ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಚನೆ: ಕ್ರಿಕೆಟರ್‌ ಎಸ್‌. ಶ್ರೀಶಾಂತ್‌ ವಿರುದ್ಧ ದೂರು ದಾಖಲು

Published 23 ನವೆಂಬರ್ 2023, 10:10 IST
Last Updated 23 ನವೆಂಬರ್ 2023, 10:10 IST
ಅಕ್ಷರ ಗಾತ್ರ

ತಿರುವನಂತಪುರಂ: ಕ್ರಿಕೆಟರ್‌ ಶ್ರೀಶಾಂತ್‌ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ. 

ಸರೀಶ್ ಗೋಪಾಲನ್ ಎಂಬುವರು ನೀಡಿದ ದೂರಿನ ಮೇರೆಗೆ ಶ್ರೀಶಾಂತ್‌ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.  

ಕ್ರೀಡಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿ 2019ರಲ್ಲಿ ಸುಮಾರು ₹ 18 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು  ಸರೀಶ್ ಗೋಪಾಲನ್ ದೂರಿನಲ್ಲಿ ತಿಳಿಸಿದ್ದಾರೆ.

ನನಗೆ ಅಕಾಡೆಮಿಯಲ್ಲಿ ಪಾಲುದಾರರಾಗಲು ಅವಕಾಶ ನೀಡಿದ್ದರು. ನಂತರದ ದಿನಗಳಲ್ಲಿ ನನ್ನಿಂದ ಹಣ ಪಡೆದರು ಎಂದು ಅವರು ದೂರಿದ್ದಾರೆ. 

ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಶ್ರೀಶಾಂತ್ ಅವರನ್ನು ಮೂರನೇ ಆರೋಪಿ ಎಂದು ಹೆಸರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT