ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರಾಳ’ ಕಾನೂನು ರದ್ದು: ಸಿಪಿಎಂ ಭರವಸೆ

Published 4 ಏಪ್ರಿಲ್ 2024, 14:14 IST
Last Updated 4 ಏಪ್ರಿಲ್ 2024, 14:14 IST
ಅಕ್ಷರ ಗಾತ್ರ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ (ಯುಎಪಿಎ), ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಂತಹ (ಪಿಎಂಎಲ್‌ಎ) ಕಠಿಣ ಕಾನೂನುಗಳನ್ನು ರದ್ದುಗೊಳಿಸುವ ಭರವಸೆ ನೀಡಿರುವ ಚುನಾವಣಾ ಪ್ರಣಾಳಿಕೆಯನ್ನು ಸಿಪಿಎಂ ಗುರುವಾರ ಬಿಡುಗಡೆ ಮಾಡಿದೆ.

ಬಿಜೆಪಿಯನ್ನು ಸೋಲಿಸಿ ಎಡರಂಗವನ್ನು ಬಲಪಡಿಸಬೇಕು ಮತ್ತು ಕೇಂದ್ರದಲ್ಲಿ ಪರ್ಯಾಯ ಜಾತ್ಯತೀತ ಸರ್ಕಾರ ಆಡಳಿತಕ್ಕೆ ಬರುವುದನ್ನು ಖಾತರಿಪಡಿಸಿಕೊಳ್ಳಿ ಎಂದು ಸಿಪಿಎಂ ಜನರಿಗೆ ಕರೆ ನೀಡಿದೆ.

ನರೇಗಾ ಯೋಜನೆಯನ್ನು ಸದೃಢಗೊಳಿಸುವ ಮತ್ತು ಪೌರತ್ವ ನೋಂದಣಿ ಕಾಯ್ದೆಯನ್ನು (ಸಿಎಎ) ರದ್ದುಗೊಳಿಸುವ ಭರವಸೆಯನ್ನೂ ಪ್ರಣಾಳಿಕೆಯಲ್ಲಿ ನೀಡಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT