<p>ಹರಿದ್ವಾರ : ನಿರಂತರ ಮಳೆಯಿಂದಾಗಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ನಿರಂತರ ಮಳೆಗೆ ಅಲವಾಲ್ಪುರ್ ಗ್ರಾಮದ ಸ್ಮಶಾನವೊಂದು ಸೋಲಾನಿ ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ ಎಂದು ಹೇಳಲಾಗಿದೆ.</p><p>ಸೋಲನ್ ಜಿಲ್ಲೆ ಮೂಲಕ ಹಾದು ಹೋಗುವ ಗಂಗಾ ನದಿ ನೀರು ಹೆಚ್ಚಳದಿಂದ ನದಿ ದಡದಲ್ಲಿ ವಾಸಿಸುವ ಜನರಿಗೆ ಜಾಗರೂಕರಾಗಿರಲು ಅಧಿಕಾರಿಗಳು ತಿಳಿಸಿದ್ದಾರೆ. ತಗ್ಗು ಪ್ರದೇಶಗಳ ಮನೆಗಳು, ಹೊಲಗಳು ನೀರಿನಲ್ಲಿ ಮುಳುಗುವ ಸಾಧ್ಯತೆ ಇದೆ. </p>.ಅಪಾಯದ ಮಟ್ಟ ತಲುಪಿದ ಗಂಗಾ ನದಿ: ಋಷಿಕೇಷದಲ್ಲಿ ರಿವರ್ ರ್ಯಾಫ್ಟಿಂಗ್ ಸ್ಥಗಿತ.<p>ಅಪಾಯ ಮಟ್ಟದಲ್ಲಿರುವ ಜಿಲ್ಲೆಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದು ಸುರಕ್ಷತೆಗೆ ಸೂಚಿಸಲಾಗಿದೆ ಎಂದು ನೀರಾವರಿ ಇಲಾಖೆಯ ಅಧಿಕಾರಿಯಾದ ಭರತ್ ಭೂಷಣ್ ಶರ್ಮಾ ಹೇಳಿದ್ದಾರೆ. </p>.ಗಂಗಾ ನದಿ ಪ್ರವಾಹ: ಪಟ್ನಾ ಗ್ರಾಮೀಣ ಪ್ರದೇಶದ 76 ಶಾಲೆಗಳು ಆ.31ರ ವರೆಗೆ ಬಂದ್.<p>ಹರಿದ್ವಾರದಲ್ಲಿ ಭಾರಿ ಮಳೆಯಿಂದ ನದಿಗಳು ಹಾಗೂ ಹೊಳೆಗಳು ತುಂಬಿ ಹರಿಯುತ್ತಿವೆ. ಕೆಲವು ನಗರ ಪ್ರದೇಶಗಳಲ್ಲಿ 2-3 ಅಡಿ ಎತ್ತರದಷ್ಟು ನೀರು ತುಂಬಿ ಜನ ಜೀವನ ಅಸ್ತವ್ಯಸ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿದ್ವಾರ : ನಿರಂತರ ಮಳೆಯಿಂದಾಗಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ನಿರಂತರ ಮಳೆಗೆ ಅಲವಾಲ್ಪುರ್ ಗ್ರಾಮದ ಸ್ಮಶಾನವೊಂದು ಸೋಲಾನಿ ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ ಎಂದು ಹೇಳಲಾಗಿದೆ.</p><p>ಸೋಲನ್ ಜಿಲ್ಲೆ ಮೂಲಕ ಹಾದು ಹೋಗುವ ಗಂಗಾ ನದಿ ನೀರು ಹೆಚ್ಚಳದಿಂದ ನದಿ ದಡದಲ್ಲಿ ವಾಸಿಸುವ ಜನರಿಗೆ ಜಾಗರೂಕರಾಗಿರಲು ಅಧಿಕಾರಿಗಳು ತಿಳಿಸಿದ್ದಾರೆ. ತಗ್ಗು ಪ್ರದೇಶಗಳ ಮನೆಗಳು, ಹೊಲಗಳು ನೀರಿನಲ್ಲಿ ಮುಳುಗುವ ಸಾಧ್ಯತೆ ಇದೆ. </p>.ಅಪಾಯದ ಮಟ್ಟ ತಲುಪಿದ ಗಂಗಾ ನದಿ: ಋಷಿಕೇಷದಲ್ಲಿ ರಿವರ್ ರ್ಯಾಫ್ಟಿಂಗ್ ಸ್ಥಗಿತ.<p>ಅಪಾಯ ಮಟ್ಟದಲ್ಲಿರುವ ಜಿಲ್ಲೆಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಪಡೆದು ಸುರಕ್ಷತೆಗೆ ಸೂಚಿಸಲಾಗಿದೆ ಎಂದು ನೀರಾವರಿ ಇಲಾಖೆಯ ಅಧಿಕಾರಿಯಾದ ಭರತ್ ಭೂಷಣ್ ಶರ್ಮಾ ಹೇಳಿದ್ದಾರೆ. </p>.ಗಂಗಾ ನದಿ ಪ್ರವಾಹ: ಪಟ್ನಾ ಗ್ರಾಮೀಣ ಪ್ರದೇಶದ 76 ಶಾಲೆಗಳು ಆ.31ರ ವರೆಗೆ ಬಂದ್.<p>ಹರಿದ್ವಾರದಲ್ಲಿ ಭಾರಿ ಮಳೆಯಿಂದ ನದಿಗಳು ಹಾಗೂ ಹೊಳೆಗಳು ತುಂಬಿ ಹರಿಯುತ್ತಿವೆ. ಕೆಲವು ನಗರ ಪ್ರದೇಶಗಳಲ್ಲಿ 2-3 ಅಡಿ ಎತ್ತರದಷ್ಟು ನೀರು ತುಂಬಿ ಜನ ಜೀವನ ಅಸ್ತವ್ಯಸ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>