<p><strong>ಮುಂಬೈ</strong>: ತಂತ್ರಜ್ಞಾನವು ಜನರ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಸಂಗೀತ, ನೃತ್ಯ ಮತ್ತು ಕಥೆ ಹೇಳುವಿಕೆಯಂತಹ ಕಲಾ ಪ್ರಕಾರಗಳನ್ನು ಬಳಸಿಕೊಂಡು ಹೆಚ್ಚು ಸಹಾನುಭೂತಿಯ ಭವಿಷ್ಯವನ್ನು ನಿರ್ಮಿಸುವಂತೆ ಕಂಟೆಂಟ್ ಕ್ರಿಯೇಟರ್ಗಳಿಗೆ ಒತ್ತಾಯಿಸಿದ್ದಾರೆ.</p><p>ಜನರನ್ನು ರೋಬೋಟ್ಗಳಾಗಿ ಪರಿವರ್ತಿಸಬಾರದು. ನಾವು ಅವರನ್ನು ಹೆಚ್ಚು ಸಂವೇದನಾಶೀಲರನ್ನಾಗಿ ಮಾಡಬೇಕಾಗಿದೆ ಎಂದು ಮೋದಿ ಮೊದಲ ವಿಶ್ವ ಶ್ರವಣ ದೃಶ್ಯ ಮತ್ತು ಮನರಂಜನಾ ಶೃಂಗಸಭೆ (ವೇವ್ಸ್) ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.</p><p>ಪ್ರಪಂಚದಾದ್ಯಂತದ ಕಂಟೆಂಟ್ ಸೃಷ್ಟಿಕರ್ತರು, ನವೋದ್ಯಮಗಳು, ಉದ್ಯಮದ ಪ್ರಮುಖರು ಮತ್ತು ನೀತಿ ನಿರೂಪಕರನ್ನು ಒಟ್ಟುಗೂಡಿಸುವ ಮೂಲಕ ಭಾರತವನ್ನು ಮಾಧ್ಯಮ, ಮನರಂಜನೆ ಮತ್ತು ಡಿಜಿಟಲ್ ನಾವೀನ್ಯತೆಗಾಗಿ ಜಾಗತಿಕ ಕೇಂದ್ರವಾಗಿ ಇರಿಸಲು ವೇವ್ಸ್ ಅನ್ನು ವೇದಿಕೆಯಾಗಿ ಕಲ್ಪಿಸಲಾಗಿದೆ.</p><p>ಆನ್ಲೈನ್ ಕಂಟೆಂಟ್ ಕುರಿತು ತೀವ್ರ ಚರ್ಚೆಯ ಹಿನ್ನೆಲೆಯಲ್ಲಿ ಮತ್ತು ಅದನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ರೂಪಿಸಲು ಸುಪ್ರೀಂ ಕೋರ್ಟ್ ಸರ್ಕಾರವನ್ನು ಕೇಳಿರುವ ಹಿನ್ನೆಲೆಯಲ್ಲಿ ಪ್ರಧಾನಿ ಈ ಹೇಳಿಕೆಗಳನ್ನು ನೀಡಿದ್ದಾರೆ.</p><p>ಭಾರತವು ಚಲನಚಿತ್ರ ನಿರ್ಮಾಣ, ಡಿಜಿಟಲ್ ಕಂಟೆಂಟ್, ಗೇಮಿಂಗ್, ಫ್ಯಾಷನ್, ಸಂಗೀತ ಮತ್ತು ನೇರಪ್ರಸಾರದ ಸಂಗೀತ ಕಛೇರಿಗಳಿಗೆ ಅಂತರರಾಷ್ಟ್ರೀಯ ಕೇಂದ್ರವಾಗಿ ಹೊರಹೊಮ್ಮುತ್ತಿರುವ ಈ ಸಮಯದಲ್ಲಿ ವೇವ್ಸ್ ಜಾಗತಿಕ ಪ್ರತಿಭಾ ವೇದಿಕೆಯಾಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮೋದಿ ಹೇಳಿದರು.</p><p>ಭಾರತವು ಇನ್ನೂ ಹೆಚ್ಚಿನದನ್ನು ನೀಡಲು ಸಿದ್ಧವಿರುವಾಗ, ಜಗತ್ತು ಕಥೆ ಹೇಳುವ ಹೊಸ ಮಾರ್ಗಗಳನ್ನು ಹುಡುಕುತ್ತಿರುವಾಗ ‘ಭಾರತದಲ್ಲಿ ರಚಿಸಿ, ಜಗತ್ತಿಗಾಗಿ ರಚಿಸಿ’ಎಂಬುದನ್ನು ಹೇಳಲು ಇದು ಸರಿಯಾದ ಸಮಯ ಎಂದು ಅವರು ಹೇಳಿದ್ದಾರೆ.</p><p>ಸೃಜನಶೀಲ ಜಗತ್ತು ಮಾನವರಲ್ಲಿ ಕರುಣೆಯನ್ನು ಬೆಳೆಸುವ ಮತ್ತು ಸಾಮಾಜಿಕ ಪ್ರಜ್ಞೆಯನ್ನು ಆಳಗೊಳಿಸುವ ಶಕ್ತಿಯನ್ನು ಹೊಂದಿದೆ ಎಂದು ಹೇಳಿದ್ದಾರೆ,</p><p>ರೋಬೋಟ್ ರೀತಿಯ ಜನರನ್ನು ಸೃಷ್ಟಿಸುವುದು ನಮ್ಮ ಗುರಿಯಲ್ಲ, ಹೆಚ್ಚಿನ ಸಂವೇದನೆ, ಭಾವನಾತ್ಮಕ ಆಳ ಮತ್ತು ಬೌದ್ಧಿಕ ಶ್ರೀಮಂತಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಪೋಷಿಸುವುದು ನಮ್ಮ ಆದ್ಯತೆ ಎಂದಿದ್ದಾರೆ.</p><p>ಯುವ ಪೀಳಿಗೆಯನ್ನು ವಿಭಜಕ ಮತ್ತು ಹಾನಿಕಾರಕ ಸಿದ್ಧಾಂತಗಳಿಂದ ರಕ್ಷಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಸಾಂಸ್ಕೃತಿಕ ಸಮಗ್ರತೆಯನ್ನು ಎತ್ತಿಹಿಡಿಯಲು ಮತ್ತು ಸಕಾರಾತ್ಮಕ ಮೌಲ್ಯಗಳನ್ನು ಹುಟ್ಟುಹಾಕಲು WAVES ಒಂದು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ತಂತ್ರಜ್ಞಾನವು ಜನರ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಸಂಗೀತ, ನೃತ್ಯ ಮತ್ತು ಕಥೆ ಹೇಳುವಿಕೆಯಂತಹ ಕಲಾ ಪ್ರಕಾರಗಳನ್ನು ಬಳಸಿಕೊಂಡು ಹೆಚ್ಚು ಸಹಾನುಭೂತಿಯ ಭವಿಷ್ಯವನ್ನು ನಿರ್ಮಿಸುವಂತೆ ಕಂಟೆಂಟ್ ಕ್ರಿಯೇಟರ್ಗಳಿಗೆ ಒತ್ತಾಯಿಸಿದ್ದಾರೆ.</p><p>ಜನರನ್ನು ರೋಬೋಟ್ಗಳಾಗಿ ಪರಿವರ್ತಿಸಬಾರದು. ನಾವು ಅವರನ್ನು ಹೆಚ್ಚು ಸಂವೇದನಾಶೀಲರನ್ನಾಗಿ ಮಾಡಬೇಕಾಗಿದೆ ಎಂದು ಮೋದಿ ಮೊದಲ ವಿಶ್ವ ಶ್ರವಣ ದೃಶ್ಯ ಮತ್ತು ಮನರಂಜನಾ ಶೃಂಗಸಭೆ (ವೇವ್ಸ್) ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.</p><p>ಪ್ರಪಂಚದಾದ್ಯಂತದ ಕಂಟೆಂಟ್ ಸೃಷ್ಟಿಕರ್ತರು, ನವೋದ್ಯಮಗಳು, ಉದ್ಯಮದ ಪ್ರಮುಖರು ಮತ್ತು ನೀತಿ ನಿರೂಪಕರನ್ನು ಒಟ್ಟುಗೂಡಿಸುವ ಮೂಲಕ ಭಾರತವನ್ನು ಮಾಧ್ಯಮ, ಮನರಂಜನೆ ಮತ್ತು ಡಿಜಿಟಲ್ ನಾವೀನ್ಯತೆಗಾಗಿ ಜಾಗತಿಕ ಕೇಂದ್ರವಾಗಿ ಇರಿಸಲು ವೇವ್ಸ್ ಅನ್ನು ವೇದಿಕೆಯಾಗಿ ಕಲ್ಪಿಸಲಾಗಿದೆ.</p><p>ಆನ್ಲೈನ್ ಕಂಟೆಂಟ್ ಕುರಿತು ತೀವ್ರ ಚರ್ಚೆಯ ಹಿನ್ನೆಲೆಯಲ್ಲಿ ಮತ್ತು ಅದನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ರೂಪಿಸಲು ಸುಪ್ರೀಂ ಕೋರ್ಟ್ ಸರ್ಕಾರವನ್ನು ಕೇಳಿರುವ ಹಿನ್ನೆಲೆಯಲ್ಲಿ ಪ್ರಧಾನಿ ಈ ಹೇಳಿಕೆಗಳನ್ನು ನೀಡಿದ್ದಾರೆ.</p><p>ಭಾರತವು ಚಲನಚಿತ್ರ ನಿರ್ಮಾಣ, ಡಿಜಿಟಲ್ ಕಂಟೆಂಟ್, ಗೇಮಿಂಗ್, ಫ್ಯಾಷನ್, ಸಂಗೀತ ಮತ್ತು ನೇರಪ್ರಸಾರದ ಸಂಗೀತ ಕಛೇರಿಗಳಿಗೆ ಅಂತರರಾಷ್ಟ್ರೀಯ ಕೇಂದ್ರವಾಗಿ ಹೊರಹೊಮ್ಮುತ್ತಿರುವ ಈ ಸಮಯದಲ್ಲಿ ವೇವ್ಸ್ ಜಾಗತಿಕ ಪ್ರತಿಭಾ ವೇದಿಕೆಯಾಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮೋದಿ ಹೇಳಿದರು.</p><p>ಭಾರತವು ಇನ್ನೂ ಹೆಚ್ಚಿನದನ್ನು ನೀಡಲು ಸಿದ್ಧವಿರುವಾಗ, ಜಗತ್ತು ಕಥೆ ಹೇಳುವ ಹೊಸ ಮಾರ್ಗಗಳನ್ನು ಹುಡುಕುತ್ತಿರುವಾಗ ‘ಭಾರತದಲ್ಲಿ ರಚಿಸಿ, ಜಗತ್ತಿಗಾಗಿ ರಚಿಸಿ’ಎಂಬುದನ್ನು ಹೇಳಲು ಇದು ಸರಿಯಾದ ಸಮಯ ಎಂದು ಅವರು ಹೇಳಿದ್ದಾರೆ.</p><p>ಸೃಜನಶೀಲ ಜಗತ್ತು ಮಾನವರಲ್ಲಿ ಕರುಣೆಯನ್ನು ಬೆಳೆಸುವ ಮತ್ತು ಸಾಮಾಜಿಕ ಪ್ರಜ್ಞೆಯನ್ನು ಆಳಗೊಳಿಸುವ ಶಕ್ತಿಯನ್ನು ಹೊಂದಿದೆ ಎಂದು ಹೇಳಿದ್ದಾರೆ,</p><p>ರೋಬೋಟ್ ರೀತಿಯ ಜನರನ್ನು ಸೃಷ್ಟಿಸುವುದು ನಮ್ಮ ಗುರಿಯಲ್ಲ, ಹೆಚ್ಚಿನ ಸಂವೇದನೆ, ಭಾವನಾತ್ಮಕ ಆಳ ಮತ್ತು ಬೌದ್ಧಿಕ ಶ್ರೀಮಂತಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಪೋಷಿಸುವುದು ನಮ್ಮ ಆದ್ಯತೆ ಎಂದಿದ್ದಾರೆ.</p><p>ಯುವ ಪೀಳಿಗೆಯನ್ನು ವಿಭಜಕ ಮತ್ತು ಹಾನಿಕಾರಕ ಸಿದ್ಧಾಂತಗಳಿಂದ ರಕ್ಷಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಸಾಂಸ್ಕೃತಿಕ ಸಮಗ್ರತೆಯನ್ನು ಎತ್ತಿಹಿಡಿಯಲು ಮತ್ತು ಸಕಾರಾತ್ಮಕ ಮೌಲ್ಯಗಳನ್ನು ಹುಟ್ಟುಹಾಕಲು WAVES ಒಂದು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>