<p><strong>ಹೈದರಾಬಾದ್:</strong> ಸಿಪಿಐ ಮಾವೋವಾದಿಗಳ ವಕ್ತಾರ ಮತ್ತು ಪಾಲಿಟ್ಬ್ಯೂರೊ ಸದಸ್ಯ ಅಭಯ್ ಅವರು ಶಸ್ತ್ರಾಸ್ತ್ರಗಳೊಂದಿಗೆ ಶರಣಾಗಲು ಮತ್ತು ಸರ್ಕಾರದ ಜತೆ ಶಾಂತಿ ಮಾತುಕತೆ ನಡೆಸಲು ಇಚ್ಛಿಸಿರುವುದಾಗಿ ಇತ್ತೀಚೆಗೆ ಘೋಷಿಸಿದ್ದನ್ನು ಸಿಪಿಐ ಮಾವೋವಾದಿಗಳ ಕೇಂದ್ರೀಯ ಸಮಿತಿ ಖಂಡಿಸಿದೆ. </p>.<p>ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷದ ಕೇಂದ್ರೀಯ ಸಮಿತಿ ಮತ್ತು ಪಾಲಿಟ್ಬ್ಯೂರೊ, ‘ಅದು ಕೇವಲ ಅಭಯ್ ಅವರ ವೈಯಕ್ತಿಕ ಅಭಿಪ್ರಾಯ. ಅದನ್ನು ನಾವು ತಿರಸ್ಕರಿಸುತ್ತೇವೆ ಮತ್ತು ಸಶಸ್ತ್ರ ಹೋರಾಟ ಮುಂದುವರಿಸುತ್ತೇವೆ’ ಎಂದು ಹೇಳಿದೆ.</p>.<p>‘ಅಭಯ್ ಶರಣಾಗಲು ಬಯಸಿದರೆ, ಅವರು ಮೊದಲು ತಮ್ಮಲ್ಲಿರುವ ಎಲ್ಲ ರೀತಿಯ ಶಸ್ತ್ರಾಸ್ತ್ರಗಳನ್ನು ಸಿಪಿಐ ಮಾವೋವಾದಿಗಳ ಪಿಜಿಎಲ್ಎ (ಪೀಪಲ್ಸ್ ಗೆರಿಲ್ಲಾ ಲಿಬರೇಷನ್ ಆರ್ಮಿ)ಗೆ ಹಸ್ತಾಂತರಿಸಬೇಕು’ ಎಂದು ಸೂಚಿಸಿದೆ. </p>.<p>ಕದರಿ ಸತ್ಯನಾರಾಯಣ ಅಲಿಯಾಸ್ ಕೋಸಾ ಮತ್ತು ಕಟ್ಟಾ ರಾಮಚಂದ್ರ ರೆಡ್ಡಿ ಅಲಿಯಾಸ್ ವಿಕಲ್ಪ್ ಅವರು ಈ ಕುರಿತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆದರೆ ಈ ಇಬ್ಬರೂ ಛತ್ತೀಸಗಢದಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಮೃತಪಟಿದ್ದಾರೆ. ಅವರು ಸಾವಿಗೂ ಮುನ್ನ ಈ ಹೇಳಿಕೆ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಸಿಪಿಐ ಮಾವೋವಾದಿಗಳ ವಕ್ತಾರ ಮತ್ತು ಪಾಲಿಟ್ಬ್ಯೂರೊ ಸದಸ್ಯ ಅಭಯ್ ಅವರು ಶಸ್ತ್ರಾಸ್ತ್ರಗಳೊಂದಿಗೆ ಶರಣಾಗಲು ಮತ್ತು ಸರ್ಕಾರದ ಜತೆ ಶಾಂತಿ ಮಾತುಕತೆ ನಡೆಸಲು ಇಚ್ಛಿಸಿರುವುದಾಗಿ ಇತ್ತೀಚೆಗೆ ಘೋಷಿಸಿದ್ದನ್ನು ಸಿಪಿಐ ಮಾವೋವಾದಿಗಳ ಕೇಂದ್ರೀಯ ಸಮಿತಿ ಖಂಡಿಸಿದೆ. </p>.<p>ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷದ ಕೇಂದ್ರೀಯ ಸಮಿತಿ ಮತ್ತು ಪಾಲಿಟ್ಬ್ಯೂರೊ, ‘ಅದು ಕೇವಲ ಅಭಯ್ ಅವರ ವೈಯಕ್ತಿಕ ಅಭಿಪ್ರಾಯ. ಅದನ್ನು ನಾವು ತಿರಸ್ಕರಿಸುತ್ತೇವೆ ಮತ್ತು ಸಶಸ್ತ್ರ ಹೋರಾಟ ಮುಂದುವರಿಸುತ್ತೇವೆ’ ಎಂದು ಹೇಳಿದೆ.</p>.<p>‘ಅಭಯ್ ಶರಣಾಗಲು ಬಯಸಿದರೆ, ಅವರು ಮೊದಲು ತಮ್ಮಲ್ಲಿರುವ ಎಲ್ಲ ರೀತಿಯ ಶಸ್ತ್ರಾಸ್ತ್ರಗಳನ್ನು ಸಿಪಿಐ ಮಾವೋವಾದಿಗಳ ಪಿಜಿಎಲ್ಎ (ಪೀಪಲ್ಸ್ ಗೆರಿಲ್ಲಾ ಲಿಬರೇಷನ್ ಆರ್ಮಿ)ಗೆ ಹಸ್ತಾಂತರಿಸಬೇಕು’ ಎಂದು ಸೂಚಿಸಿದೆ. </p>.<p>ಕದರಿ ಸತ್ಯನಾರಾಯಣ ಅಲಿಯಾಸ್ ಕೋಸಾ ಮತ್ತು ಕಟ್ಟಾ ರಾಮಚಂದ್ರ ರೆಡ್ಡಿ ಅಲಿಯಾಸ್ ವಿಕಲ್ಪ್ ಅವರು ಈ ಕುರಿತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆದರೆ ಈ ಇಬ್ಬರೂ ಛತ್ತೀಸಗಢದಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಮೃತಪಟಿದ್ದಾರೆ. ಅವರು ಸಾವಿಗೂ ಮುನ್ನ ಈ ಹೇಳಿಕೆ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>