<p><strong>ನವದೆಹಲಿ:</strong> ದೇಶದ ವಿವಿಧ ಹೈಕೋರ್ಟ್ಗಳಲ್ಲಿ ಸುಮಾರು ಏಳು ಲಕ್ಷ ಕ್ರಿಮಿನಲ್ ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರುಗಳನ್ನು ಕೇಂದ್ರ ಸರ್ಕಾರವು ತ್ವರಿತವಾಗಿ ಅಂತಿಮಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p><p>ನ್ಯಾ. ಅಭಯ್ ಎಸ್. ಒಕಾ ಮತ್ತು ನ್ಯಾ. ಉಜ್ಜಲ್ ಭುಯಾನ್ ಅವರಿದ್ದ ಪೀಠವು ಈ ನಿರ್ದೇಶನ ನೀಡಿದೆ.</p><p>ಅಲಹಾಬಾದ್ ನ್ಯಾಯಾಲಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಪ್ರಕರಣಗಳು ಬಾಕಿ ಇವೆ. ಇಲ್ಲಿಗೆ 160 ನ್ಯಾಯಮೂರ್ತಿಗಳ ಮಂಜೂರಾತಿ ಇದ್ದು, ಸದ್ಯ 79 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.</p><p>‘ಕೊಲಿಜಿಯಂ ಶಿಫಾರಸುಗಳನ್ನು ತ್ವರಿತವಾಗಿ ಅಂತಿಮಗೊಳಿಸುವ ಖಾತ್ರಿಯನ್ನು ಕೇಂದ್ರ ಸರ್ಕಾರ ನೀಡಬೇಕು. ಬಾಕಿ ಇರುವ ಶಿಫಾರಸುಗಳ ಪಟ್ಟಿಯನ್ನು ಕೇಂದ್ರ ಸರ್ಕಾರವು ಬೇಗನೆ ಅಂತಿಮಗೊಳಿಸಲಿದೆ ಎಂಬ ನಂಬಿಕೆ ಮತ್ತು ಭರವಸೆ ಇದೆ’ ಎಂದು ಪೀಠ ಹೇಳಿದೆ.</p><ul><li><p>ಬಾಂಬೆ ಹೈಕೋರ್ಟ್ನಲ್ಲಿ ಮಂಜೂರಾದ ಹುದ್ದೆಗಳು 94; ಸದ್ಯ ಇರುವ ನ್ಯಾಯಮೂರ್ತಿಗಳ ಸಂಖ್ಯೆ 66</p></li><li><p>ಕಲ್ಕತ್ತ ಹೈಕೋರ್ಟ್ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 72; ಹಾಲಿ ಇರುವುದು 44</p></li><li><p>ದೆಹಲಿ ಹೈಕೋರ್ಟ್ಗೆ ಅಗತ್ಯ ಇರುವುದು 60 ನ್ಯಾಯಮೂರ್ತಿಗಳು; ಸದ್ಯ ಇರುವುದು 41 ಮಾತ್ರ</p></li></ul><p>ಹೈಕೋರ್ಟ್ಗಳ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಕೊಲಿಜಿಯಂ ಶಿಫಾರಸು ಮಾಡಿದ ಹೆಸರುಗಳನ್ನು ನ್ಯಾಯಾಲಯದ ಅಂತರ್ಜಾಲ ಪುಟದಲ್ಲಿ ಪ್ರಕಟಿಸಲಾಗಿದೆ. ಇಂಥ ಹಲವು ಶಿಫಾರಸುಗಳು ಕೇಂದ್ರದ ಮುಂದಿದ್ದು, ಅವುಗಳು ಅಂತಿಮಗೊಳ್ಳಬೇಕಿದೆ.</p><p>2023ರಲ್ಲಿ ನಾಲ್ಕು ಶಿಫಾರಸುಗಳು, 2024ರಲ್ಲಿ 13 ಶಿಫಾರಸುಗಳು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಕಳುಹಿಸಿತ್ತು. ಆದರೆ ಈವರೆಗೂ ಅವು ಅಂತಿಮಗೊಂಡಿಲ್ಲ. 2024ರ ಸೆ. 24ರಂದು ಕಳುಹಿಸಿದ ಶಿಫಾರಸು ಕೂಡಾ ಕೇಂದ್ರದ ಮುಂದಿದೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ವಿವಿಧ ಹೈಕೋರ್ಟ್ಗಳಲ್ಲಿ ಸುಮಾರು ಏಳು ಲಕ್ಷ ಕ್ರಿಮಿನಲ್ ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರುಗಳನ್ನು ಕೇಂದ್ರ ಸರ್ಕಾರವು ತ್ವರಿತವಾಗಿ ಅಂತಿಮಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p><p>ನ್ಯಾ. ಅಭಯ್ ಎಸ್. ಒಕಾ ಮತ್ತು ನ್ಯಾ. ಉಜ್ಜಲ್ ಭುಯಾನ್ ಅವರಿದ್ದ ಪೀಠವು ಈ ನಿರ್ದೇಶನ ನೀಡಿದೆ.</p><p>ಅಲಹಾಬಾದ್ ನ್ಯಾಯಾಲಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಪ್ರಕರಣಗಳು ಬಾಕಿ ಇವೆ. ಇಲ್ಲಿಗೆ 160 ನ್ಯಾಯಮೂರ್ತಿಗಳ ಮಂಜೂರಾತಿ ಇದ್ದು, ಸದ್ಯ 79 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.</p><p>‘ಕೊಲಿಜಿಯಂ ಶಿಫಾರಸುಗಳನ್ನು ತ್ವರಿತವಾಗಿ ಅಂತಿಮಗೊಳಿಸುವ ಖಾತ್ರಿಯನ್ನು ಕೇಂದ್ರ ಸರ್ಕಾರ ನೀಡಬೇಕು. ಬಾಕಿ ಇರುವ ಶಿಫಾರಸುಗಳ ಪಟ್ಟಿಯನ್ನು ಕೇಂದ್ರ ಸರ್ಕಾರವು ಬೇಗನೆ ಅಂತಿಮಗೊಳಿಸಲಿದೆ ಎಂಬ ನಂಬಿಕೆ ಮತ್ತು ಭರವಸೆ ಇದೆ’ ಎಂದು ಪೀಠ ಹೇಳಿದೆ.</p><ul><li><p>ಬಾಂಬೆ ಹೈಕೋರ್ಟ್ನಲ್ಲಿ ಮಂಜೂರಾದ ಹುದ್ದೆಗಳು 94; ಸದ್ಯ ಇರುವ ನ್ಯಾಯಮೂರ್ತಿಗಳ ಸಂಖ್ಯೆ 66</p></li><li><p>ಕಲ್ಕತ್ತ ಹೈಕೋರ್ಟ್ನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 72; ಹಾಲಿ ಇರುವುದು 44</p></li><li><p>ದೆಹಲಿ ಹೈಕೋರ್ಟ್ಗೆ ಅಗತ್ಯ ಇರುವುದು 60 ನ್ಯಾಯಮೂರ್ತಿಗಳು; ಸದ್ಯ ಇರುವುದು 41 ಮಾತ್ರ</p></li></ul><p>ಹೈಕೋರ್ಟ್ಗಳ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಕೊಲಿಜಿಯಂ ಶಿಫಾರಸು ಮಾಡಿದ ಹೆಸರುಗಳನ್ನು ನ್ಯಾಯಾಲಯದ ಅಂತರ್ಜಾಲ ಪುಟದಲ್ಲಿ ಪ್ರಕಟಿಸಲಾಗಿದೆ. ಇಂಥ ಹಲವು ಶಿಫಾರಸುಗಳು ಕೇಂದ್ರದ ಮುಂದಿದ್ದು, ಅವುಗಳು ಅಂತಿಮಗೊಳ್ಳಬೇಕಿದೆ.</p><p>2023ರಲ್ಲಿ ನಾಲ್ಕು ಶಿಫಾರಸುಗಳು, 2024ರಲ್ಲಿ 13 ಶಿಫಾರಸುಗಳು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಕಳುಹಿಸಿತ್ತು. ಆದರೆ ಈವರೆಗೂ ಅವು ಅಂತಿಮಗೊಂಡಿಲ್ಲ. 2024ರ ಸೆ. 24ರಂದು ಕಳುಹಿಸಿದ ಶಿಫಾರಸು ಕೂಡಾ ಕೇಂದ್ರದ ಮುಂದಿದೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>