದ್ದುಪಡಿ ಕಾಯ್ದೆ –2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.</p><p>ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ. ರಾಜಾ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಜನರ ವಿರೋಧದ ನಡುವೆಯೂ ಮಸೂದೆ ಪರಿಶೀಲನೆಗೆ ನೇಮಕವಾಗಿದ್ದ ಜಂಟಿ ಸಂಸದೀಯ ಸಮಿತಿಯ ಆಕ್ಷೇಪಗಳು ಮತ್ತು ಇತರರ ಅಭಿಪ್ರಾಯಗಳನ್ನು ಪರಿಗಣಿಸದೆ ಕೇಂದ್ರವು ಕಾಯ್ದೆಗೆ ಅನುಮೋದನೆ ನೀಡಿದೆ ಎಂದು ಸಿಪಿಐ ವಾದಿಸಿದೆ.</p> <p>ರಾಷ್ಟ್ರಪತಿ ಒಪ್ಪಿಗೆಯ ನಂತರ ಏಪ್ರಿಲ್ 5ರಂದು ಪ್ರಕಟವಾದ ತಿದ್ದುಪಡಿ ಕಾಯ್ದೆಯು ವಕ್ಫ್ ಮಂಡಳಿಯ ಸ್ವಾಯತ್ತತೆಯನ್ನು ಗಣನೀಯವಾಗಿ ಮೊಟಕುಗೊಳಿಸುತ್ತದೆ ಮತ್ತು 1995ರ ವಕ್ಫ್ ಕಾಯ್ದೆಯ ಚೌಕಟ್ಟನ್ನು ಮೂಲಭೂತವಾಗಿ ಪರಿವರ್ತಿಸುತ್ತದೆ ಎಂದು ವಕೀಲ ರಾಮ್ ಶಂಕರ್ ಮೂಲಕ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ ವಾದಿಸಲಾಗಿದೆ.</p><p>ಇದು ವಕ್ಫ್ ಮಂಡಳಿಯ ಆಡಳಿತದ ಮೇಲೆ ಕೇಂದ್ರ ಸರ್ಕಾರಕ್ಕೆ ಅನಿಯಂತ್ರಿತ ಅಧಿಕಾರವನ್ನು ನೀಡುತ್ತದೆ. ಇದರಿಂದಾಗಿ ಸಂವಿಧಾನದ 25, 26 ಮತ್ತು 29 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಲಾದ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಸಿಪಿಐ ಹೇಳಿದೆ.</p><p>ಈ ಹಿಂದೆ, ಕಾಯ್ದೆಯ ಲೋಪಗಳನ್ನು ಉಲ್ಲೇಖಿಸಿ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>