ಆರ್ಎಸ್ಎಸ್ನ ಹಿರಿಯ ನಾಯಕ ಧನಂಜಯ್ ಸಿಂಗ್, ರಾಂಚಿಯಲ್ಲಿರುವ ಧೋನಿ ಮನೆಗೆ ಭೇಟಿ ನೀಡಿ ಆಹ್ವಾನ ಪತ್ರಿಕೆ ನೀಡಿದರು. ಬಿಜೆಪಿ ಸಂಘಟನಾ ಕಾರ್ಯದರ್ಶಿ ಕರ್ಮವೀರ ಸಿಂಗ್ ಈ ವೇಳೆ ಇದ್ದರು.
‘ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪರವಾಗಿ ಜ.22ರಂದು ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ನಾವು ಧೋನಿಯವರಿಗೆ ಆಹ್ವಾನ ಪತ್ರಿಕೆ ನೀಡಿದ್ದೇವೆ’ ಎಂದು ಧನಂಜಯ್ ಸಿಂಗ್ ಹೇಳಿದರು.