<p><strong>ಕಣ್ಣೂರು (ಕೇರಳ)</strong>: ಪ್ರತಿಭಟನೆ ವೇಳೆ ಬಾಂಬ್ ಎಸೆದು ಪೊಲೀಸ್ ಅಧಿಕಾರಿಗಳ ಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಸ್ಥಳೀಯ ಚುನಾವಣೆಗಳಿಗೆ ಸ್ಪರ್ಧಿಸಿದ್ದ ಸಿಪಿಎಂ ಅಭ್ಯರ್ಥಿ ಸೇರಿ ಇಬ್ಬರಿಗೆ ದಕ್ಷಿಣ ಕೇರಳ ಜಿಲ್ಲೆಯ ನ್ಯಾಯಾಲಯವು 10 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.</p>.<p>ತಳಿಪರಂಬ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು, ಸಿಪಿಎಂ ಅಭ್ಯರ್ಥಿ ವಿ.ಕೆ.ನಿಶಾದ್ (35) ಮತ್ತು ಟಿ.ಸಿ.ವಿ ನಂದಕುಮಾರ್ (35) ಅವರಿಗೆ ಈ ಶಿಕ್ಷೆಯ ಜೊತೆಗೆ ₹2.5 ಲಕ್ಷ ದಂಡವನ್ನೂ ವಿಧಿಸಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿದೆ.</p>.<p>ಸಿಪಿಎಂ ನಾಯಕ ಪಿ.ಜಯರಾಜನ್ ಅವರ ಬಂಧನದ ವಿರುದ್ಧ 2012 ಆಗಸ್ಟ್ 1ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ನಾಡ ಬಾಂಬ್ ಎಸೆಯಲಾಗಿತ್ತು.</p>.<p>ನಿಶಾದ್ ಅವರು ನಾಮಪತ್ರ ಸಲ್ಲಿಸುವಾಗ ನ್ಯಾಯಾಲಯದ ತೀರ್ಪು ಪ್ರಕಟವಾಗಿರಲಿಲ್ಲ. ಹೀಗಾಗಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನಿನ ಯಾವುದೇ ಅಡ್ಡಿ ಇಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು (ಕೇರಳ)</strong>: ಪ್ರತಿಭಟನೆ ವೇಳೆ ಬಾಂಬ್ ಎಸೆದು ಪೊಲೀಸ್ ಅಧಿಕಾರಿಗಳ ಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಸ್ಥಳೀಯ ಚುನಾವಣೆಗಳಿಗೆ ಸ್ಪರ್ಧಿಸಿದ್ದ ಸಿಪಿಎಂ ಅಭ್ಯರ್ಥಿ ಸೇರಿ ಇಬ್ಬರಿಗೆ ದಕ್ಷಿಣ ಕೇರಳ ಜಿಲ್ಲೆಯ ನ್ಯಾಯಾಲಯವು 10 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.</p>.<p>ತಳಿಪರಂಬ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು, ಸಿಪಿಎಂ ಅಭ್ಯರ್ಥಿ ವಿ.ಕೆ.ನಿಶಾದ್ (35) ಮತ್ತು ಟಿ.ಸಿ.ವಿ ನಂದಕುಮಾರ್ (35) ಅವರಿಗೆ ಈ ಶಿಕ್ಷೆಯ ಜೊತೆಗೆ ₹2.5 ಲಕ್ಷ ದಂಡವನ್ನೂ ವಿಧಿಸಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿದೆ.</p>.<p>ಸಿಪಿಎಂ ನಾಯಕ ಪಿ.ಜಯರಾಜನ್ ಅವರ ಬಂಧನದ ವಿರುದ್ಧ 2012 ಆಗಸ್ಟ್ 1ರಂದು ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ನಾಡ ಬಾಂಬ್ ಎಸೆಯಲಾಗಿತ್ತು.</p>.<p>ನಿಶಾದ್ ಅವರು ನಾಮಪತ್ರ ಸಲ್ಲಿಸುವಾಗ ನ್ಯಾಯಾಲಯದ ತೀರ್ಪು ಪ್ರಕಟವಾಗಿರಲಿಲ್ಲ. ಹೀಗಾಗಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನಿನ ಯಾವುದೇ ಅಡ್ಡಿ ಇಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>