'ನದಿಯ ಮಧ್ಯಕ್ಕೆ ತಲುಪುತ್ತಿದ್ದಂತೆ, ಕಾಲಿನಲ್ಲಿ ತೀವ್ರವಾದ ನೋವು ಕಾಣಿಡಿಕೊಂಡಿತು. ಹಿಂತಿರುಗಿ ನೋಡಿದಾಗ ಮೊಸಳೆ ನನ್ನ ಕಾಲನ್ನು ಕಚ್ಚಿರುವುದು ಕಂಡಿತು. ನದಿ ದಾಟುವುದಕ್ಕೆ ಹಿಡಿದುಕೊಂಡಿದ್ದ ದೊಣ್ಣೆಯಿಂದ ಮೊಸಳೆಯ ತಲೆ ಮೇಲೆ ನಿರಂತರವಾಗಿ ಹಲ್ಲೆ ಮಾಡಿದೆ. ಅದು ಕಾಲನ್ನು ಬಿಡುವವರೆಗೂ ಹೊಡೆದೆ. ಅಷ್ಟರಲ್ಲಾಗಲೇ ಕಾಲಿನ ಸ್ವಲ್ಪ ಭಾಗವನ್ನು ತಿಂದಿತ್ತು. ನಂತರ ಕೂಡಲೇ ದಂಡೆಯತ್ತ ಓಡಿದೆ. ಸಹಾಯಕ್ಕಾಗಿಕೂಗಿಕೊಂಡೆ' ಎಂದು ಮೊಸಳೆಯಿಂದ ಪಾರಾಗಿ ಬಂದ ಅನುಭವ ಹಂಚಿಕೊಂಡಿದ್ದಾರೆ.