<p><strong>ತಿರುವನಂತಪುರ</strong>: 2005ರಲ್ಲಿ ಕೇರಳದ ಕಣ್ಣೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಧ್ಯಮ ಕಾರ್ಯದರ್ಶಿಯ ಸಹೋದರ ಹಾಗೂ ಸಿಪಿಎಂ ಕಾರ್ಯಕರ್ತರು ಸೇರಿದಂತೆ 9 ಮಂದಿ ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ. </p>.<p>ಥಲಸ್ಸೆರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಟಿ ನಿಸಾರ್ ಅಹಮ್ಮದ್ ಅವರು ಶುಕ್ರವಾರ ಈ ತೀರ್ಪು ನೀಡಿದ್ದು, ಮಾ.24ರಂದು ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗುವುದು. </p>.<p>ಎಳಂಬಿಯಾಲಿ ಸೂರಜ್ ಅವರು ಸಿಪಿಎಂ ತೊರೆದು ಬಿಜೆಪಿ ಸೇರಿದ ಕಾರಣ ರಾಜಕೀಯ ದ್ವೇಷದಿಂದ ಅವರನ್ನು ಆ.7 2005ರಂದು ಹತ್ಯೆ ಮಾಡಲಾಯಿತು. </p>.<p>9 ಮಂದಿ ತಪ್ಪಿತಸ್ಥರಲ್ಲಿ ಒಬ್ಬರಾಗಿರುವ ಟಿ.ಕೆ ರಾಜೇಶ್, 2012ರಲ್ಲಿ ನಡೆದ ಸಿಪಿಎಂ ನಾಯಕ ಟಿ.ಪಿ ಚಂದ್ರಶೇಖರನ್ ಅವರ ಹತ್ಯೆ ಪ್ರಕರಣದ ಅಪರಾಧಿಯೂ ಆಗಿದ್ದಾರೆ. </p>.<p>ಪ್ರಕರಣದ ವಿಚಾರಣೆ ಅವಧಿಯಲ್ಲಿ ಇಬ್ಬರು ಆರೋಪಿಗಳು ಮೃತಪಟ್ಟಿದ್ದು, ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: 2005ರಲ್ಲಿ ಕೇರಳದ ಕಣ್ಣೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಧ್ಯಮ ಕಾರ್ಯದರ್ಶಿಯ ಸಹೋದರ ಹಾಗೂ ಸಿಪಿಎಂ ಕಾರ್ಯಕರ್ತರು ಸೇರಿದಂತೆ 9 ಮಂದಿ ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ. </p>.<p>ಥಲಸ್ಸೆರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಟಿ ನಿಸಾರ್ ಅಹಮ್ಮದ್ ಅವರು ಶುಕ್ರವಾರ ಈ ತೀರ್ಪು ನೀಡಿದ್ದು, ಮಾ.24ರಂದು ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗುವುದು. </p>.<p>ಎಳಂಬಿಯಾಲಿ ಸೂರಜ್ ಅವರು ಸಿಪಿಎಂ ತೊರೆದು ಬಿಜೆಪಿ ಸೇರಿದ ಕಾರಣ ರಾಜಕೀಯ ದ್ವೇಷದಿಂದ ಅವರನ್ನು ಆ.7 2005ರಂದು ಹತ್ಯೆ ಮಾಡಲಾಯಿತು. </p>.<p>9 ಮಂದಿ ತಪ್ಪಿತಸ್ಥರಲ್ಲಿ ಒಬ್ಬರಾಗಿರುವ ಟಿ.ಕೆ ರಾಜೇಶ್, 2012ರಲ್ಲಿ ನಡೆದ ಸಿಪಿಎಂ ನಾಯಕ ಟಿ.ಪಿ ಚಂದ್ರಶೇಖರನ್ ಅವರ ಹತ್ಯೆ ಪ್ರಕರಣದ ಅಪರಾಧಿಯೂ ಆಗಿದ್ದಾರೆ. </p>.<p>ಪ್ರಕರಣದ ವಿಚಾರಣೆ ಅವಧಿಯಲ್ಲಿ ಇಬ್ಬರು ಆರೋಪಿಗಳು ಮೃತಪಟ್ಟಿದ್ದು, ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>